6:13 AM Wednesday2 - July 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:…

ಇತ್ತೀಚಿನ ಸುದ್ದಿ

ವೈಜ್ಞಾನಿಕ ಅಧ್ಯಯನ ಪ್ರವಾಸ: ವಿಜ್ಞಾನ ಕಲಿಕೆಗೆ ಪೂರಕ

06/12/2021, 15:15

ವಿದ್ಯಾರ್ಥಿಗಳಲ್ಲಿ ಜ್ಞಾನ, ಕೌಶಲ್ಯ, ಅಂತರ್ ಶಿಸ್ತು, ಬೌದ್ಧಿಕ ಮತ್ತು ಮಾನಸಿಕ ವಿಕಾಸ ಹೊಂದಲು ಶಾಲಾ ಶಿಕ್ಷಣ ಅತಿ ಅವಶ್ಯಕವಾಗಿದೆ. ನಾಲ್ಕು ಗೋಡೆಗಳ ಶಾಲಾ ಪರಿಸರದಲ್ಲಿ ಶಿಕ್ಷಕರು ,ಪಠ್ಯಪುಸ್ತಕ ಗಳ ಬೋಧನೆಯ ನಡುವೆ ವಿದ್ಯಾರ್ಥಿಗಳು ಅತ್ಯಂತ ಆಸಕ್ತಿದಾಯಕವಾಗಿ ಕಲಿಯುವ ವಿಷಯ ವಿಜ್ಞಾನ.

ವಿಜ್ಞಾನವು ಸತ್ಯಾಂಶಗಳ ಬಗೆಗಿನ ಕ್ರಮಬದ್ಧವಾದ ಅಧ್ಯಯನವಾಗಿದೆ. ವಿಶ್ವದ ಬಗೆಗಿನ ಜ್ಞಾನವನ್ನು ನೀಡುವ ಮೂಲಕ ವಿಶ್ವಾಸಾರ್ಹತೆ ,ತಾರ್ಕಿಕತೆ, ಸಂಶೋಧನೆ, ಸತ್ಯ, ನಿಖರತೆ, ವೈಜ್ಞಾನಿಕ ಮನೋಭಾವನೆ ,ಬೌದ್ಧಿಕ ವಿಕಾಸ ,ಅನ್ವೇಷಣಾ ಭಾವನೆ, ಹೊಂದಾಣಿಕೆ ,ಸಹಕಾರ ಮೊದಲಾದವುಗಳನ್ನು ವಿಜ್ಞಾನ ಅಧ್ಯಯನದಿಂದ ವಿಧ್ಯಾರ್ಥಿಗಳು ಗಳಿಸಿಕೊಳ್ಳಬಹುದು. 

ದೇಶ ಸುತ್ತಿ ನೋಡು ಕೋಶ ಓದಿ ನೋಡು ಎಂಬ ಮಾತಿನಂತೆ ವಿದ್ಯಾರ್ಥಿಗಳು ಪಠ್ಯಪುಸ್ತಕದಲ್ಲಿ ಕಲಿತಿರುವ ವಿಷಯವನ್ನು ಪ್ರತ್ಯಕ್ಷವಾಗಿ ಕಂಡು ಅನುಭವಿಸಿದಾಗ ಸಿಗುವ ಜ್ಞಾನಕ್ಕೆ ಸಮಾನವಾದುದು ಬೇರೊಂದು ಇಲ್ಲ.

ವಿಜ್ಞಾನದ ಕೆಲವೊಂದು ವಿಷಯಗಳನ್ನು ತರಗತಿಗಳಲ್ಲಿ ವಿವರಿಸಲು ಹಾಗೂ ಕಲ್ಪನೆಯನ್ನು ಮೂಡಿಸಲು ಅಸಾಧ್ಯವಾಗಿರುವಂತಹ


ಸಂದರ್ಭದಲ್ಲಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಲು ಮತ್ತು ವಿಜ್ಞಾನದ ಬಗ್ಗೆ ಆಸಕ್ತಿ ಯನ್ನು ಮೂಡಿಸಲು ವೈಜ್ಞಾನಿಕ ಅಧ್ಯಯನ ಪ್ರವಾಸ ಅತ್ಯಂತ ಪರಿಣಾಮಕಾರಿಯಾಗಿರುತ್ತದೆ. ತರಗತಿ ಕಲಿಕೆಗೆ ಪೂರಕವಾಗುವಂತೆ ಜೊತೆಗೆ  ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವಂತೆ ಹಾಗೂ ನೈಜ ಜೀವನದಲ್ಲಿ ಸ್ವಾವಲಂಬಿಯಾಗುವ ಅಂತಹ ವಾತಾವರಣವನ್ನು ನಿರ್ಮಿಸಲು ವೈಜ್ಞಾನಿಕ ಅಧ್ಯಯನ ಪ್ರವಾಸ ಉತ್ತಮ ಸಾಧನವಾಗಿದೆ. ಅತ್ಯಂತ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಪಡೆಯುತ್ತಿರುವ ಹಾಗೂ ವಿಜ್ಞಾನಕ್ಕೆ ಅನುಕೂಲಕರವಾದ ವಾತಾವರಣ ಕಡಿಮೆ ಇರುವ ಶಾಲೆಗಳಲ್ಲಿ ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿಯನ್ನು ಮೂಡಿಸುವುದು ಕೂಡಾ ಸವಾಲಿನ ಸಂಗತಿಯಾಗಿದೆ… ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸಿ ಮಕ್ಕಳಲ್ಲಿ ಹೊಸ ಕನಸನ್ನು ಬಿತ್ತಿ, ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸುವ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ವೈಜ್ಞಾನಿಕ ಅಧ್ಯಯನ ಪ್ರವಾಸ ಸಹಕಾರಿಯಾಗಬೇಕೆಂಬುದೇ ನಮ್ಮ ಆಶಯ.

✍️

ಇತ್ತೀಚಿನ ಸುದ್ದಿ

ಜಾಹೀರಾತು