7:27 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ವೈಜ್ಞಾನಿಕ ಅಧ್ಯಯನ ಪ್ರವಾಸ: ವಿಜ್ಞಾನ ಕಲಿಕೆಗೆ ಪೂರಕ

06/12/2021, 15:15

ವಿದ್ಯಾರ್ಥಿಗಳಲ್ಲಿ ಜ್ಞಾನ, ಕೌಶಲ್ಯ, ಅಂತರ್ ಶಿಸ್ತು, ಬೌದ್ಧಿಕ ಮತ್ತು ಮಾನಸಿಕ ವಿಕಾಸ ಹೊಂದಲು ಶಾಲಾ ಶಿಕ್ಷಣ ಅತಿ ಅವಶ್ಯಕವಾಗಿದೆ. ನಾಲ್ಕು ಗೋಡೆಗಳ ಶಾಲಾ ಪರಿಸರದಲ್ಲಿ ಶಿಕ್ಷಕರು ,ಪಠ್ಯಪುಸ್ತಕ ಗಳ ಬೋಧನೆಯ ನಡುವೆ ವಿದ್ಯಾರ್ಥಿಗಳು ಅತ್ಯಂತ ಆಸಕ್ತಿದಾಯಕವಾಗಿ ಕಲಿಯುವ ವಿಷಯ ವಿಜ್ಞಾನ.

ವಿಜ್ಞಾನವು ಸತ್ಯಾಂಶಗಳ ಬಗೆಗಿನ ಕ್ರಮಬದ್ಧವಾದ ಅಧ್ಯಯನವಾಗಿದೆ. ವಿಶ್ವದ ಬಗೆಗಿನ ಜ್ಞಾನವನ್ನು ನೀಡುವ ಮೂಲಕ ವಿಶ್ವಾಸಾರ್ಹತೆ ,ತಾರ್ಕಿಕತೆ, ಸಂಶೋಧನೆ, ಸತ್ಯ, ನಿಖರತೆ, ವೈಜ್ಞಾನಿಕ ಮನೋಭಾವನೆ ,ಬೌದ್ಧಿಕ ವಿಕಾಸ ,ಅನ್ವೇಷಣಾ ಭಾವನೆ, ಹೊಂದಾಣಿಕೆ ,ಸಹಕಾರ ಮೊದಲಾದವುಗಳನ್ನು ವಿಜ್ಞಾನ ಅಧ್ಯಯನದಿಂದ ವಿಧ್ಯಾರ್ಥಿಗಳು ಗಳಿಸಿಕೊಳ್ಳಬಹುದು. 

ದೇಶ ಸುತ್ತಿ ನೋಡು ಕೋಶ ಓದಿ ನೋಡು ಎಂಬ ಮಾತಿನಂತೆ ವಿದ್ಯಾರ್ಥಿಗಳು ಪಠ್ಯಪುಸ್ತಕದಲ್ಲಿ ಕಲಿತಿರುವ ವಿಷಯವನ್ನು ಪ್ರತ್ಯಕ್ಷವಾಗಿ ಕಂಡು ಅನುಭವಿಸಿದಾಗ ಸಿಗುವ ಜ್ಞಾನಕ್ಕೆ ಸಮಾನವಾದುದು ಬೇರೊಂದು ಇಲ್ಲ.

ವಿಜ್ಞಾನದ ಕೆಲವೊಂದು ವಿಷಯಗಳನ್ನು ತರಗತಿಗಳಲ್ಲಿ ವಿವರಿಸಲು ಹಾಗೂ ಕಲ್ಪನೆಯನ್ನು ಮೂಡಿಸಲು ಅಸಾಧ್ಯವಾಗಿರುವಂತಹ


ಸಂದರ್ಭದಲ್ಲಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಲು ಮತ್ತು ವಿಜ್ಞಾನದ ಬಗ್ಗೆ ಆಸಕ್ತಿ ಯನ್ನು ಮೂಡಿಸಲು ವೈಜ್ಞಾನಿಕ ಅಧ್ಯಯನ ಪ್ರವಾಸ ಅತ್ಯಂತ ಪರಿಣಾಮಕಾರಿಯಾಗಿರುತ್ತದೆ. ತರಗತಿ ಕಲಿಕೆಗೆ ಪೂರಕವಾಗುವಂತೆ ಜೊತೆಗೆ  ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವಂತೆ ಹಾಗೂ ನೈಜ ಜೀವನದಲ್ಲಿ ಸ್ವಾವಲಂಬಿಯಾಗುವ ಅಂತಹ ವಾತಾವರಣವನ್ನು ನಿರ್ಮಿಸಲು ವೈಜ್ಞಾನಿಕ ಅಧ್ಯಯನ ಪ್ರವಾಸ ಉತ್ತಮ ಸಾಧನವಾಗಿದೆ. ಅತ್ಯಂತ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಪಡೆಯುತ್ತಿರುವ ಹಾಗೂ ವಿಜ್ಞಾನಕ್ಕೆ ಅನುಕೂಲಕರವಾದ ವಾತಾವರಣ ಕಡಿಮೆ ಇರುವ ಶಾಲೆಗಳಲ್ಲಿ ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿಯನ್ನು ಮೂಡಿಸುವುದು ಕೂಡಾ ಸವಾಲಿನ ಸಂಗತಿಯಾಗಿದೆ… ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸಿ ಮಕ್ಕಳಲ್ಲಿ ಹೊಸ ಕನಸನ್ನು ಬಿತ್ತಿ, ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸುವ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ವೈಜ್ಞಾನಿಕ ಅಧ್ಯಯನ ಪ್ರವಾಸ ಸಹಕಾರಿಯಾಗಬೇಕೆಂಬುದೇ ನಮ್ಮ ಆಶಯ.

✍️

ಇತ್ತೀಚಿನ ಸುದ್ದಿ

ಜಾಹೀರಾತು