3:55 AM Monday22 - December 2025
ಬ್ರೇಕಿಂಗ್ ನ್ಯೂಸ್
ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ

ಇತ್ತೀಚಿನ ಸುದ್ದಿ

ವಕ್ಫ್ ಬೋರ್ಡ್ ಪ್ರಕರಣ ನಿಜಾಮರ ಕಾಲ ನೆನಪಾಗುತ್ತಿದೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿ

04/11/2024, 19:09

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail com

ರಾಜ್ಯದ ದೇವಾಲಯ, ಮಠ, ಬಡವರ ದಲಿತರ ಜಮೀನುಗಳನ್ನು ವಕ್ಫ್ ಹೆಸರಲ್ಲಿ ಲಪಟಾಯಿಸುವ ಪ್ರಯತ್ನ ನಡೆಯುತ್ತಿರುವುದು ನಿಜಾಮರ ಕಾಲದ ದರೋಡೆ ನೆನೆಪಾಗುತ್ತಿದೆ ಎಂದು ಬಿಜೆಪಿಯ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಅವರು ರೈತರ ಪಹಣಿಗಳಲ್ಲಿ ವಕ್ಪ್ ಹೆಸರು ಸೇರಿಸುತ್ತಿರುವುದರ ವಿರುದ್ದ ಇಂದು ನಗರದಲ್ಲಿ ನಾರಾಯಣರಾವ್ ಪಾರಗಕ್ ನಿಂದ ಡಿಸಿ ಕಚೇರಿ ವರೆಗೆ ಹಮ್ಮಿಕೊಂಡಿದ್ದ ಪ್ರತಿಭಟನಾ ರ್‍ಯಾಲಿಯಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರದ ಆಡಳಿತ 15 ಸಾವಿರಕ್ಕೂ ಹೆಚ್ಚು ಎಕರೆ ಜಮೀನು ಕೊಳ್ಳೆ ಹೊಡೆಯುವ ಪ್ರಯತ್ನ ಸಚಿವ ಜಮೀರ್ ಅಹಮ್ಮದ್ ಮೂಲಕ ಮಾಡುತ್ತಿದೆ. ರೈತ ವಿರೋಧಿಯಾಗಿರುವ ಜಮೀರ್ ಡಿಸಿಗಳನ್ನು ಬೆದರಿಸಿ ರೈತರ ಜಮೀನು ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿದ್ದಾರೆ.
ಜಮೀರ್ ಅಹಮ್ಮದ್ ತೀವ್ರ ವಾಗ್ದಾಳಿ ನಡೆಸಿದ ಅವರು, ಬಿಜಾಪುರ, ಕೊಪ್ಪಳ, ಕಲ್ಬುರ್ಗಿ ಜಿಲ್ಲೆಗಳಲ್ಲಿ ವಕ್ಫ್ ಆಸ್ತಿ ಎಂದು ಸಿದ್ದರಾಮಯ್ಯನವರೇ 420 ಜಮೀರನಿಂದ ಈ ದಬ್ಬಾಳಿಕೆ ಮಾಡುತ್ತಿದ್ದಾರೆ.
ಇದನ್ನು ನೋಡಿ ಸುಮ್ಮನಿರಲ್ಲ. ಅದಕ್ಕಾಗಿ ಪ್ರಧಾನ ಮಂತ್ರಿಮೋದಿ ಅವರು ವಕ್ಫ್ ಕಾಯ್ದೆ ತಿದ್ದುಪಡಿಗೆ ಸಂಸತ್ ಉಪ ಸಮಿತಿ ರಚಿಸಿದ್ದಾರೆಂದರು.
ಜಮೀರ್ ಅವರ ದುಸ್ಸಾಹಸ ಹಿಂದು ವಿರೋಧಿಯಾಗಿದೆ. ಇದು ರಾಜ್ಯದ ದುರ್ದೈವ ಎಂದ ವಿಜಯೇಂದ್ರ, ನೀವು ಪ್ರಾಮಾಣಿಕರಿದ್ದರೆ ವಕ್ಫ್ ಹೆಸರಲ್ಲಿ ಜಮೀನು ಲೂಟಿ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಸವಾಲು ಹಾಕಿದರು.
ವಕ್ಫ್ ದಬ್ಬಾಳಿಕೆ ವಿರುದ್ಧ ಹೋರಾಟಕ್ಕೆ ರಾಜ್ಯಾದ್ಯಂತ ನ್ಯಾಯವಾದಿಗಳ ತಂಡ ರಚನೆ ಮಾಡಿದೆ. ವಕ್ಪ್ ನೋಟೀಸ್ ನೀಡಿದರೆ ನಮ್ಮ ವಕೀಲರನ್ನು ಭೇಟಿ ಮಾಡಿ. ಯಾವುದೇ ಕಾರಣಕ್ಕೂ ರೈತರ ಒಂದು ಇಂಚು ಜಮೀನು ವಕ್ಪ್ ಪಾಲಾಗ ಬಾರದು ಎಂದು ಈ ಪ್ರತಿಭಟನೆಯ ಹೋರಾಟದ ಮೂಲಕ ರಾಜ್ಯದ ರೈತರಿಗೆ ಧೈರ್ಯ ನೀಡಲಿದೆ ಎಂದರು.
ಈ ವೇಳೆ ಸಂಸದ ಗೋವಿಂದ ಕಾರಜೋಳ,ಬಿ. ಶ್ರೀರಾಮುಲು, ಜನಾರ್ಧನ ರೆಡ್ಡಿ, ಅನಿಲ್ ನಾಯ್ಡು, ಸೋಮಶೇಖರ ರೆಡ್ಡಿ, ಗಣಪಾಲ ಐನಾಥ ರೆಡ್ಡಿ, ಸಣ್ಣ ಪಕ್ಕೀರಪ್ಪ. ಕೆ.ಎ.ರಾಲಿಲಿಂಗಪ್ಪ, ಡಾ.ಎಸ್.ಜೆವಿ.ಮಹಿಪಾಲ್ , ಎಸ್. ಗುರುಲಿಂಗನಗೌಡ, ಹೆಚ್.ಹನುಂಮತಪ್ಪ, ಪಾರ್ವತಿ ಇಂದು ಶೇಖರ್, ಸುರೇಖ ಮಲ್ಲನಗೌಡ ಮೊದಲಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು