3:23 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ವಾಮಂಜೂರು ಚರ್ಚ್ ಹಾಲ್: 19ರಂದು ‘ವೊಜೆಂ ಉತ್ಸವ್ 2024’

17/05/2024, 21:20

ಮಂಗಳೂರು(reporterkarnataka.com): ಮಂಗಳೂರಿನ‌ ಸಾಮಾಜಿಕ ಸೇವಾ ಸಂಸ್ಥೆ ಸಾಂಗಾತಿ ಮಂಗ್ಳೂರು ಸಹಯೋಗದಲ್ಲಿ ನಗರದ ಬೊಂದೇಲ್ ಸಂತ ಲಾರೆನ್ಸ್ ಚರ್ಚು ಹಾಗೂ ಪುಣ್ಯಕ್ಷೇತ್ರದ ಸಹಾಯಾರ್ಥ ಏರ್ಪಡಿಸಿದ ವೊಜೆಂ ಉತ್ಸವ್ 2024 ಮೇ 19ರಂದು ಬೆಳಗ್ಗೆ 11 ಗಂಟೆಗೆ ವಾಮಂಜೂರು ಚರ್ಚ್ ಹಾಲ್ ನಲ್ಲಿ ಆರಂಭಗೊಳ್ಳಲಿದೆ.
ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ವಾಮಂಜೂರು ಚರ್ಚ್ ನ ಧರ್ಮಗುರುಗಳಾದ ವಂ| ಫಾ| ಜೇಮ್ಸ್ ಡಿಸೋಜ, ಬೊಂದೇಲ್ ಚರ್ಚ್ ನ ಧರ್ಮಗುರುಗಳಾದ ವಂ| ಫಾ| ಆ್ಯಂಡೂ ಲಿಯೊ ಡಿಸೋಜ, ಬೊಂದೇಲ್ ಚರ್ಚ್ ನ ಸಹಾಯಕ ಧರ್ಮಗುರುಗಳಾದ ವಂ| ಫಾ| ವಿಲಿಯಂ ಡಿಸೋಜ, ಬೊಂದೇಲ್ ಸಂತ ಲಾರೆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆಯ ಪ್ರಾಂಶುಪಾಲರಾದ ವಂ| ಫಾ| ಪೀಟರ್ ಗೊನ್ಸಾಲ್ವಿಸ್, ಅನಿವಾಸಿ ಉದ್ಯಮಿ ಜೇಮ್ಸ್ ಮೆಂಡೊನ್ಸಾ, ಯುವ ಉದ್ಯಮಿ ಎಲೊನ್ ರೊಡ್ರಿಗಸ್, ಯುವ ನಟಿ ವೆನ್ಸಿಟಾ ಡಯಾಸ್, ಸಂತ ಲಾರೆನ್ಸ್ ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಜೋನ್ ಡಿಸಿಲ್ವಾ, ಐಸಿವೈಎಂ ಮಂಗಳೂರು ಧರ್ಮಪ್ರಾಂತ್ಯದ ಅಧ್ಯಕ್ಷ ಮಿತೇಶ್ ಡಿಸೋಜ ಭಾಗವಹಿಸಲಿದ್ದಾರೆ.
ಈ ಉತ್ಸವದಲ್ಲಿ ನಗರ ಹಾಗೂ ಹೊರವಲಯದ 25 ಸದಸ್ಯರನ್ನೊಳಗೊಂಡ ಹಲವಾರು ತಂಡಗಳು ಭಾಗವಹಿಸಲಿದ್ದು, ಪ್ರೇಕ್ಷಕರಿಗೆ ಫುಡ್ ಕೋರ್ಟ್ ಗಳು ಕೂಡ ಲಭ್ಯವಿದೆ ಎಂದು ಸಂಸ್ಥೆಯ ಅಧ್ಯಕ್ಷೆ ವಿಶಾಲಿನ್ ಶಾಂತಿ ಸಲ್ದಾನ್ಹಾ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು