11:48 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ

19/12/2024, 10:07

ಬೆಳಗಾವಿ ಸುವರ್ಣಸೌಧ (reporterkarnataka.com):
ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆಗೆ ಸರ್ಕಾರ ಸಿದ್ದವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು.
ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಗುರುವಾರ ನಿಯಮ 69 ಅಡಿ ವಕ್ಫ್ ಕುರಿತು ವಿರೋಧ ಪಕ್ಷದ ನಾಯಕರು ಪ್ರಸ್ತಾಪಿಸಿದ್ದ ವಿಚಾರಗಳಿಗೆ ಉತ್ತರಿಸಿ ಅವರು ಮಾತನಾಡಿದರು.


ವಿರೋಧ ಪಕ್ಷಗಳ ಆರೋಪಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿವರವಾಗಿ ಉತ್ತರ ನೀಡಿದ್ದಾರೆ. 1954ರಲ್ಲಿ ವಕ್ಫ್ ಕಾಯ್ದೆಯನ್ನು ಕೇಂದ್ರ ಸರ್ಕಾರ ಜಾರಿ ಮಾಡಿದೆ. ಈ ಕಾಯ್ದೆಗೆ ರಾಜ್ಯ ಸರ್ಕಾರ ತಿದ್ದುಪಡಿ ತರಲು ಸಾಧ್ಯವಿಲ್ಲ. ರಾಜ್ಯದಲ್ಲಿ 2008 ರಿಂದ 2013ರ ವರೆಗೆ ಹಾಗೂ 2019 ರಿಂದ 2023ರವೆಗೆ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಆಡಳಿತದಲ್ಲಿತ್ತು. ಕೇಂದ್ರದಲ್ಲಿ 2014 ರಿಂದ ಬಿಜೆಪಿ ಅಧಿಕಾರದಲ್ಲಿದೆ. ಆಗ ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ಬಗ್ಗೆ ಆಲೋಚಿಸದೆ, ಈಗ ವಿವಾದ ಮಾಡುತ್ತಿದ್ದಾರೆ. ಕೇಂದ್ರ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಮುಸ್ಲಿಂ ಧಾರ್ಮಿಕ ಗುರುಗಳೊಂದಿಗೆ ಚರ್ಚಿಸಿ ಒತ್ತುವರಿಯಾದ ವಕ್ಫ್ ಆಸ್ತಿ ತೆರವು ಮಾಡಿ ರಕ್ಷಿಸುವುದಾಗಿ ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸರ್ಕಾರ ವಿರೋಧ ಪಕ್ಷದ ಎಲ್ಲಾ ಪ್ರಶ್ನೆ ಹಾಗೂ ವಿವಾದಗಳಿಗೆ ಸ್ಪಷ್ಟವಾಗಿ ಉತ್ತರಿಸಿದೆ. ಇದರಿಂದ ಜನರಲ್ಲಿ ಗೊಂದಲವು ದೂರವಾಗಿದೆ. ಇನಾಂ ರದ್ದತಿ ಹಾಗೂ ಭೂ ಸುಧಾರಣೆ ಕಾಯ್ದೆಯಡಿ ಮಂಜೂರಾದ ವಕ್ಫ್ ಜಮೀನುಗಳನ್ನು ಸರ್ಕಾರ ಮುಟ್ಟುವುದಿಲ್ಲ. ವಕ್ಫ್ ಜಾಗದಲ್ಲಿರುವ ಖಬರಸ್ಥಾನ, ದರ್ಗಾ, ಮಸೀದಿಗಳನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯವಾಗಿದೆ. ಒಟ್ಟಾರೆ 1.28 ಲಕ್ಷ ಎಕರೆ ವಕ್ಫ್ ಆಸ್ತಿಯಲ್ಲಿ 47,263 ಎಕರೆ ಇನಾಂ ರದ್ದತಿ ಹಾಗೂ 23,623 ಎಕರೆ ಭೂ ಸುಧಾರಣೆ ಕಾಯ್ದೆ, 3000 ಎಕರೆ ಸಾರ್ವಜನಿಕ ಉದ್ದೇಶಗಳಿಗಾಗಿ ಬಳಸಲಾಗಿದೆ. ಸುಮಾರು 17,969 ಎಕರೆ ವಕ್ಫ್ ಜಮೀನನ್ನು ಖಾಸಗಿ ವ್ಯಕ್ತಿಗಳು ಅತಿಕ್ರಮಣ ಮಾಡಿದ್ದಾರೆ. ಇವುಗಳನ್ನು ರಕ್ಷಿಸಲು ಸುಪ್ರಿಂ ಕೋರ್ಟ್ ಆದೇಶವಿದೆ. ಒಮ್ಮೆ ವಕ್ಫ್ ಆಸ್ತಿ ಎಂದು ನಮೂದಾದರೆ ಅದು ಯಾವಾಗಲೂ ವಕ್ಫ್ ಆಸ್ತಿಯಾಗಿಯೇ ಇರುವುದು. ಸರ್ಕಾರದ ಉತ್ತರ ವಿರೋಧ ಪಕ್ಷಗಳು ಸಮಾದಾನ ತರದಿದ್ದರೆ, ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆಗೆ ಸರ್ಕಾರ ಸಿದ್ದವಿದೆ. ಇದರಲ್ಲಿ ಯಾವುದೇ ಪ್ರತಿಷ್ಠೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು