3:30 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ವಕೀಲರ ಜತೆ ವಾಗ್ವಾದ: ದಿಲ್ಲಿ ಕೋರ್ಟ್‌ ಎದುರಲ್ಲೇ ಹಾರಿತು ಗುಂಡು; ತನಿಖೆ ಆರಂಭ

22/04/2022, 14:55

ಹೊಸದಿಲ್ಲಿ(reporterkarnataka.com): ದೇಶದ ರಾಜಧಾನಿಯ ಕೋರ್ಟ್ ಎದುರಿನಲ್ಲೇ ಗುಂಡು ಹಾರಿದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

ದೆಹಲಿಯ ರೋಹಿಣಿ ಕೋರ್ಟ್‌ ಎದುರುನಲ್ಲಿ ಈ ಘಟನೆ ನಡೆದಿದೆ. ಶುಕ್ರವಾರ ಬೆಳಗ್ಗೆ 9.40 ರ ಸುಮಾರಿಗೆ ಘಟನೆ ನಡೆದಿದ್ದು ಗೇಟ್‌ ನಲ್ಲಿ ನಿಯೊಜನೆಗೊಂಡ ಭದ್ರತಾ ಸಿಬ್ಬಂದಿಯ ಆಯುಧದಿಂದ ಗುಂಡು ಹಾರಿದೆ ಎಂದು ವರದಿಗಳು ಹೇಳಿವೆ.

ಗೇಟ್‌ ಎದುರಲ್ಲಿ ಇಬ್ಬರು ವಕೀಲರು ಹಾಗೂ ಇನ್ನೊಬ್ಬ ವ್ಯಕ್ತಿಯ ನಡುವೆ ವಾಗ್ವಾದ ನಡೆದಿದ್ದು ಗೇಟ್‌ ನಲ್ಲಿ ನಿಯೋಜನೆಗೊಂಡಿದ್ದ ನಾಗಾಲ್ಯಾಂಡ್‌ ಸಶಸ್ತ್ರ ಪಡೆಯ ಭದ್ರತಾ ಸಿಬ್ಬಂದಿಯೊಬ್ಬ ಮಧ್ಯಪ್ರವೇಶ ಮಾಡಿದ್ದಾನೆ. ಈ ಸಂದರ್ಭದಲ್ಲಿ ಗುಂಡಿನ ಸದ್ದು ಭೋರ್ಗರೆದಿದೆ.

ಘಟನೆಯನ್ನು ದೆಹಲಿ ಪೋಲೀಸರು ಗಂಭಿರವಾಗಿ ಪರಿಗಣಿಸಿದ್ದು ತನಿಖೆ ಕೈಗೊಂಡಿದ್ದಾರೆ. ಗುಂಡು ಹಾರಲು ಕಾರಣವೇನೆಂಬುದನ್ನು ಪತ್ತೆ ಹಚ್ಚಲಾಗುತ್ತಿದ್ದು ಆಕಸ್ಮಿಕವಾಗಿ ಗುಂಡು ಹಾರಿದೆಯೇ ಎಂದು ಅನುಮಾನ ವ್ಯಕ್ತಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು