1:11 PM Friday20 - September 2024
ಬ್ರೇಕಿಂಗ್ ನ್ಯೂಸ್
ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ

ಇತ್ತೀಚಿನ ಸುದ್ದಿ

ವೈಜ್ಞಾನಿಕ ಅಧ್ಯಯನ ಪ್ರವಾಸ: ವಿಜ್ಞಾನ ಕಲಿಕೆಗೆ ಪೂರಕ

06/12/2021, 15:15

ವಿದ್ಯಾರ್ಥಿಗಳಲ್ಲಿ ಜ್ಞಾನ, ಕೌಶಲ್ಯ, ಅಂತರ್ ಶಿಸ್ತು, ಬೌದ್ಧಿಕ ಮತ್ತು ಮಾನಸಿಕ ವಿಕಾಸ ಹೊಂದಲು ಶಾಲಾ ಶಿಕ್ಷಣ ಅತಿ ಅವಶ್ಯಕವಾಗಿದೆ. ನಾಲ್ಕು ಗೋಡೆಗಳ ಶಾಲಾ ಪರಿಸರದಲ್ಲಿ ಶಿಕ್ಷಕರು ,ಪಠ್ಯಪುಸ್ತಕ ಗಳ ಬೋಧನೆಯ ನಡುವೆ ವಿದ್ಯಾರ್ಥಿಗಳು ಅತ್ಯಂತ ಆಸಕ್ತಿದಾಯಕವಾಗಿ ಕಲಿಯುವ ವಿಷಯ ವಿಜ್ಞಾನ.

ವಿಜ್ಞಾನವು ಸತ್ಯಾಂಶಗಳ ಬಗೆಗಿನ ಕ್ರಮಬದ್ಧವಾದ ಅಧ್ಯಯನವಾಗಿದೆ. ವಿಶ್ವದ ಬಗೆಗಿನ ಜ್ಞಾನವನ್ನು ನೀಡುವ ಮೂಲಕ ವಿಶ್ವಾಸಾರ್ಹತೆ ,ತಾರ್ಕಿಕತೆ, ಸಂಶೋಧನೆ, ಸತ್ಯ, ನಿಖರತೆ, ವೈಜ್ಞಾನಿಕ ಮನೋಭಾವನೆ ,ಬೌದ್ಧಿಕ ವಿಕಾಸ ,ಅನ್ವೇಷಣಾ ಭಾವನೆ, ಹೊಂದಾಣಿಕೆ ,ಸಹಕಾರ ಮೊದಲಾದವುಗಳನ್ನು ವಿಜ್ಞಾನ ಅಧ್ಯಯನದಿಂದ ವಿಧ್ಯಾರ್ಥಿಗಳು ಗಳಿಸಿಕೊಳ್ಳಬಹುದು. 

ದೇಶ ಸುತ್ತಿ ನೋಡು ಕೋಶ ಓದಿ ನೋಡು ಎಂಬ ಮಾತಿನಂತೆ ವಿದ್ಯಾರ್ಥಿಗಳು ಪಠ್ಯಪುಸ್ತಕದಲ್ಲಿ ಕಲಿತಿರುವ ವಿಷಯವನ್ನು ಪ್ರತ್ಯಕ್ಷವಾಗಿ ಕಂಡು ಅನುಭವಿಸಿದಾಗ ಸಿಗುವ ಜ್ಞಾನಕ್ಕೆ ಸಮಾನವಾದುದು ಬೇರೊಂದು ಇಲ್ಲ.

ವಿಜ್ಞಾನದ ಕೆಲವೊಂದು ವಿಷಯಗಳನ್ನು ತರಗತಿಗಳಲ್ಲಿ ವಿವರಿಸಲು ಹಾಗೂ ಕಲ್ಪನೆಯನ್ನು ಮೂಡಿಸಲು ಅಸಾಧ್ಯವಾಗಿರುವಂತಹ


ಸಂದರ್ಭದಲ್ಲಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಲು ಮತ್ತು ವಿಜ್ಞಾನದ ಬಗ್ಗೆ ಆಸಕ್ತಿ ಯನ್ನು ಮೂಡಿಸಲು ವೈಜ್ಞಾನಿಕ ಅಧ್ಯಯನ ಪ್ರವಾಸ ಅತ್ಯಂತ ಪರಿಣಾಮಕಾರಿಯಾಗಿರುತ್ತದೆ. ತರಗತಿ ಕಲಿಕೆಗೆ ಪೂರಕವಾಗುವಂತೆ ಜೊತೆಗೆ  ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವಂತೆ ಹಾಗೂ ನೈಜ ಜೀವನದಲ್ಲಿ ಸ್ವಾವಲಂಬಿಯಾಗುವ ಅಂತಹ ವಾತಾವರಣವನ್ನು ನಿರ್ಮಿಸಲು ವೈಜ್ಞಾನಿಕ ಅಧ್ಯಯನ ಪ್ರವಾಸ ಉತ್ತಮ ಸಾಧನವಾಗಿದೆ. ಅತ್ಯಂತ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಪಡೆಯುತ್ತಿರುವ ಹಾಗೂ ವಿಜ್ಞಾನಕ್ಕೆ ಅನುಕೂಲಕರವಾದ ವಾತಾವರಣ ಕಡಿಮೆ ಇರುವ ಶಾಲೆಗಳಲ್ಲಿ ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿಯನ್ನು ಮೂಡಿಸುವುದು ಕೂಡಾ ಸವಾಲಿನ ಸಂಗತಿಯಾಗಿದೆ… ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸಿ ಮಕ್ಕಳಲ್ಲಿ ಹೊಸ ಕನಸನ್ನು ಬಿತ್ತಿ, ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸುವ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ವೈಜ್ಞಾನಿಕ ಅಧ್ಯಯನ ಪ್ರವಾಸ ಸಹಕಾರಿಯಾಗಬೇಕೆಂಬುದೇ ನಮ್ಮ ಆಶಯ.

✍️

ಇತ್ತೀಚಿನ ಸುದ್ದಿ

ಜಾಹೀರಾತು