11:36 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ವಕೀಲರ ಜತೆ ವಾಗ್ವಾದ: ದಿಲ್ಲಿ ಕೋರ್ಟ್‌ ಎದುರಲ್ಲೇ ಹಾರಿತು ಗುಂಡು; ತನಿಖೆ ಆರಂಭ

22/04/2022, 14:55

ಹೊಸದಿಲ್ಲಿ(reporterkarnataka.com): ದೇಶದ ರಾಜಧಾನಿಯ ಕೋರ್ಟ್ ಎದುರಿನಲ್ಲೇ ಗುಂಡು ಹಾರಿದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

ದೆಹಲಿಯ ರೋಹಿಣಿ ಕೋರ್ಟ್‌ ಎದುರುನಲ್ಲಿ ಈ ಘಟನೆ ನಡೆದಿದೆ. ಶುಕ್ರವಾರ ಬೆಳಗ್ಗೆ 9.40 ರ ಸುಮಾರಿಗೆ ಘಟನೆ ನಡೆದಿದ್ದು ಗೇಟ್‌ ನಲ್ಲಿ ನಿಯೊಜನೆಗೊಂಡ ಭದ್ರತಾ ಸಿಬ್ಬಂದಿಯ ಆಯುಧದಿಂದ ಗುಂಡು ಹಾರಿದೆ ಎಂದು ವರದಿಗಳು ಹೇಳಿವೆ.

ಗೇಟ್‌ ಎದುರಲ್ಲಿ ಇಬ್ಬರು ವಕೀಲರು ಹಾಗೂ ಇನ್ನೊಬ್ಬ ವ್ಯಕ್ತಿಯ ನಡುವೆ ವಾಗ್ವಾದ ನಡೆದಿದ್ದು ಗೇಟ್‌ ನಲ್ಲಿ ನಿಯೋಜನೆಗೊಂಡಿದ್ದ ನಾಗಾಲ್ಯಾಂಡ್‌ ಸಶಸ್ತ್ರ ಪಡೆಯ ಭದ್ರತಾ ಸಿಬ್ಬಂದಿಯೊಬ್ಬ ಮಧ್ಯಪ್ರವೇಶ ಮಾಡಿದ್ದಾನೆ. ಈ ಸಂದರ್ಭದಲ್ಲಿ ಗುಂಡಿನ ಸದ್ದು ಭೋರ್ಗರೆದಿದೆ.

ಘಟನೆಯನ್ನು ದೆಹಲಿ ಪೋಲೀಸರು ಗಂಭಿರವಾಗಿ ಪರಿಗಣಿಸಿದ್ದು ತನಿಖೆ ಕೈಗೊಂಡಿದ್ದಾರೆ. ಗುಂಡು ಹಾರಲು ಕಾರಣವೇನೆಂಬುದನ್ನು ಪತ್ತೆ ಹಚ್ಚಲಾಗುತ್ತಿದ್ದು ಆಕಸ್ಮಿಕವಾಗಿ ಗುಂಡು ಹಾರಿದೆಯೇ ಎಂದು ಅನುಮಾನ ವ್ಯಕ್ತಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು