7:09 PM Monday23 - March 2026
ಬ್ರೇಕಿಂಗ್ ನ್ಯೂಸ್
ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

ಇತ್ತೀಚಿನ ಸುದ್ದಿ

ವಕೀಲರ ಮೇಲೆ ಹಲ್ಲೆ ಪ್ರಕರಣದಲ್ಲಿ 6 ಮಂದಿ ಪೊಲೀಸರ ಅಮಾನತು: ಎಸ್ಪಿ ಕ್ರಮ ವಿರೋಧಿಸಿ ಕೆಲಸ ನಿಲ್ಲಿಸಿದ ಚಿಕ್ಕಮಗಳೂರು ನಗರದ 6 ಠಾಣೆಗಳ ಪೊಲೀಸರು

02/12/2023, 21:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಕೀಲರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತಿಗೊಳಗಾದ 6 ಮಂದಿ ಪೊಲೀಸರ ಪರವಾಗಿ ಚಿಕ್ಕಮಗಳೂರು ನಗರದ ಎಲ್ಲ 6 ಪೊಲೀಸ್ ಠಾಣೆಗಳ ಸಿಬ್ಬಂದಿಗಳು ಕೆಲಸ ನಿಲ್ಲಿಸಿ ಎಸ್ಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ನಾವು ಕಾನೂನು ಗೌರವಿಸುತ್ತೇವೆ… ಅವರು ನಿಮಗೇನು ಗೌರವ ಕೊಟ್ಟರು ಸರ್? ಮಾತಾಡೋದಾದ್ರೆ ಇಲ್ಲೇ ಮಾತಾಡಿ ಸರ್…. ಒಳಗೆ ಬರಲ್ಲ ಎಂದು ಪ್ರತಿಭಟನಾಕಾರರು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆಗೆ ಖಡಕ್ ಆಗಿ ಹೇಳಿದರು. ಇದರೊಂದಿಗೆ ಚಿಕ್ಕಮಗಳೂರಿನಲ್ಲಿ ನಡೆಯುತ್ತಿರುವ ಪೊಲೀಸ್ ಹಾಗೂ ವಕೀಲರ ನಡುವಿನ ಘರ್ಷಣೆಗೆ ಹೊಸ ರೂಪ ಬಂದಿದೆ.


ಪೊಲೀಸ್ ಕುಟುಂಬಗಳಿಗೆ ಅನ್ಯಾಯ ಆಗಿದೆ‌ ಸರ್. ನಮಗೆ ಏನಾದ್ರು ಆದ್ರೆ… ನಮ್ಮ ಕುಟುಂಬಗಳಿಗೆ ಯಾರು ಜವಾಬ್ದಾರಿ…? ಎಂದು ಪ್ರತಿಭಟನಾಕಾರರು ಎಸ್ಪಿ ಮುಂದೆ ತಮ್ಮ ನೋವು ಹೇಳಿಕೊಂಡರು.
ಕಾನೂನು ಗೊತ್ತಿದ್ದವರೇ ಕಾನೂನು ಮುರಿದ್ರು… ನೀವು ಏನ್ ಮಾಡಿದ್ರು ಸರ್ ಎಂದು ಪ್ರಶ್ನಿಸಿದರು. ನಾವ್ಯಾರು ಕೆಲಸ ಮಾಡಲ್ಲ ಅಂತ ಎಸ್ಪಿ ಕಚೇರಿ ಬಳಿ ಪೊಲೀಸರು ಜಮಾಯಿಸಿದ್ದರು.
ಕೆಲಸ ಬಿಟ್ಟು 100ಕ್ಕೂ ಹೆಚ್ಚು ಪೊಲೀಸರು ಪ್ರತಿಭಟನೆಗೆ ಆಗಮಿಸಿದ್ದರು. ವಾಟ್ಸಾಪ್ ಗ್ರೂಪ್ ಮೂಲಕ ಜಿಲ್ಲೆಯ 800 ಪೊಲೀಸರು ಒಂದಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು