11:33 PM Friday11 - April 2025
ಬ್ರೇಕಿಂಗ್ ನ್ಯೂಸ್
ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್…

ಇತ್ತೀಚಿನ ಸುದ್ದಿ

ವಾಮಾಚಾರ ಆರೋಪ: ದಲಿತ ಕುಟುಂಬದ ಮೇಲೆ ಹಲ್ಲೆ; ಕಂಬಕ್ಕೆ ಕಟ್ಟಿ ಥಳಿಸಿದ ಗುಂಪು; 5 ಮಂದಿಗೆ ತೀವ್ರ ಗಾಯ

25/08/2021, 17:17

ಚಂದ್ರಾಪುರ(reporterkarnataka.com): ಮಹಾರಾಷ್ಟ್ರದ ಚಂದ್ರಾಪುರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ವಾಮಾಚಾರದ ಆರೋಪ ಹೊರಿಸಿ ದಲಿತ ಕುಟುಂಬವೊಂದರ ಮೇಲೆ ಗುಂಪೊಂದು ಅಮಾನವೀಯವಾಗಿ ಹಲ್ಲೆ ನಡೆಸಿದೆ. ಚಂದ್ರಾಪುರ ಜಿಲ್ಲೆಯಿಂದ 12 ಕಿಮೀ ದೂರದಲ್ಲಿರುವ ವಾನಿ ಖುರ್ದ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. 

ದಲಿತ ಕುಟುಂಬವನ್ನು ಗ್ರಾಮದ ಅಕ್ರಮಣಕಾರಿ ಗುಂಪು ವಾಮಾಚಾರ ಮಾಡಿದ ಶಂಕೆಯಲ್ಲಿ ಮನಸ್ಸು ಇಚ್ಛೆ ಥಳಿಸಿದೆ. ಯಾವುದೇ ಸಾಕ್ಷ್ಯಾಧಾರಗಳು ಇಲ್ಲದೆ ಮೂಢನಂಬಿಕೆಗೆ ಬಲಿಯಾಗಿ ಜನರ ಗುಂಪೊಂದು
ಕಾನೂನು ಕೈಗೆತ್ತಿಕೊಂಡು ದಲಿತ ಕುಟುಂಬದೊಂದಿಗೆ ಅಮಾನುಷವಾಗಿ ನಡೆದುಕೊಂಡಿದೆ. ದಲಿತ ಕುಟುಂಬದ 7 ಮಂದಿಯನ್ನು ಗ್ರಾಮದ ಚೌಕನಲ್ಲಿ ಕರೆದುಕೊಂಡು ಹೋಗಿ ಕೈಕಾಲು ಕಟ್ಟಿ ಹಲ್ಲೆ ನಡೆಸಿದ್ದಾರೆ. ಇವರಲ್ಲಿ 5 ಮಂದಿಯ ಸ್ಥಿತಿ ಗಂಭೀರವಾಗಿದೆ.  ಗಂಭೀರವಾಗಿ ಗಾಯಗೊಂಡ ಚಂದ್ರಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾನವೀಯತೆಗೆ ಕಳಂಕ ತಂದಿರುವ ಈ ಘಟನೆ ನಡೆದು 24 ಗಂಟೆಗಳು ಕಳೆದರೂ ಪೊಲೀಸರು ಯಾವುದೇ ಖಚಿತ ಕ್ರಮ ಕೈಗೊಂಡಿಲ್ಲ. ಘಟನೆ ಬೆಳಕಿಗೆ ಬಂದು ಆಕ್ರೋಶ ವ್ಯಕ್ತವಾಗುತ್ತಿದ್ದಂತೆ

ಪೊಲೀಸರು ಹೆಚ್ಚಿನ ವಿವರಗಳನ್ನು ಕಲೆ ಹಾಕಿ ಪ್ರಕರಣದ ಕೆಲವು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. 

ಏನಿದು ಪ್ರಕರಣ?: ಸ್ಥಳೀಯ ಮಾಧ್ಯಮ ಪ್ರಕಾರ, ಕೆಲವು ದಿನಗಳ ಹಿಂದೆ ಹಳ್ಳಿಯಲ್ಲಿ ಎರಡು ಅಥವಾ ಮೂರು ಮಹಿಳೆಯರ ಮೈ ಮೇಲೆ ದೇವಿ ಬಂದಿದ್ದಳು. ಗ್ರಾಮದ ದಲಿತ ಸಮುದಾಯದ 8 ರಿಂದ 10 ವೃದ್ಧ ಪುರುಷರು ಮತ್ತು ಮಹಿಳೆಯರು ಗ್ರಾಮದ ಮೇಲೆ ವಾಮಾಚಾರ ಮಾಡಿದರು ಎಂದು ಮೈ ಮೇಲೆ ದೇವಿ ಬಂದ ಮಹಿಳೆಯರು ಹೇಳಿದ್ದರು. ಈ ವಿಷಯ ಬೆಳಕಿಗೆ ಬಂದ ತಕ್ಷಣ, ಗ್ರಾಮದ ಅಕ್ರಮಣಕಾರಿ ಗುಂಪಿನ ಕೆಲ ಜನರು ಸಂಬಂಧಪಟ್ಟ ಎಲ್ಲರನ್ನೂ ಗ್ರಾಮದ ಚೌಕಕ್ಕೆ ಕರೆತಂದರು. ಇಲ್ಲಿನ ಕಂಬಳಿಗೆ ಕೈ ಕಾಲುಗಳನ್ನು ಕಟ್ಟಿ ಅವರನ್ನು ಹೊಡೆದಿದ್ದಾರೆ. 

 ದಲಿತ ಸಮುದಾಯದವರನ್ನು ಹೊಡೆಯುತ್ತಿರುವಾಗ ಗ್ರಾಮಸ್ಥರು ಭಯಭೀತರಾಗಿದ್ದರು ಮತ್ತು ಮೂಕ ಪ್ರೇಕ್ಷಕರಾಗಿದ್ದರು. ಇದರಿಂದಾಗಿ ಯಾರೂ ಕೂಡ ಈ ಬಗ್ಗೆ ಬಾಯಿ ಬಿಡಲಿಲ್ಲ. ಘಟನೆ ಬೆಳಕಿಗೆ ಬಂದ ನಂತರ ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ ಗಡಚಂದೂರಿನ ಉಪವಿಭಾಗದ ಪೊಲೀಸ್ ಅಧಿಕಾರಿ ಸುಶೀಲ್ ಕುಮಾರ್ ನಾಯಕ್, “ವಾನಿ ಖುರ್ದ್ ಹಳ್ಳಿಯಲ್ಲಿ ಒಂದು ಕುಟುಂಬದ ಮೇಲೆ ವಾಮಾಚಾರ ಮಾಡುತ್ತಿರುವ ಬಗ್ಗೆ ಸಂಶಯವಿತ್ತು. ಅವರನ್ನು ಥಳಿಸಲಾಯಿತು. ಪೊಲೀಸರು ಹೋಗಿ ಅವರನ್ನು ರಕ್ಷಿಸಿದರು.  ಈ ನಿಟ್ಟಿನಲ್ಲಿ ಅಪರಾಧಗಳನ್ನು ದಾಖಲಿಸಲಾಗಿದೆ.  ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು