5:54 PM Sunday18 - January 2026
ಬ್ರೇಕಿಂಗ್ ನ್ಯೂಸ್
ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ವನ್ಯಜೀವಿ ಕೊಲ್ಲಲು ಅನುಮತಿ ಕೇಳಿದ ಶಾಸಕ ಹರೀಶ್ ಪೂಂಜ ನಡೆ ದುರದೃಷ್ಟಕರ: ವಿಧಾನಸಭೆಯಲ್ಲಿ ಸಚಿವ ಈಶ್ವರ ಖಂಡ್ರೆ ಖೇದ

12/12/2024, 21:10

ಬೆಳಗಾವಿ(reporterkarnataka.com) ಆನೆಗಳಿಂದ ಕಾಡಿನಂಚಿನ ಜನರಿಗೆ ತೊಂದರೆ ಆಗುತ್ತಿದ್ದು, ಆನೆಗಳನ್ನು ಕೊಲ್ಲಲು ಅನುಮತಿ ನೀಡಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿ ಮಾತನಾಡುವುದು ದುರದೃಷ್ಟಕರ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.
ವಿಧಾನಸಭೆಯಲ್ಲಿಂದು ಪ್ರಶ್ನೋತ್ತರ ಕಲಾಪದಲ್ಲಿ ಅವರು, ರಾಜ್ಯ ಸರ್ಕಾರ ಆನೆಗಳ ಹಾವಳಿ ತಡೆಗೆ ಕಳೆದ 2 ವರ್ಷಗಳಲ್ಲಿ 489.46 ಮೀ. ಸೌರಬೇಲಿ, 284.82 ಆನೆ ತಡೆ ಕಂದಕ ನಿರ್ಮಾಣ ಮತ್ತು ನಿರ್ವಹಣೆ ಮಾಡಲಾಗುತ್ತಿದೆ, ಜೊತೆಗೆ ಹಾಸನ, ಚಿಕ್ಕಮಗಳೂರು, ಮೈಸೂರು, ಕೊಡಗು, ರಾಮನಗರ, ಚಾಮರಾಜನಗರ, ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು 8 ಆನೆ ಕಾರ್ಯಪಡೆಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ತಿಳಿಸಿದರು.
ರೇಡಿಯೋ ಕಾಲರ್ ಅಳವಡಿಸಿ ಆನೆಗಳ ಚಲನವಲನ ಗಮನಿಸಲಾಗುತ್ತಿದೆ. ಕಾಡಿನಂಚಿನ ಜನರಿಗೆ ಈ ಬಗ್ಗೆ ನಿತ್ಯ ಸಂದೇಶಗಳ ಮೂಲಕ, ಧ್ವನಿವರ್ಧಕದ ಮೂಲಕ ಎಚ್ಚರಿಕೆ ನೀಡಲಾಗುತ್ತಿದೆ. ಕೃತಕಬುದ್ಧಿಮತ್ತೆ ಆಧಾರಿತ ಕ್ಯಾಮರಾ ಅಳವಡಿಸಿ ವನ್ಯಜೀವಿಗಳ ಸಂಚಾರದ ಮೇಲೆ ನಿಗಾ ಇಡಲಾಗಿದೆ ಎಂದೂ ತಿಳಿಸಿದರು.
ವನ್ಯಜೀವಿ ದಾಳಿಯಿಂದ ಪ್ರಾಣಹಾನಿ ಆದಾಗ ಕುಟುಂಬದ ಸದಸ್ಯರಿಗೆ 15 ಲಕ್ಷ ರೂ., ಶಾಶ್ವತ ಅಂಗವಿಕಲತೆ ಉಂಟಾದರೆ 10 ಲಕ್ಷ ರೂ., ಭಾಗಶಃ –(ಶಾಶ್ವತವಾದ) ಅಂಗವಿಕಲತೆ ಉಂಟಾದರೆ 5 ಲಕ್ಷ ರೂ. ಗಾಯಗೊಂಡ ವ್ಯಕ್ತಿಗೆ 60 ಸಾವಿರ ರೂ. ಕಾಡಾನೆ ದಾಳಿಯಿಂದ ಆಸ್ತಿಪಾಸ್ತಿಗೆ ಹಾನಿ ಉಂಟಾದರೆ ಪ್ರತಿ ಪ್ರಕರಣಕ್ಕೆ 20 ಸಾವಿರ ರೂ. ದಯಾತ್ಮಕ ಪರಿಹಾರ ನೀಡಲಾಗುತ್ತಿದೆ. ಇದರ ಜೊತೆಗೆ ಮೃತರ ಕುಟುಂಬಕ್ಕೆ ಮತ್ತು ಶಾಶ್ವತ ಅಂಗವಿಕಲರಾದವರಿಗೆ ಮಾಸಿಕ 4 ಸಾವಿರ ರೂ. ಮಾಸಾಶನವನ್ನು 5 ವರ್ಷಗಳ ಕಾಲ ನೀಡಲಾಗುತ್ತಿದೆ ಎಂದೂ ಈಶ್ವರ ಖಂಡ್ರೆ ತಿಳಿಸಿದರು.
ಮನುಷ್ಯರಿಗೆ ಬದುಕುವ ಹಕ್ಕಿರುವಂತೆಯೇ ವನ್ಯಜೀವಿಗಳಿಗೂ ಬದುಕುವ ಹಕ್ಕಿದೆ ಎಂದು ಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು