4:53 AM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ವಕೀಲರ ಜತೆ ವಾಗ್ವಾದ: ದಿಲ್ಲಿ ಕೋರ್ಟ್‌ ಎದುರಲ್ಲೇ ಹಾರಿತು ಗುಂಡು; ತನಿಖೆ ಆರಂಭ

22/04/2022, 14:55

ಹೊಸದಿಲ್ಲಿ(reporterkarnataka.com): ದೇಶದ ರಾಜಧಾನಿಯ ಕೋರ್ಟ್ ಎದುರಿನಲ್ಲೇ ಗುಂಡು ಹಾರಿದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

ದೆಹಲಿಯ ರೋಹಿಣಿ ಕೋರ್ಟ್‌ ಎದುರುನಲ್ಲಿ ಈ ಘಟನೆ ನಡೆದಿದೆ. ಶುಕ್ರವಾರ ಬೆಳಗ್ಗೆ 9.40 ರ ಸುಮಾರಿಗೆ ಘಟನೆ ನಡೆದಿದ್ದು ಗೇಟ್‌ ನಲ್ಲಿ ನಿಯೊಜನೆಗೊಂಡ ಭದ್ರತಾ ಸಿಬ್ಬಂದಿಯ ಆಯುಧದಿಂದ ಗುಂಡು ಹಾರಿದೆ ಎಂದು ವರದಿಗಳು ಹೇಳಿವೆ.

ಗೇಟ್‌ ಎದುರಲ್ಲಿ ಇಬ್ಬರು ವಕೀಲರು ಹಾಗೂ ಇನ್ನೊಬ್ಬ ವ್ಯಕ್ತಿಯ ನಡುವೆ ವಾಗ್ವಾದ ನಡೆದಿದ್ದು ಗೇಟ್‌ ನಲ್ಲಿ ನಿಯೋಜನೆಗೊಂಡಿದ್ದ ನಾಗಾಲ್ಯಾಂಡ್‌ ಸಶಸ್ತ್ರ ಪಡೆಯ ಭದ್ರತಾ ಸಿಬ್ಬಂದಿಯೊಬ್ಬ ಮಧ್ಯಪ್ರವೇಶ ಮಾಡಿದ್ದಾನೆ. ಈ ಸಂದರ್ಭದಲ್ಲಿ ಗುಂಡಿನ ಸದ್ದು ಭೋರ್ಗರೆದಿದೆ.

ಘಟನೆಯನ್ನು ದೆಹಲಿ ಪೋಲೀಸರು ಗಂಭಿರವಾಗಿ ಪರಿಗಣಿಸಿದ್ದು ತನಿಖೆ ಕೈಗೊಂಡಿದ್ದಾರೆ. ಗುಂಡು ಹಾರಲು ಕಾರಣವೇನೆಂಬುದನ್ನು ಪತ್ತೆ ಹಚ್ಚಲಾಗುತ್ತಿದ್ದು ಆಕಸ್ಮಿಕವಾಗಿ ಗುಂಡು ಹಾರಿದೆಯೇ ಎಂದು ಅನುಮಾನ ವ್ಯಕ್ತಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು