11:58 AM Thursday17 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

ವಲಯವಾರು ಗುರುತಿಗೆ ಅನುಕೂಲವಾಗುವಂತೆ ಆಟೋ ರಿಕ್ಷಾಗಳಿಗೆ ಬಣ್ಣ: ಜಿಲ್ಲಾಧಿಕಾರಿ ಸೂಚನೆ

28/10/2022, 20:17

ಮಂಗಳೂರು(reporterkarnataka.com):- ನಗರ ವ್ಯಾಪ್ತಿ (ವಲಯ-1) ಯ ಆಟೋರಿಕ್ಷಾ ಗಳಿಗೆ ಹಳದಿ ಮತ್ತು ಕಪ್ಪು ಹಾಗೂ ಗ್ರಾಮಾಂತರ (ವಲಯ-2) ರಲ್ಲಿ ಬರುವ ಆಟೋರಿಕ್ಷಾ ಗಳಿಗೆ ಹಸಿರು ಹಾಗೂ ಹಳದಿ ಬಣ್ಣ ಹಾಕಿಸುವಂತೆ ಜಿಲ್ಲಾಧಿಕಾರಿ ಡಾ. ಕುಮಾರ್ ಸೂಚಿಸಿದ್ದಾರೆ.
ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಲಯ ಒಂದರಲ್ಲಿ ಬರುವ ಎಲ್ಲಾ ಮಾದರಿಯ ಆಟೋ ರಿಕ್ಷಾ ಗಳು ಹಳದಿ ಹಾಗೂ ಕಪ್ಪು, ವಲಯ ಎರಡರಲ್ಲಿ ಬರುವ ಎಲ್ಲಾ ಮಾದರಿಯ ಆಟೋ ರಿಕ್ಷಾಗಳು (ಎಲೆಕ್ಟ್ರಿಕಲ್, ಸಿ ಎನ್ ಜಿ ಹಾಗೂ ಡೀಸೆಲ್, ಪೆಟ್ರೋಲ್ ) ಕಡ್ಡಾಯವಾಗಿ ಹಸಿರು ಹಾಗೂ ಹಳದಿ ಬಣ್ಣವನ್ನು ಹಾಕಿಸಿಕೊಳ್ಳಬೇಕು, ಯಾವುದೇ ಕಾರಣಕ್ಕೂ ಸ್ಟಿಕ್ಕರ್ ಅಳವಡಿಸಿಕೊಳ್ಳುವಂತೆ ಇಲ್ಲ, ಬಣ್ಣ ಹಾಕಿಸಿಕೊಳ್ಳಲು ಅಗತ್ಯವಾದ ಕಾಲಾವಕಾಶ ನೀಡಲಾಗುವುದು, ಈ ಮೂಲಕ ಆಟೋ ರಿಕ್ಷಾಗಳು ತಮ್ಮ ವ್ಯಾಪ್ತಿಯನ್ನು ನಿರ್ಧರಿಸಿಕೊಳ್ಳಲು ಅನುಕೂಲವಾಗಲಿದೆ, ಆ ಮೂಲಕ ಗೊಂದಲಗಳಿಗೆ ತೆರೆ ಎಳೆಯಬಹುದಾಗಿದೆ ಎಂದು ಹೇಳಿದರು.ಆರೋಗ್ಯಕ್ಕೆ ಸಂಬಂಧಿಸಿದಂತೆ ತುರ್ತು ಸಂದರ್ಭದಲ್ಲಿ ಸೇವೆ ಸಲ್ಲಿಸುವ ಆಟೋ ರಿಕ್ಷಾಗಳು ಮಾತ್ರ ತಮ್ಮ ವ್ಯಾಪ್ತಿಯನ್ನು ಮೀರಬಹುದಾಗಿದೆ, ಇಂತಹ ಸಂದರ್ಭಗಳಲ್ಲಿ ಅಗತ್ಯ ದಾಖಲಾತಿ ಇಟ್ಟುಕೊಳ್ಳಬೇಕು, ಅದನ್ನ ಹೊರತು ಪಡಿಸಿ ತಮ್ಮ ರಹದಾರಿಯ ವ್ಯಾಪ್ತಿ ಮೀರಿದರೆ, ಸಂಬಂಧಿಸಿದ ಪ್ರಾಧಿಕಾರದವರು ಕ್ರಮಕೈಗೊಳ್ಳುವರು, ಒಂದೊಮ್ಮೆ ಇಂಧನ ಅಥವಾ ಎಲ್ ಪಿ ಜಿ ಭರಿಸಿಕೊಂಡು ಹಿಂತಿರುಗುವಾಗ ದಂಡ ವಿಧಿಸಿದ್ದಲ್ಲಿ ಆ ಬಗ್ಗೆ ಪಟ್ಟಿ ಒದಗಿಸುವಂತೆ ಅವರು ತಿಳಿಸಿದರು.


ಆಟೋ ರಿಕ್ಷಾ ದರ ಪರಿಷ್ಕರಣಿಗೆ ಸಂಬಂಧಿಸಿದಂತೆ ನಡೆದ ಚರ್ಚೆಯಲ್ಲಿ ಆಟೋರಿಕ್ಷಾ ಸಂಘದವರು ಹಾಗೂ ಜಿಲ್ಲಾಡಳಿತ ನಡುವೆ ಸಹಮತ ಬರದಿರುವ ಕಾರಣ ಮುಂದಿನ ಸಭೆಯಲ್ಲಿ ದರ ಪರಿಷ್ಕರಣೆಯ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಪ್ರಾದೇಶಿಕ ಸಾರಿಗೆ ಅಧಿಕಾರಿ ರವಿಶಂಕರ್, ಸಂಚಾರಿ ವಿಭಾಗದ ಎಸಿಪಿ ಗೀತಾ ಕುಲಕರ್ಣಿ, ರಿಕ್ಷಾ ಚಾಲಕ-ಮಾಲಕರ ಒಕ್ಕೂಟದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷ ಅಬುಬಕರ್ ಸುರತ್ಕಲ್, ಗೌರವಾಧ್ಯಕ್ಷ ವಿಷ್ಣುಮೂರ್ತಿ, ಕಾರ್ಯದರ್ಶಿ ಭರತ್ ಕುಮಾರ್, ಸಲಹೆಗಾರರಾದ ಮೊಹಮ್ಮದ್ ಇರ್ಫಾನ್, ಅರುಣ್ ಕುಮಾರ್ ಸೇರಿದಂತೆ ಆಟೋ ರಿಕ್ಷಾ ಚಾಲಕರು ಹಾಗೂ ಮಾಲಕರು ಸಭೆಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು