10:49 PM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ವಕೀಲರ ಜತೆ ವಾಗ್ವಾದ: ದಿಲ್ಲಿ ಕೋರ್ಟ್‌ ಎದುರಲ್ಲೇ ಹಾರಿತು ಗುಂಡು; ತನಿಖೆ ಆರಂಭ

22/04/2022, 14:55

ಹೊಸದಿಲ್ಲಿ(reporterkarnataka.com): ದೇಶದ ರಾಜಧಾನಿಯ ಕೋರ್ಟ್ ಎದುರಿನಲ್ಲೇ ಗುಂಡು ಹಾರಿದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

ದೆಹಲಿಯ ರೋಹಿಣಿ ಕೋರ್ಟ್‌ ಎದುರುನಲ್ಲಿ ಈ ಘಟನೆ ನಡೆದಿದೆ. ಶುಕ್ರವಾರ ಬೆಳಗ್ಗೆ 9.40 ರ ಸುಮಾರಿಗೆ ಘಟನೆ ನಡೆದಿದ್ದು ಗೇಟ್‌ ನಲ್ಲಿ ನಿಯೊಜನೆಗೊಂಡ ಭದ್ರತಾ ಸಿಬ್ಬಂದಿಯ ಆಯುಧದಿಂದ ಗುಂಡು ಹಾರಿದೆ ಎಂದು ವರದಿಗಳು ಹೇಳಿವೆ.

ಗೇಟ್‌ ಎದುರಲ್ಲಿ ಇಬ್ಬರು ವಕೀಲರು ಹಾಗೂ ಇನ್ನೊಬ್ಬ ವ್ಯಕ್ತಿಯ ನಡುವೆ ವಾಗ್ವಾದ ನಡೆದಿದ್ದು ಗೇಟ್‌ ನಲ್ಲಿ ನಿಯೋಜನೆಗೊಂಡಿದ್ದ ನಾಗಾಲ್ಯಾಂಡ್‌ ಸಶಸ್ತ್ರ ಪಡೆಯ ಭದ್ರತಾ ಸಿಬ್ಬಂದಿಯೊಬ್ಬ ಮಧ್ಯಪ್ರವೇಶ ಮಾಡಿದ್ದಾನೆ. ಈ ಸಂದರ್ಭದಲ್ಲಿ ಗುಂಡಿನ ಸದ್ದು ಭೋರ್ಗರೆದಿದೆ.

ಘಟನೆಯನ್ನು ದೆಹಲಿ ಪೋಲೀಸರು ಗಂಭಿರವಾಗಿ ಪರಿಗಣಿಸಿದ್ದು ತನಿಖೆ ಕೈಗೊಂಡಿದ್ದಾರೆ. ಗುಂಡು ಹಾರಲು ಕಾರಣವೇನೆಂಬುದನ್ನು ಪತ್ತೆ ಹಚ್ಚಲಾಗುತ್ತಿದ್ದು ಆಕಸ್ಮಿಕವಾಗಿ ಗುಂಡು ಹಾರಿದೆಯೇ ಎಂದು ಅನುಮಾನ ವ್ಯಕ್ತಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು