2:26 PM Tuesday4 - November 2025
ಬ್ರೇಕಿಂಗ್ ನ್ಯೂಸ್
40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:…

ಇತ್ತೀಚಿನ ಸುದ್ದಿ

ವಲಯವಾರು ಗುರುತಿಗೆ ಅನುಕೂಲವಾಗುವಂತೆ ಆಟೋ ರಿಕ್ಷಾಗಳಿಗೆ ಬಣ್ಣ: ಜಿಲ್ಲಾಧಿಕಾರಿ ಸೂಚನೆ

28/10/2022, 20:17

ಮಂಗಳೂರು(reporterkarnataka.com):- ನಗರ ವ್ಯಾಪ್ತಿ (ವಲಯ-1) ಯ ಆಟೋರಿಕ್ಷಾ ಗಳಿಗೆ ಹಳದಿ ಮತ್ತು ಕಪ್ಪು ಹಾಗೂ ಗ್ರಾಮಾಂತರ (ವಲಯ-2) ರಲ್ಲಿ ಬರುವ ಆಟೋರಿಕ್ಷಾ ಗಳಿಗೆ ಹಸಿರು ಹಾಗೂ ಹಳದಿ ಬಣ್ಣ ಹಾಕಿಸುವಂತೆ ಜಿಲ್ಲಾಧಿಕಾರಿ ಡಾ. ಕುಮಾರ್ ಸೂಚಿಸಿದ್ದಾರೆ.
ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಲಯ ಒಂದರಲ್ಲಿ ಬರುವ ಎಲ್ಲಾ ಮಾದರಿಯ ಆಟೋ ರಿಕ್ಷಾ ಗಳು ಹಳದಿ ಹಾಗೂ ಕಪ್ಪು, ವಲಯ ಎರಡರಲ್ಲಿ ಬರುವ ಎಲ್ಲಾ ಮಾದರಿಯ ಆಟೋ ರಿಕ್ಷಾಗಳು (ಎಲೆಕ್ಟ್ರಿಕಲ್, ಸಿ ಎನ್ ಜಿ ಹಾಗೂ ಡೀಸೆಲ್, ಪೆಟ್ರೋಲ್ ) ಕಡ್ಡಾಯವಾಗಿ ಹಸಿರು ಹಾಗೂ ಹಳದಿ ಬಣ್ಣವನ್ನು ಹಾಕಿಸಿಕೊಳ್ಳಬೇಕು, ಯಾವುದೇ ಕಾರಣಕ್ಕೂ ಸ್ಟಿಕ್ಕರ್ ಅಳವಡಿಸಿಕೊಳ್ಳುವಂತೆ ಇಲ್ಲ, ಬಣ್ಣ ಹಾಕಿಸಿಕೊಳ್ಳಲು ಅಗತ್ಯವಾದ ಕಾಲಾವಕಾಶ ನೀಡಲಾಗುವುದು, ಈ ಮೂಲಕ ಆಟೋ ರಿಕ್ಷಾಗಳು ತಮ್ಮ ವ್ಯಾಪ್ತಿಯನ್ನು ನಿರ್ಧರಿಸಿಕೊಳ್ಳಲು ಅನುಕೂಲವಾಗಲಿದೆ, ಆ ಮೂಲಕ ಗೊಂದಲಗಳಿಗೆ ತೆರೆ ಎಳೆಯಬಹುದಾಗಿದೆ ಎಂದು ಹೇಳಿದರು.ಆರೋಗ್ಯಕ್ಕೆ ಸಂಬಂಧಿಸಿದಂತೆ ತುರ್ತು ಸಂದರ್ಭದಲ್ಲಿ ಸೇವೆ ಸಲ್ಲಿಸುವ ಆಟೋ ರಿಕ್ಷಾಗಳು ಮಾತ್ರ ತಮ್ಮ ವ್ಯಾಪ್ತಿಯನ್ನು ಮೀರಬಹುದಾಗಿದೆ, ಇಂತಹ ಸಂದರ್ಭಗಳಲ್ಲಿ ಅಗತ್ಯ ದಾಖಲಾತಿ ಇಟ್ಟುಕೊಳ್ಳಬೇಕು, ಅದನ್ನ ಹೊರತು ಪಡಿಸಿ ತಮ್ಮ ರಹದಾರಿಯ ವ್ಯಾಪ್ತಿ ಮೀರಿದರೆ, ಸಂಬಂಧಿಸಿದ ಪ್ರಾಧಿಕಾರದವರು ಕ್ರಮಕೈಗೊಳ್ಳುವರು, ಒಂದೊಮ್ಮೆ ಇಂಧನ ಅಥವಾ ಎಲ್ ಪಿ ಜಿ ಭರಿಸಿಕೊಂಡು ಹಿಂತಿರುಗುವಾಗ ದಂಡ ವಿಧಿಸಿದ್ದಲ್ಲಿ ಆ ಬಗ್ಗೆ ಪಟ್ಟಿ ಒದಗಿಸುವಂತೆ ಅವರು ತಿಳಿಸಿದರು.


ಆಟೋ ರಿಕ್ಷಾ ದರ ಪರಿಷ್ಕರಣಿಗೆ ಸಂಬಂಧಿಸಿದಂತೆ ನಡೆದ ಚರ್ಚೆಯಲ್ಲಿ ಆಟೋರಿಕ್ಷಾ ಸಂಘದವರು ಹಾಗೂ ಜಿಲ್ಲಾಡಳಿತ ನಡುವೆ ಸಹಮತ ಬರದಿರುವ ಕಾರಣ ಮುಂದಿನ ಸಭೆಯಲ್ಲಿ ದರ ಪರಿಷ್ಕರಣೆಯ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಪ್ರಾದೇಶಿಕ ಸಾರಿಗೆ ಅಧಿಕಾರಿ ರವಿಶಂಕರ್, ಸಂಚಾರಿ ವಿಭಾಗದ ಎಸಿಪಿ ಗೀತಾ ಕುಲಕರ್ಣಿ, ರಿಕ್ಷಾ ಚಾಲಕ-ಮಾಲಕರ ಒಕ್ಕೂಟದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷ ಅಬುಬಕರ್ ಸುರತ್ಕಲ್, ಗೌರವಾಧ್ಯಕ್ಷ ವಿಷ್ಣುಮೂರ್ತಿ, ಕಾರ್ಯದರ್ಶಿ ಭರತ್ ಕುಮಾರ್, ಸಲಹೆಗಾರರಾದ ಮೊಹಮ್ಮದ್ ಇರ್ಫಾನ್, ಅರುಣ್ ಕುಮಾರ್ ಸೇರಿದಂತೆ ಆಟೋ ರಿಕ್ಷಾ ಚಾಲಕರು ಹಾಗೂ ಮಾಲಕರು ಸಭೆಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು