4:41 AM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ವಂದೇ ಭಾರತ್ ಎಕ್ಸ್ ಪ್ರೆಸ್ ಬೋಗಿಯೇರಿದ ಸಂಸದ ನಳಿನ್ ಕುಮಾರ್ ಕಟೀಲ್: ಪೂರ್ವ ಸಿದ್ಧತೆ ಪರಿಶೀಲನೆ; ಡಿಆರ್ ಎಂ ಉಪಸ್ಥಿತಿ

29/12/2023, 17:35

ಮಂಗಳೂರು(reporterkarnataka.com): ಮಂಗಳೂರು- ಮಡಗಾಂವ್ ನಡುವೆ ಡಿ.30 ರಂದು ಸಂಚಾರ ಆರಂಭಿಸಲಿರುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ವ್ಯವಸ್ಥೆ ಕುರಿತು ಸಂಸದ ನಳಿನ್ ಕುಮಾರ್ ಕಟೀಲ್ ಶುಕ್ರವಾರ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸೆಂಟ್ರಲ್ ರೈಲ್ವೆ ನಿಲ್ದಾಣದ ಪಿಟ್ ಲೈನ್ ನಲ್ಲಿ ನಿಲ್ಲಿಸಲಾಗಿರುವ ವಂದೇ ಭಾರತ್ ರೈಲನ್ನೇರಿದ ಸಂಸದರು ಬೋಗಿ ಹಾಗೂ ಸೀಟುಗಳ ಪರಿಶೀಲಿಸಿದರು. ನಂತರ ಸಂಸದರು ಹೊಸದಾಗಿ ನಿರ್ಮಾಣವಾಗಿರುವ 4-5ನೇ ಫ್ಲಾಟ್ ಫಾರ್ಮ್ ಪರಿಶೀಲಿಸಿದರು. ಇದೇ ವೇಳೆ ಮಾತನಾಡಿದ ನಳಿನ್, ಕರಾವಳಿಯ ಎರಡು ನಗರಗಳನ್ನು ಬೆಸೆಯುವ ವಂದೇ ಭಾರತ್ ರೈಲು, ಪ್ರವಾಸೋದ್ಯಮ, ವಾಣಿಜ್ಯ, ಶೈಕ್ಷಣಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲಿದೆ ಎಂದರು.
ಶಾಸಕ ವೇದವ್ಯಾಸ ಕಾಮತ್, ‌ಪಲಕ್ಕಾಡ್ ವಿಭಾಗದ ಡಿಆರ್ ಎಂ ಅರುಣ್ ಕುಮಾರ್ ಚತುರ್ವೇದಿ, ಎಡಿಆರ್ ಎಂ ಜಯಕೃಷ್ಣನ್, ರೈಲ್ವೇ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು