9:08 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ವೈದ್ಯರ ನಿರ್ಲಕ್ಷ್ಯ: ಹೆರಿಗೆ ವೇಳೆ ತಾಯಿ-ಮಗು ಸಾವು: ಸಾರ್ವಜನಿಕರಿಂದ ಭಾರಿ ಪ್ರತಿಭಟನೆ

12/12/2021, 13:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವೈದ್ಯರ ನಿರ್ಲಕ್ಷ್ಯದಿಂದ ತುಂಬು ಗರ್ಭಿಣಿಯೊಬ್ಬರು ಮೃತಪಟ್ಟಿದ್ದು, ತಾಯಿ ಹೊಟ್ಟೆಯಲ್ಲೇ ಹಸುಗೂಸು ಕೂಡ ಸಾವನ್ನಪ್ಪಿದ ದಾರುಣ ಘಟನೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಆಸ್ಪತ್ರೆಯಲ್ಲಿ ನಡೆದಿದೆ.


ಎನ್. ಆರ್. ಪುರ ತಾಲೂಕಿನ ಬಾಳೆಹೊನ್ನೂರು ನಿವಾಸಿ ಶ್ವೇತಾ (27) ಮೃತ ದುರ್ದೈವಿ. ವೈದ್ಯ ಎಲ್ಡೋಸ್ ಅವರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಆರೋಪಿಸಲಾಗಿದೆ. ಇವರು ಎನ್.ಆರ್.ಪುರ, ಶೃಂಗೇರಿಯಲ್ಲಿ ಅಮಾನತ್ತಾಗಿದ್ದ ವೈದ್ಯರು ಎನ್ನಲಾಗಿದೆ.


ಪೋಷಕರು ಗರ್ಭಿಣಿಯನ್ನ ಚಿಕ್ಕಮಗಳೂರಿಗೆ ಕರೆದೊಯ್ಯಲು ಮುಂದಾಗಿದ್ದರು. ಅಷ್ಟರಲ್ಲಿ ವೈದ್ಯರು ನಾನೇ ಹೆರಿಗೆ ಮಾಡಿಸುತ್ತೇನೆಂದು ತಡೆದರು. ಇದೀಗ ವೈದ್ಯರ ನಿರ್ಲಕ್ಷ್ಯದಿಂದ ತಾಯಿ-ಮಗು ಸಾವು ಸಂಭವಿಸಿದೆ ಎಂದು ಸಂಬಂಧಿಕರು ಹಾಗೂ ಸ್ಥಳೀಯರು ಆರೋಪಿಸಿದ್ದಾರೆ.


ವೈದ್ಯರ ವಿರುದ್ಧ ಆಸ್ಪತ್ರೆ ಮುಂಭಾಗ ಸ್ಥಳಿಯರ ಪ್ರತಿಭಟನೆ ನಡೆಸಿದ್ದಾರೆ.


ಆಸ್ಪತ್ರೆಗೆ ಮುತ್ತಿಗೆ ಹಾಕಲು ಸ್ಥಳಿಯರು ಯತ್ನಿಸಿದಾಗ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು