12:53 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ವಳಚ್ಚಿಲ್‌ ಶ್ರೀನಿವಾಸ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ವ್ರತಾಚರಣೆ: ಲಕ್ಷ ಪುಷ್ಪಾರ್ಚನೆ

30/12/2025, 18:19

ಮಂಗಳೂರು(reporterkarnataka.com): ಶ್ರೀನಿವಾಸ ವಿಶ್ವವಿದ್ಯಾಲಯದ ಆಶ್ರಯದಲ್ಲಿ ನಗರದ ಹೊರವಲಯದ ವಳಚ್ಚಿಲ್‌ನಲ್ಲಿರುವ ಶ್ರೀನಿವಾಸ ದೇವಸ್ಥಾನ ವೈಕುಂಠದಲ್ಲಿ ಮಂಗಳವಾರ ವೈಕುಂಠ ಏಕಾದಶಿ ಅಂಗವಾಗಿ ಶ್ರೀ ವ್ರತಾಚರಣೆಯನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು.
ಬೆಳಿಗ್ಗೆ 8.45ರಿಂದ 9.00ರವರೆಗೆ ನಿತ್ಯ ಪೂಜೆ ನೆರವೇರಿಸಲಾಯಿತ್ತಲ್ಲದೆ, ಭಜನಾ ಸೇವೆ ನಡೆಯಿತು. ಬೆಳಿಗ್ಗೆ 10 ಗಂಟೆಯಿಂದ ಶ್ರೀ ಶ್ರೀನಿವಾಸ ದೇವರಿಗೆ ಲಕ್ಷ ಪುಷ್ಪಾರ್ಚನೆ ಭಕ್ತಿಭಾವದಿಂದ ನಡೆಯಿತು. ಮಧ್ಯಾಹ್ನ 12.30ಕ್ಕೆ ಮಹಾಪೂಜೆ ನೆರವೇರಿಸಿ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.



ಕಾರ್ಯಕ್ರಮದಲ್ಲಿ ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿ ಡಾ. ಸಿಎ. ಎ. ರಾಘವೇಂದ್ರ ರಾವ್, ಗೌರವಾನ್ವಿತ ಸಹ ಕುಲಾಧಿಪತಿ ಡಾ. ಎ. ಶ್ರೀನಿವಾಸ ರಾವ್, ಆಡಳಿತ ಮಂಡಳಿಯ ಟ್ರಸ್ಟಿ ಸದಸ್ಯರಾದ ಶ್ರೀಮತಿ ಎ. ವಿಜಯಲಕ್ಷ್ಮಿ ಆರ್. ರಾವ್ ಹಾಗೂ ಪ್ರೊ. ಇಆರ್. ಶ್ರೀಮತಿ ಮಿತ್ರಾ ಎಸ್. ರಾವ್, ಶ್ರೀನಿವಾಸ ವಿವಿಯ ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಮುಖ್ಯಸ್ಥರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಧಾರ್ಮಿಕ ಕಾರ್ಯಕ್ರಮದ ಪುಣ್ಯಫಲವನ್ನು ಪಡೆದುಕೊಂಡರು. ಕಾರ್ಯಕ್ರಮವನ್ನು ಶ್ರೀನಿವಾಸ ದೇವಸ್ಥಾನ ವೈಕುಂಠದ ಆಡಳಿತ ಮಂಡಳಿಯವರು ಯಶಸ್ವಿಯಾಗಿ ಆಯೋಜಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು