2:17 AM Wednesday5 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ವಕೀಲ ಕೆ.ಎಸ್. ಎನ್. ರಾಜೇಶ್ ಭಟ್ ಪ್ರಕರಣ ಮುಚ್ಚಿ ಹಾಕಲು ಯತ್ನ; ಎಸ್ ಐ ಸೇರಿ ಇಬ್ಬರ ಅಮಾನತು

22/10/2021, 18:59

ಮಂಗಳೂರು(reporterkarnataka.com): ವಕೀಲ ಕೆ.ಎಸ್. ಎನ್. ರಾಜೇಶ್ ಭಟ್ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ಮಹಿಳಾ ಎಸ್ಐ ಸೇರಿ ಇಬ್ಬರನ್ನು ಸಸ್ಪೆಂಡ್ ಮಾಡಲಾಗಿದೆ.

ಉರ್ವಾ ಠಾಣೆಯ ಎಸ್ಐ ಶ್ರೀಕಲಾ ಮತ್ತು ಪ್ರಮೋದ್ ಅಮಾನತುಗೊಂಡವರು. ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸಿದ  ಠಾಣೆಯ ಸಿಬ್ಬಂದಿಗಳನ್ನು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಕರ್ತವ್ಯದಿಂದ ಅಮಾನತುಗೊಳಿಸಿದ್ದಾರೆ.

ಠಾಣೆಯಲ್ಲಿ  ಸಂಧಾನ ವೇಳೆ ಪವಿತ್ರಾ ಆಚಾರ್ಯ ಬೆದರಿಸಿ ಸಂತ್ರಸ್ತೆಯರಿಂದ ಮುಚ್ಚಳಿಕೆ ಬರೆಸಿ ದ್ದಾರೆ ಎಂದು ಆರೋಪ ಪವಿತ್ರಾ ಆಚಾರ್ಯ ವಿರುದ್ಧ ಕೇಳಿ ಬಂದಿದೆ. ಹೀಗಾಗಿ ಅವರನ್ನು ಬಂಧಿಸಿದ್ದು ಪ್ರಕರಣ ಸಂಬಂಧ ಸಂತ್ರಸ್ತೆಯ ಬಾಯ್ ಫ್ರೆಂಡ್ ಮತ್ತು ಆತನ ತಾಯಿ ಕೂಡ ಅರೆಸ್ಟ್ ಆಗಿದ್ದಾರೆ.

ಲೋಕಾಯುಕ್ತ ಮತ್ತು ಎಸಿಬಿ ವಿಶೇಷ ವಕೀಲರಾದ ಕೆ.ಎಸ್ .ಎನ್ . ರಾಜೇಶ್ ಭಟ್  ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ  ರಾಜೇಶ್  ಅವರ ಕಚೇರಿಯಲ್ಲಿ ಇಂಟರ್ನ್ ಶಿಪ್ ಮಾಡಲು ಬಂದಿದ್ದ ವಿದ್ಯಾರ್ಥಿನಿ ಕಚೇರಿಯಲ್ಲೇ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ದೂರು ನೀಡಿದ್ದಳು.

ಇತ್ತೀಚಿನ ಸುದ್ದಿ

ಜಾಹೀರಾತು