3:40 PM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ವೈದ್ಯೋ ನಾರಾಯಣೋ ಹರಿಃ: ಇದಕ್ಕೆ ತಕ್ಕ ಹೆಸರು ಮಂಗಳಾ ಆಸ್ಪತ್ರೆಯ ಸಂಸ್ಥಾಪಕ ಡಾ. ಗಣಪತಿ

01/07/2021, 11:57

ಏಪ್ರಿಲ್ 28, 2021ರ ಬುಧವಾರ ರಾತ್ರಿ 11ರ ಸಮಯ. ಸುಮಾರು ದಿನಗಳಿಂದ ಜ್ವರ ಮೈಕೈನೋವು ಎಂದು ಚಡಪಡಿಸುತ್ತಿದ್ದ ನನ್ನ ಪತ್ನಿ ಹಾಗೂ ಮಗ ಇಬ್ಬರಿಗೂ ಅಂದು ತಡೆಯಲಾರದ ವೇದನೆ. ಇದು ಕೋವಿಡ್ ಎಂದು ಆಗಲೇ ತಿಳಿದಿದ್ದ ನಮಗೆ ಗಾಬರಿ. ಮನೆಯಲ್ಲಿ ಚಿಕ್ಕಮಕ್ಕಳು.  ಸಣ್ಣ ಊರುಗಳಲ್ಲಿ ಸರಿಯಾದ ವ್ಯವಸ್ಥೆ ಇರದ ಕಾರಣ, ದೂರದ ಮಂಗಳೂರು/ ಮಣಿಪಾಲವೇ ಗತಿ. ಆಗ ನಮಗೆ ಸಹಾಯಕ್ಕೆ ಬಂದವರು ಮಂಗಳೂರಿನ ಪ್ರಸಿದ್ಧ, ಮಂಗಳ ಆಸ್ಪತ್ರೆ ಮತ್ತು ಕಿಡ್ನಿ ಫೌಂಡೇಶನ್ ನ ಸಂಸ್ಥಾಪಕರಾದ ಡಾ। ಗಣಪತಿ. ವಿಷಯ ತಿಳಿದ ಕೂಡಲೇ ತಮ್ಮ ಸಂಸ್ಥೆಯ ಅಂಬುಲೆನ್ಸ್ ಅನ್ನು ಕಾರ್ಕಳದಲ್ಲಿರುವ ನಮ್ಮ ಮನೆಗೆ ಕಳುಹಿಸಿ ಆಸ್ಪತ್ರೆಗೆ ದಾಖಲಿಸಿ ನುರಿತ ವೈದ್ಯರ ತಂಡದ ಸಹಾಯದೊಂದಿಗೆ ಸೂಕ್ತ ಚಿಕಿತ್ಸೆಯನ್ನು ಕೊಟ್ಟರು. ತೀವ್ರ ನಿಗಾ ವಹಿಸಿದ ಪರಿಣಾಮ, ಕೇವಲ ಎರಡೇ ದಿನಗಳಲ್ಲಿ ಸೋಂಕು ಕಡಿಮೆಯಾಯಿತು. ನನ್ನಂತಹ  ಸಾವಿರಾರು ಫಲಾನುಭವಿಗಳ ಭಾವನೆಗಳ ಸಂಕೇತವಾಗಿರುವ ಈ ನಮನಗಳು ಡಾ. ಗಣಪತಿ ಹಾಗೂ ಅವರ ಎಲ್ಲ ಸಿಬ್ಬಂದಿ ವರ್ಗಕ್ಕೆ  ಹಾಗೂ ಸಮಸ್ತ ವೈದ್ಯ ಲೋಕಕ್ಕೆ ಸಮರ್ಪಿತ. 

ವೈದ್ಯೋ ನಾರಾಯಣೋ ಹರಿಃ 

ಇತ್ತೀಚಿನ ಸುದ್ದಿ

ಜಾಹೀರಾತು