9:36 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ವಕೀಲರ ಮೇಲೆ ಹಲ್ಲೆ ಪ್ರಕರಣದಲ್ಲಿ 6 ಮಂದಿ ಪೊಲೀಸರ ಅಮಾನತು: ಎಸ್ಪಿ ಕ್ರಮ ವಿರೋಧಿಸಿ ಕೆಲಸ ನಿಲ್ಲಿಸಿದ ಚಿಕ್ಕಮಗಳೂರು ನಗರದ 6 ಠಾಣೆಗಳ ಪೊಲೀಸರು

02/12/2023, 21:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಕೀಲರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತಿಗೊಳಗಾದ 6 ಮಂದಿ ಪೊಲೀಸರ ಪರವಾಗಿ ಚಿಕ್ಕಮಗಳೂರು ನಗರದ ಎಲ್ಲ 6 ಪೊಲೀಸ್ ಠಾಣೆಗಳ ಸಿಬ್ಬಂದಿಗಳು ಕೆಲಸ ನಿಲ್ಲಿಸಿ ಎಸ್ಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ನಾವು ಕಾನೂನು ಗೌರವಿಸುತ್ತೇವೆ… ಅವರು ನಿಮಗೇನು ಗೌರವ ಕೊಟ್ಟರು ಸರ್? ಮಾತಾಡೋದಾದ್ರೆ ಇಲ್ಲೇ ಮಾತಾಡಿ ಸರ್…. ಒಳಗೆ ಬರಲ್ಲ ಎಂದು ಪ್ರತಿಭಟನಾಕಾರರು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆಗೆ ಖಡಕ್ ಆಗಿ ಹೇಳಿದರು. ಇದರೊಂದಿಗೆ ಚಿಕ್ಕಮಗಳೂರಿನಲ್ಲಿ ನಡೆಯುತ್ತಿರುವ ಪೊಲೀಸ್ ಹಾಗೂ ವಕೀಲರ ನಡುವಿನ ಘರ್ಷಣೆಗೆ ಹೊಸ ರೂಪ ಬಂದಿದೆ.


ಪೊಲೀಸ್ ಕುಟುಂಬಗಳಿಗೆ ಅನ್ಯಾಯ ಆಗಿದೆ‌ ಸರ್. ನಮಗೆ ಏನಾದ್ರು ಆದ್ರೆ… ನಮ್ಮ ಕುಟುಂಬಗಳಿಗೆ ಯಾರು ಜವಾಬ್ದಾರಿ…? ಎಂದು ಪ್ರತಿಭಟನಾಕಾರರು ಎಸ್ಪಿ ಮುಂದೆ ತಮ್ಮ ನೋವು ಹೇಳಿಕೊಂಡರು.
ಕಾನೂನು ಗೊತ್ತಿದ್ದವರೇ ಕಾನೂನು ಮುರಿದ್ರು… ನೀವು ಏನ್ ಮಾಡಿದ್ರು ಸರ್ ಎಂದು ಪ್ರಶ್ನಿಸಿದರು. ನಾವ್ಯಾರು ಕೆಲಸ ಮಾಡಲ್ಲ ಅಂತ ಎಸ್ಪಿ ಕಚೇರಿ ಬಳಿ ಪೊಲೀಸರು ಜಮಾಯಿಸಿದ್ದರು.
ಕೆಲಸ ಬಿಟ್ಟು 100ಕ್ಕೂ ಹೆಚ್ಚು ಪೊಲೀಸರು ಪ್ರತಿಭಟನೆಗೆ ಆಗಮಿಸಿದ್ದರು. ವಾಟ್ಸಾಪ್ ಗ್ರೂಪ್ ಮೂಲಕ ಜಿಲ್ಲೆಯ 800 ಪೊಲೀಸರು ಒಂದಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು