12:01 AM Tuesday8 - July 2025
ಬ್ರೇಕಿಂಗ್ ನ್ಯೂಸ್
ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ…

ಇತ್ತೀಚಿನ ಸುದ್ದಿ

ವಾಯ್ಸ್ ಆಫ್ ಆರಾಧನಾ ಸ್ಪರ್ಧೆ: ಮೈತ್ರಿ ಮಾದಗುಂಡಿ ಮತ್ತು ಹಾರ್ದಿಕಾ ಜೂನ್ ತಿಂಗಳ ಟಾಪರ್

02/07/2021, 08:06

ಮಂಗಳೂರು(reporterkarnataka news): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದೊಂದಿಗೆ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಜೂನ್  ತಿಂಗಳ ಟಾಪರ್ ಆಗಿ ಬಾಲಪ್ರತಿಭೆ ಮೈತ್ರಿ ಎಸ್. ಮಾದಗುಂಡಿ ಹಾಗೂ ಹಾರ್ದಿಕಾ ಆಯ್ಕೆಗೊಂಡಿದ್ದಾರೆ.

ಬೇಲೂರಿನ ನಾಟ್ಯ ಶಾಂತಲೆ ಎಂದೇ ಖ್ಯಾತಳಾದ ಮೈತ್ರಿ ಎಸ್. ಮಾದಗುಂಡಿ ಡಾ.ಶಿವಕುಮಾರ ಮಾದಗುಂಡಿ ಹಾಗೂ ಶೃತಿ ಶಿವಕುಮಾರ ದಂಪತಿ ಪುತ್ರಿ. ನೃತ್ಯಾಂಜಲಿ ಕಲಾ ನಿಕೇತನ ನೃತ್ಯ ಶಾಲೆಯ ಶೈಲಜಾ ಕುಮಾರ್ ಅವರ ಬಳಿ ಭರತನಾಟ್ಯ ತರಬೇತಿ ಪಡೆಯುತ್ತಿದ್ದಾಳೆ. ಹಾಗೆಯೇ  ಶ್ರೀವಿದ್ಯಾಅವರ ಬಳಿ ಸಂಗೀತ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ. ಈಕೆ ಈಗಾಗಲೇ ವಿಶೇಷ ಸಾಧಕಿಯಾಗಿ ಗುರುತಿಸಿಕೊಂಡಿದ್ದಾಳೆ. ಬಹುಮುಖ ಪ್ರತಿಭೆಯಾದ ಈ ಪುಟ್ಟ ಪೋರಿ ನೃತ್ಯ ಮಾತ್ರವಲ್ಲದೆ ಸಂಗೀತ, ನಟನೆ, ನಿರೂಪಣೆಗೂ ಸೈ. 7ರ ಹರೆಯದ ಈ ಪೋರಿ ಜೂನಿಯರ್ ಬೇಬಿ ಶ್ಯಾಮಿಲಿ ಎಂದೇ ಖ್ಯಾತಿ ಪಡೆದಿದ್ದಾಳೆ. ಈಗಾಗಲೇ ಸುಮಾರು 187 ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ಕೊಟ್ಟಿರುವ ಅಪೂರ್ವ ಬಾಲ ಪ್ರತಿಭೆ. ರಾಜ್ಯ ಮಟ್ಟದಲ್ಲೂ, ರಾಷ್ಟ್ರೀಯ ಮಟ್ಟದಲ್ಲೂ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲೂ ತನ್ನನ್ನು ತಾನು ಗುರುತಿಸಿಕೊಂಡಿದ್ದಾಳೆ.

 ಮೈತ್ರಿ  ಭರತನಾಟ್ಯ, ಪಾಶ್ಚಾತ್ಯ ನೃತ್ಯ, ಜಾನಪದ ನೃತ್ಯ ಮತ್ತು ಸಂಗೀತ ಕ್ಷೇತ್ರಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾಳೆ. ಆಯುಷ್ಯ ಟಿವಿ ಮತ್ತು ಶಂಕರ್ ಟಿವಿ ಆನ್‌ಲೈನ್‌ ಆಡಿಷನ್ ನಲ್ಲೂ ಭಾಗವಹಿಸಿದ್ದಾಳೆ. ದೂರದರ್ಶನದಲ್ಲಿ ಜಾನಪದ ಗೀತೆ ಪ್ರಸಾರಗೊಂಡಿದೆ. ವಾಯ್ಸ್ ಆಫ್ ಆರಾಧನಾ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಪೇಸ್ ಬುಕ್ ಲೈವ್ ನಲ್ಲಿ ಅನೇಕ ಬಾರಿ ಭಾಗವಹಿಸಿದ್ದಾಳೆ.


ನೃತ್ಯಕ್ಕೆ ಆಕೆಗೆ ಹಲವು ಪ್ರಶಸ್ತಿ- ಪುರಸ್ಕಾರಗಳ ಸಂದಾಯವಾಗಿದೆ. ಕರ್ನಾಟಕ  ಅಚಿವರ್ಸ್ ಬುಕ್ ಆಫ್ ರೆಕಾರ್ಡ್  ಈ ಪಟ್ಟಿಗೆ ಸೇರಿದ ಜಿಲ್ಲೆಯ ಪ್ರಪ್ರಥಮ ಭರತನಾಟ್ಯ ಕಲಾವಿದೆ ಈಕೆ ಆಗಿದ್ದಾಳೆ.

ಪದ್ಮಶ್ರೀ ಭಟ್ ಅವರಿಂದ ಸ್ಥಾಪನೆಗೊಂಡ ವಾಯ್ಸ್ ಆಫ್ ಆರಾಧನಾ ಸಂಸ್ಥೆ ಪರಿಚಯವಾಗಿ ಸುಮಾರು ಎರಡು ವರ್ಷಗಳ ಕಾಲ ಪ್ರತಿದಿನ ವಿವಿಧ ವಿಭಿನ್ನವಾದ ಟಾಸ್ಕ್ ಗಳಲ್ಲಿ ತಪ್ಪದೇ ಭಾಗವಹಿಸುತ್ತಾ ಬಂದಿದ್ದಾಳೆ.

ಮಂಗಳೂರಿನ ಹರೇಕಳದ ಹಾರ್ದಿಕಾ ಮಂಗಳೂರಿನ ರಾಮಕೃಷ್ಣ ಹೈಸ್ಕೂಲಿನ 10ನೇ ತರಗತಿ ವಿದ್ಯಾರ್ಥಿನಿ. ಭವನ್ ಕುಮಾರ್ ಹಾಗೂ ಸ್ಫೂರ್ತಿ ದಂಪತಿಯ ಪುತ್ರಿ. ಬಾಲ ಪ್ರತಿಭೆಯಾದ ಈಕೆ ಕೂಡ ಸಂಗೀತ ನೃತ್ಯ ಮತ್ತು ಚಿತ್ರಕಲೆಯಲ್ಲಿ ಎತ್ತಿದ ಕೈ.

ಇತ್ತೀಚಿನ ಸುದ್ದಿ

ಜಾಹೀರಾತು