8:37 PM Thursday20 - November 2025
ಬ್ರೇಕಿಂಗ್ ನ್ಯೂಸ್
ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:…

ಇತ್ತೀಚಿನ ಸುದ್ದಿ

ವಾಮಂಜೂರು ಚರ್ಚ್ ಹಾಲ್: 19ರಂದು ‘ವೊಜೆಂ ಉತ್ಸವ್ 2024’

17/05/2024, 21:20

ಮಂಗಳೂರು(reporterkarnataka.com): ಮಂಗಳೂರಿನ‌ ಸಾಮಾಜಿಕ ಸೇವಾ ಸಂಸ್ಥೆ ಸಾಂಗಾತಿ ಮಂಗ್ಳೂರು ಸಹಯೋಗದಲ್ಲಿ ನಗರದ ಬೊಂದೇಲ್ ಸಂತ ಲಾರೆನ್ಸ್ ಚರ್ಚು ಹಾಗೂ ಪುಣ್ಯಕ್ಷೇತ್ರದ ಸಹಾಯಾರ್ಥ ಏರ್ಪಡಿಸಿದ ವೊಜೆಂ ಉತ್ಸವ್ 2024 ಮೇ 19ರಂದು ಬೆಳಗ್ಗೆ 11 ಗಂಟೆಗೆ ವಾಮಂಜೂರು ಚರ್ಚ್ ಹಾಲ್ ನಲ್ಲಿ ಆರಂಭಗೊಳ್ಳಲಿದೆ.
ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ವಾಮಂಜೂರು ಚರ್ಚ್ ನ ಧರ್ಮಗುರುಗಳಾದ ವಂ| ಫಾ| ಜೇಮ್ಸ್ ಡಿಸೋಜ, ಬೊಂದೇಲ್ ಚರ್ಚ್ ನ ಧರ್ಮಗುರುಗಳಾದ ವಂ| ಫಾ| ಆ್ಯಂಡೂ ಲಿಯೊ ಡಿಸೋಜ, ಬೊಂದೇಲ್ ಚರ್ಚ್ ನ ಸಹಾಯಕ ಧರ್ಮಗುರುಗಳಾದ ವಂ| ಫಾ| ವಿಲಿಯಂ ಡಿಸೋಜ, ಬೊಂದೇಲ್ ಸಂತ ಲಾರೆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆಯ ಪ್ರಾಂಶುಪಾಲರಾದ ವಂ| ಫಾ| ಪೀಟರ್ ಗೊನ್ಸಾಲ್ವಿಸ್, ಅನಿವಾಸಿ ಉದ್ಯಮಿ ಜೇಮ್ಸ್ ಮೆಂಡೊನ್ಸಾ, ಯುವ ಉದ್ಯಮಿ ಎಲೊನ್ ರೊಡ್ರಿಗಸ್, ಯುವ ನಟಿ ವೆನ್ಸಿಟಾ ಡಯಾಸ್, ಸಂತ ಲಾರೆನ್ಸ್ ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಜೋನ್ ಡಿಸಿಲ್ವಾ, ಐಸಿವೈಎಂ ಮಂಗಳೂರು ಧರ್ಮಪ್ರಾಂತ್ಯದ ಅಧ್ಯಕ್ಷ ಮಿತೇಶ್ ಡಿಸೋಜ ಭಾಗವಹಿಸಲಿದ್ದಾರೆ.
ಈ ಉತ್ಸವದಲ್ಲಿ ನಗರ ಹಾಗೂ ಹೊರವಲಯದ 25 ಸದಸ್ಯರನ್ನೊಳಗೊಂಡ ಹಲವಾರು ತಂಡಗಳು ಭಾಗವಹಿಸಲಿದ್ದು, ಪ್ರೇಕ್ಷಕರಿಗೆ ಫುಡ್ ಕೋರ್ಟ್ ಗಳು ಕೂಡ ಲಭ್ಯವಿದೆ ಎಂದು ಸಂಸ್ಥೆಯ ಅಧ್ಯಕ್ಷೆ ವಿಶಾಲಿನ್ ಶಾಂತಿ ಸಲ್ದಾನ್ಹಾ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು