1:08 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ವಕೀಲರ ಮೇಲೆ ಹಲ್ಲೆ ಪ್ರಕರಣದಲ್ಲಿ 6 ಮಂದಿ ಪೊಲೀಸರ ಅಮಾನತು: ಎಸ್ಪಿ ಕ್ರಮ ವಿರೋಧಿಸಿ ಕೆಲಸ ನಿಲ್ಲಿಸಿದ ಚಿಕ್ಕಮಗಳೂರು ನಗರದ 6 ಠಾಣೆಗಳ ಪೊಲೀಸರು

02/12/2023, 21:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಕೀಲರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತಿಗೊಳಗಾದ 6 ಮಂದಿ ಪೊಲೀಸರ ಪರವಾಗಿ ಚಿಕ್ಕಮಗಳೂರು ನಗರದ ಎಲ್ಲ 6 ಪೊಲೀಸ್ ಠಾಣೆಗಳ ಸಿಬ್ಬಂದಿಗಳು ಕೆಲಸ ನಿಲ್ಲಿಸಿ ಎಸ್ಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ನಾವು ಕಾನೂನು ಗೌರವಿಸುತ್ತೇವೆ… ಅವರು ನಿಮಗೇನು ಗೌರವ ಕೊಟ್ಟರು ಸರ್? ಮಾತಾಡೋದಾದ್ರೆ ಇಲ್ಲೇ ಮಾತಾಡಿ ಸರ್…. ಒಳಗೆ ಬರಲ್ಲ ಎಂದು ಪ್ರತಿಭಟನಾಕಾರರು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆಗೆ ಖಡಕ್ ಆಗಿ ಹೇಳಿದರು. ಇದರೊಂದಿಗೆ ಚಿಕ್ಕಮಗಳೂರಿನಲ್ಲಿ ನಡೆಯುತ್ತಿರುವ ಪೊಲೀಸ್ ಹಾಗೂ ವಕೀಲರ ನಡುವಿನ ಘರ್ಷಣೆಗೆ ಹೊಸ ರೂಪ ಬಂದಿದೆ.


ಪೊಲೀಸ್ ಕುಟುಂಬಗಳಿಗೆ ಅನ್ಯಾಯ ಆಗಿದೆ‌ ಸರ್. ನಮಗೆ ಏನಾದ್ರು ಆದ್ರೆ… ನಮ್ಮ ಕುಟುಂಬಗಳಿಗೆ ಯಾರು ಜವಾಬ್ದಾರಿ…? ಎಂದು ಪ್ರತಿಭಟನಾಕಾರರು ಎಸ್ಪಿ ಮುಂದೆ ತಮ್ಮ ನೋವು ಹೇಳಿಕೊಂಡರು.
ಕಾನೂನು ಗೊತ್ತಿದ್ದವರೇ ಕಾನೂನು ಮುರಿದ್ರು… ನೀವು ಏನ್ ಮಾಡಿದ್ರು ಸರ್ ಎಂದು ಪ್ರಶ್ನಿಸಿದರು. ನಾವ್ಯಾರು ಕೆಲಸ ಮಾಡಲ್ಲ ಅಂತ ಎಸ್ಪಿ ಕಚೇರಿ ಬಳಿ ಪೊಲೀಸರು ಜಮಾಯಿಸಿದ್ದರು.
ಕೆಲಸ ಬಿಟ್ಟು 100ಕ್ಕೂ ಹೆಚ್ಚು ಪೊಲೀಸರು ಪ್ರತಿಭಟನೆಗೆ ಆಗಮಿಸಿದ್ದರು. ವಾಟ್ಸಾಪ್ ಗ್ರೂಪ್ ಮೂಲಕ ಜಿಲ್ಲೆಯ 800 ಪೊಲೀಸರು ಒಂದಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು