9:57 AM Tuesday26 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ವೈಜ್ಞಾನಿಕ ಅಧ್ಯಯನ ಪ್ರವಾಸ: ವಿಜ್ಞಾನ ಕಲಿಕೆಗೆ ಪೂರಕ

06/12/2021, 15:15

ವಿದ್ಯಾರ್ಥಿಗಳಲ್ಲಿ ಜ್ಞಾನ, ಕೌಶಲ್ಯ, ಅಂತರ್ ಶಿಸ್ತು, ಬೌದ್ಧಿಕ ಮತ್ತು ಮಾನಸಿಕ ವಿಕಾಸ ಹೊಂದಲು ಶಾಲಾ ಶಿಕ್ಷಣ ಅತಿ ಅವಶ್ಯಕವಾಗಿದೆ. ನಾಲ್ಕು ಗೋಡೆಗಳ ಶಾಲಾ ಪರಿಸರದಲ್ಲಿ ಶಿಕ್ಷಕರು ,ಪಠ್ಯಪುಸ್ತಕ ಗಳ ಬೋಧನೆಯ ನಡುವೆ ವಿದ್ಯಾರ್ಥಿಗಳು ಅತ್ಯಂತ ಆಸಕ್ತಿದಾಯಕವಾಗಿ ಕಲಿಯುವ ವಿಷಯ ವಿಜ್ಞಾನ.

ವಿಜ್ಞಾನವು ಸತ್ಯಾಂಶಗಳ ಬಗೆಗಿನ ಕ್ರಮಬದ್ಧವಾದ ಅಧ್ಯಯನವಾಗಿದೆ. ವಿಶ್ವದ ಬಗೆಗಿನ ಜ್ಞಾನವನ್ನು ನೀಡುವ ಮೂಲಕ ವಿಶ್ವಾಸಾರ್ಹತೆ ,ತಾರ್ಕಿಕತೆ, ಸಂಶೋಧನೆ, ಸತ್ಯ, ನಿಖರತೆ, ವೈಜ್ಞಾನಿಕ ಮನೋಭಾವನೆ ,ಬೌದ್ಧಿಕ ವಿಕಾಸ ,ಅನ್ವೇಷಣಾ ಭಾವನೆ, ಹೊಂದಾಣಿಕೆ ,ಸಹಕಾರ ಮೊದಲಾದವುಗಳನ್ನು ವಿಜ್ಞಾನ ಅಧ್ಯಯನದಿಂದ ವಿಧ್ಯಾರ್ಥಿಗಳು ಗಳಿಸಿಕೊಳ್ಳಬಹುದು. 

ದೇಶ ಸುತ್ತಿ ನೋಡು ಕೋಶ ಓದಿ ನೋಡು ಎಂಬ ಮಾತಿನಂತೆ ವಿದ್ಯಾರ್ಥಿಗಳು ಪಠ್ಯಪುಸ್ತಕದಲ್ಲಿ ಕಲಿತಿರುವ ವಿಷಯವನ್ನು ಪ್ರತ್ಯಕ್ಷವಾಗಿ ಕಂಡು ಅನುಭವಿಸಿದಾಗ ಸಿಗುವ ಜ್ಞಾನಕ್ಕೆ ಸಮಾನವಾದುದು ಬೇರೊಂದು ಇಲ್ಲ.

ವಿಜ್ಞಾನದ ಕೆಲವೊಂದು ವಿಷಯಗಳನ್ನು ತರಗತಿಗಳಲ್ಲಿ ವಿವರಿಸಲು ಹಾಗೂ ಕಲ್ಪನೆಯನ್ನು ಮೂಡಿಸಲು ಅಸಾಧ್ಯವಾಗಿರುವಂತಹ


ಸಂದರ್ಭದಲ್ಲಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಲು ಮತ್ತು ವಿಜ್ಞಾನದ ಬಗ್ಗೆ ಆಸಕ್ತಿ ಯನ್ನು ಮೂಡಿಸಲು ವೈಜ್ಞಾನಿಕ ಅಧ್ಯಯನ ಪ್ರವಾಸ ಅತ್ಯಂತ ಪರಿಣಾಮಕಾರಿಯಾಗಿರುತ್ತದೆ. ತರಗತಿ ಕಲಿಕೆಗೆ ಪೂರಕವಾಗುವಂತೆ ಜೊತೆಗೆ  ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವಂತೆ ಹಾಗೂ ನೈಜ ಜೀವನದಲ್ಲಿ ಸ್ವಾವಲಂಬಿಯಾಗುವ ಅಂತಹ ವಾತಾವರಣವನ್ನು ನಿರ್ಮಿಸಲು ವೈಜ್ಞಾನಿಕ ಅಧ್ಯಯನ ಪ್ರವಾಸ ಉತ್ತಮ ಸಾಧನವಾಗಿದೆ. ಅತ್ಯಂತ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಪಡೆಯುತ್ತಿರುವ ಹಾಗೂ ವಿಜ್ಞಾನಕ್ಕೆ ಅನುಕೂಲಕರವಾದ ವಾತಾವರಣ ಕಡಿಮೆ ಇರುವ ಶಾಲೆಗಳಲ್ಲಿ ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿಯನ್ನು ಮೂಡಿಸುವುದು ಕೂಡಾ ಸವಾಲಿನ ಸಂಗತಿಯಾಗಿದೆ… ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸಿ ಮಕ್ಕಳಲ್ಲಿ ಹೊಸ ಕನಸನ್ನು ಬಿತ್ತಿ, ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸುವ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ವೈಜ್ಞಾನಿಕ ಅಧ್ಯಯನ ಪ್ರವಾಸ ಸಹಕಾರಿಯಾಗಬೇಕೆಂಬುದೇ ನಮ್ಮ ಆಶಯ.

✍️

ಇತ್ತೀಚಿನ ಸುದ್ದಿ

ಜಾಹೀರಾತು