8:37 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ವಂಚನೆ ಪ್ರಕರಣ: ತಮಿಳುನಾಡು ಮಾಜಿ ಸಚಿವ ಹಾಸನದಲ್ಲಿ ಅರೆಸ್ಟ್

06/01/2022, 10:44

ಹಾಸನ(reporterkarnataka): ವಂಚನೆ ಆರೋಪದಡಿ ತಮಿಳುನಾಡಿನ ಎಐಡಿಎಂಕೆ ಪಕ್ಷದ ಮಾಜಿ ಸಚಿವ ರಾಜೇಂದ್ರ ಬಾಲಾಜಿ ಎಂಬುವರನ್ನು ನಗರದಲ್ಲಿ ಬುಧವಾರ ಮಧ್ಯಾಹ್ನ ಬಂಧಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ಆರೋಪಿಯ ಬೆನ್ನಟ್ಟಿದ ನೆರೆಯ ರಾಜ್ಯದ ಪೊಲೀಸರು, ಸಿನಿಮೀಯ ರೀತಿಯಲ್ಲಿ ಕಾರನ್ನು ಅಡ್ಡಗಟ್ಟಿ ಸುತ್ತುವರಿದು ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ರಾಜೇಂದ್ರ ಬಾಲಾಜಿ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ, ಸುಮಾರು ೩ ಕೋಟಿಗೂ ಹೆಚ್ಚು ಹಣ ವಸೂಲಿ ಮಾಡಿ ಮೋಸ ಮಾಡಿದ್ದ.

ಬಾಲಾಜಿ ಮತ್ತು ಈತನ ನಾಲ್ವರು ಸಹಾಯಕರು ಸೇರಿ ಸರ್ಕಾರಿ ಕೆಲಸ ಕೊಡುತ್ತೇವೆ ಎಂದು ಅನೇಕರಿಂದ ೩ ಕೋಟಿಗೂ ಅಧಿಕ ಹಣವನ್ನು ವಸೂಲಿ ಮಾಡಿ ಪಂಗನಾಮ ಹಾಕಿದ್ದರು. ಈ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿ ವಿಚಾರಣೆ ನಡೆದು ಅಂತಿಮವಾಗಿ ಕೋರ್ಟ್ ಆರೋಪಿಗಳ ಅರ್ಜಿಯನ್ನು ವಜಾಗೊಳಿಸಿತ್ತು.

ಇದರ ಬೆನ್ನಲ್ಲೇ ಪ್ರಮುಖ ಆರೋಪಿ ಬಾಲಾಜಿ ತಲೆ ಮರೆಸಿಕೊಂಡಿದ್ದ.ಈ ಹಿನ್ನೆಲೆಯಲ್ಲಿ ವಂಚನೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಕಳೆದ ೨೦ ದಿನಗಳಿಂದ ಬಂದನಕ್ಕಾಗಿ ಬಲೆ ಬೀಸಿದ್ದರು. ಎಲ್ಲಾ ರೀತಿಯ ಹುಡುಕಾಟ ನಡೆಸಿದ್ದರು. ಇದಕ್ಕಾಗಿ ವಿಶೇಷ ತಂಡಗಳನ್ನೂ ರಚನೆ ಮಾಡಲಾಗಿತ್ತು.

ಪೊಲೀಸರು ತಮ್ಮನ್ನು ಹುಡುಕುತ್ತಿದ್ದಾರೆ ಎಂಬುದನ್ನು ತಿಳಿದೋ ಏನೋ ಬಾಲಾಜಿ ಅಲ್ಲಿಂದ ಹಾಸನಕ್ಕೆ ಆಗಮಿಸಿ ಕಳೆದ ಕೆಲವು ದಿನಗಳಿಂದ ಇಲ್ಲೇ ಸುತ್ತಾಡುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಕಲೆ ಹಾಕಿದ ನೆರೆಯ ರಾಜ್ಯದ ಪೊಲೀಸರೂ ಸಹ ಎರಡು ದಿನಗಳ ಹಿಂದೆ ಜಿಲ್ಲೆಗೆ ಆಗಮಿಸಿ ಆರೋಪಿಯನ್ನು ಬೆನ್ನಟ್ಟಿದ್ದರು. ಜೊತೆಗೆ ಹಾಸನ ಜಿಲ್ಲಾ ಪೊಲೀಸರಿಗೂ ಮಾಹಿತಿ ರವಾನೆ ಮಾಡಿದ್ದರು.

ಮಾಜಿ ಸಚಿವ ನಗರದ ವಾರ್ತಾ ಇಲಾಖೆ ಮುಂಭಾಗದ ರಸ್ತೆಯಲ್ಲಿ ಕಾರಿನಲ್ಲಿ ಹೋಗುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಮತ್ತೊಂದು ಕಾರಿನಲ್ಲಿ ಹಿಂಬಾಲಿಸಿದ ಪೊಲೀಸರು, ಬಾಲಾಜಿ ಇದ್ದ ಕಾರನ್ನು ಅಡ್ಡಗಟ್ಟಿ ಸುತ್ತುವರಿದು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಾಲಾಜಿ ಯನ್ನು ಕಾರಿನಿಂದ ಇಳಿಸಿ ವಶಕ್ಕೆ ಪಡೆಯುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ್‌ಗೌಡ, ರಾಜೇಂದ್ರ ಬಾಲಾಜಿ ಬಂಧನ ಸಂಬಂಧ ನಮ್ಮ ಪೊಲೀಸರ ಸಹಾಯ ಕೇಳಿದ್ದರು. ಅದರಂತೆ ಸಹಕರಿಸಲಾಗಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು