4:41 AM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ವಂದೇ ಭಾರತ್ ಎಕ್ಸ್ ಪ್ರೆಸ್ ಬೋಗಿಯೇರಿದ ಸಂಸದ ನಳಿನ್ ಕುಮಾರ್ ಕಟೀಲ್: ಪೂರ್ವ ಸಿದ್ಧತೆ ಪರಿಶೀಲನೆ; ಡಿಆರ್ ಎಂ ಉಪಸ್ಥಿತಿ

29/12/2023, 17:35

ಮಂಗಳೂರು(reporterkarnataka.com): ಮಂಗಳೂರು- ಮಡಗಾಂವ್ ನಡುವೆ ಡಿ.30 ರಂದು ಸಂಚಾರ ಆರಂಭಿಸಲಿರುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ವ್ಯವಸ್ಥೆ ಕುರಿತು ಸಂಸದ ನಳಿನ್ ಕುಮಾರ್ ಕಟೀಲ್ ಶುಕ್ರವಾರ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸೆಂಟ್ರಲ್ ರೈಲ್ವೆ ನಿಲ್ದಾಣದ ಪಿಟ್ ಲೈನ್ ನಲ್ಲಿ ನಿಲ್ಲಿಸಲಾಗಿರುವ ವಂದೇ ಭಾರತ್ ರೈಲನ್ನೇರಿದ ಸಂಸದರು ಬೋಗಿ ಹಾಗೂ ಸೀಟುಗಳ ಪರಿಶೀಲಿಸಿದರು. ನಂತರ ಸಂಸದರು ಹೊಸದಾಗಿ ನಿರ್ಮಾಣವಾಗಿರುವ 4-5ನೇ ಫ್ಲಾಟ್ ಫಾರ್ಮ್ ಪರಿಶೀಲಿಸಿದರು. ಇದೇ ವೇಳೆ ಮಾತನಾಡಿದ ನಳಿನ್, ಕರಾವಳಿಯ ಎರಡು ನಗರಗಳನ್ನು ಬೆಸೆಯುವ ವಂದೇ ಭಾರತ್ ರೈಲು, ಪ್ರವಾಸೋದ್ಯಮ, ವಾಣಿಜ್ಯ, ಶೈಕ್ಷಣಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲಿದೆ ಎಂದರು.
ಶಾಸಕ ವೇದವ್ಯಾಸ ಕಾಮತ್, ‌ಪಲಕ್ಕಾಡ್ ವಿಭಾಗದ ಡಿಆರ್ ಎಂ ಅರುಣ್ ಕುಮಾರ್ ಚತುರ್ವೇದಿ, ಎಡಿಆರ್ ಎಂ ಜಯಕೃಷ್ಣನ್, ರೈಲ್ವೇ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು