1:28 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯ ಬೆಳೆಸಿಕೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

22/11/2024, 19:39

ತುಮಕೂರು(reporterkarnataka.com): ಡಾಕ್ಟರ್ ಓದಿರ್ತಾರೆ, ಎಂಜಿನಿಯರಿಂಗ್ ಓದಿರ್ತಾರೆ. ಆದರೆ ಮೌಡ್ಯ, ಕಂದಾಚಾರ ಬಿಡೋದೇ ಇಲ್ಲ. ಇಂಥಾ ಶಿಕ್ಷಣ ಬೇಕಾ? ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ತುಮಕೂರಿನ ಸಿದ್ಧಾರ್ಥ ಎಜುಕೇಷನ್ ಸೊಸೈಟಿಯ ಕ್ವೆಸ್ಟ್ ಶಿಕ್ಷಣ ಅಕಾಡೆಮಿಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಬಸವಣ್ಣನವರು ಕರ್ಮ‌ ಸಿದ್ಧಾಂತ ತಿರಸ್ಕರಿಸಿದ್ದರು. ಈಗ ಬಸವಣ್ಣನವರ ಹೆಸರಲ್ಲೇ ಕರ್ಮಸಿದ್ಧಾಂತ ಪಾಲಿಸುವವರು ಇದ್ದಾರೆ. ನಮ್ಮ ವಿಕಾಸ ಆಗಲು, ಸ್ವಾಭಿಮಾನಿಗಳಾಗಲು ಶಿಕ್ಷಣ ಅತ್ಯಗತ್ಯ. ಬಹಳ ಮಂದಿ ಶಿಕ್ಷಿಣ ಪಡೆದಿರುತ್ತಾರೆ, ಆದರೆ ಅವರಲ್ಲಿ ಸಾಮಾಜಿಕ ಸ್ಪಂದನೆ, ಮಾನವೀಯ ಸ್ಪಂದನೆ ಇರುವುದಿಲ್ಲ. ಶಿಕ್ಷಣ ಕಲಿತೂ ಜಾತಿವಾದಿಗಳಾದರೆ, ಮನುಷ್ಯ ತಾರತಮ್ಯ ಪಾಲಿಸೋದು ಮಾಡಿದ್ರೆ ಅಂಥಾ ಶಿಕ್ಷಣದಿಂದ ಏನು ಪ್ರಯೋಜನ ಎಂದು ಮುಖ್ಯಮಂತ್ರಿ ಪ್ರಶ್ನಿಸಿದರು. ಶಿಕ್ಷಣ ಪ್ರತಿಯೊಬ್ಬರ ಹಕ್ಕು. ಈ ಹಕ್ಕು ಸುಮ್ಮನೆ ಬರಲಿಲ್ಲ. ಶೂದ್ರರ ರೀತಿ, ಮಹಿಳೆಯರನ್ನೂ ಸಂಪೂರ್ಣವಾಗಿ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿ ಮೂಲೆಯಲ್ಲಿ ಇರಿಸಲಾಗಿತ್ತು. ಆದರೆ ಈಗ ನಿರಂತರ ಹೋರಾಟದ ಫಲವಾಗಿ ಶಿಕ್ಷಣದ ಹಕ್ಕು ಬಂದಿದೆ. ಈ ಶಿಕ್ಷಣ ವೈಚಾರಿಕವಾಗಿರಬೇಕು, ವೈಜ್ಞಾನಿಕವಾಗಿರಬೇಕು ಎಂದರು.
ಹೇಳಿಕೊಳ್ಳೋಕೆ ವಿದ್ಯಾವಂತರು. ಆದರೆ, ಇವನು ನಮ್ ಜಾತಿಯವನಲ್ಲ, ಓಟು ಹಾಕೋದು ಬೇಡ ಅಂತಾರೆ. ಮತ್ತೆ ಕೆಲವರು ಇವನು ನಮ್ಮ ಜಾತಿಯವನು ಅದಕ್ಕೇ ಓಟು ಹಾಕಿ ಅಂತಾರೆ. ಅವನಿಗೆ ರಾಜಕೀಯ ಪ್ರಜ್ಞೆ , ತಿಳಿವಳಿಕೆ ಇದೆಯೊ, ಇಲ್ವೋ ಗೊತ್ತಿಲ್ಲ. ಕಾಳಜಿ ಇದೆಯೋ, ಇಲ್ವೋ ಗೊತ್ತಿಲ್ಲ. ಜಾತಿ ನೋಡು, ಓಟು ಹಾಕು ಅಷ್ಟೆ. ಇದಕ್ಕೆ ವಿದ್ಯೆ ಕಲಿಬೇಕಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು