10:31 PM Saturday9 - August 2025
ಬ್ರೇಕಿಂಗ್ ನ್ಯೂಸ್
ಅತ್ತೂರುಕೊಲ್ಲಿ ಅದಿವಾಸಿಗಳ ಪರ ಹೋರಾಟ: ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ… Bangalore | ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ: ವಂದೇ ಭಾರತ್ ಎಕ್ಸ್ ಪ್ರೆಸ್… ರಾಹುಲ್‌ ಗಾಂಧಿಯದ್ದು ಠುಸ್‌ ಪಟಾಕಿ, ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ಅಥವಾ ಬಿಜೆಪಿಯ… ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ: ಓರ್ವ ಆರೋಪಿಯ ಕೊಕ್ಕಡದಲ್ಲಿ ಬಂಧನ ಆಲಮಟ್ಟಿ ಡ್ಯಾಮ್ ಎತ್ತರ 524 ಮೀಟರ್‌ಗೆ ಹೆಚ್ಚಿಸುವುದು ಕರ್ನಾಟಕದ ಹಕ್ಕು: ಕೇಂದ್ರ ಜಲಶಕ್ತಿ… Chikkamagaluru | ಕಾಫಿನಾಡಲ್ಲಿ ನಿಲ್ಲದ ಕಾಡಾನೆ ಉಪಟಳ: ಹೆದ್ದಾರಿ, ಕಾಫಿ ತೋಟದಲ್ಲಿಯೂ ದಾಂಧಲೆ ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಅಳಿವಿನoಚಿನಲ್ಲಿರುವ ನೀರು ನಾಯಿಗಳ ಕಳ್ಳಬೇಟೆ: ಪ್ರಾಣಿ ಪ್ರಿಯರಿಂದ ಕಾರ್ಯಾಚರಣೆ ಮುತ್ತಾಲಿಕ್ ಜತೆ ವೇದಿಕೆ ಹಂಚಿಕೊಂಡ ಕೈ ಶಾಸಕಿ: ನಯನಾ ಮೋಟಮ್ಮ ವಿರುದ್ಧ ಪ್ರಾಯಶ್ಚಿತ್ತ… ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು…

ಇತ್ತೀಚಿನ ಸುದ್ದಿ

ರಾಜ್ಯಾದ್ಯಂತ ವರ ಮಹಾಲಕ್ಷ್ಮಿ ಹಬ್ಬ ಆಚರಣೆ: ಬೆಂಗಳೂರು, ಮಂಗಳೂರು, ಚಿಕ್ಕಮಗಳೂರು ಸೇರಿದಂತೆ ವಿವಿಧಡೆ ಸಂಭ್ರಮ

08/08/2025, 21:21

ಬೆಂಗಳೂರು(reporterkarnataka.com): ರಾಜ್ಯಾದ್ಯಂತ ಇಂದು ವರಮಹಾಲಕ್ಷ್ಮೀ ಹಬ್ಬವನ್ನು ಸಂಭ್ರಮ- ಸಡಗರದಿಂದ ಆಚರಿಸಲಾಯಿತು.
ರಾಜಧಾನಿ ಬೆಂಗಳೂರಿನ‌ ನಾನಾ ದೇಗುಲಗಳಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ನಡೆಸಲಾಯಿತು. ಹೆಂಗಳೆಯರು ವ್ರತ ಆಚರಿಸಿ ಲಕ್ಷ್ಮೀದೇವಿಯ ಆಶೀರ್ವಾದ ಬೇಡಿಕೊಂಡರು.
ಮೈಸೂರು, ಹುಬ್ಬಳ್ಳಿ, ಮಂಗಳೂರು, ಚಿಕ್ಕಮಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಹಬ್ಬ ಆಚರಿಸಲಾಯಿತು. ಚಿಕ್ಕಮಗಳೂರು ಜಿಲ್ಲೆಯ
ಕೊಟ್ಟಿಗೆಹಾರ ಪಟ್ಟಣ ಸೇರಿದಂತೆ ಬಣಕಲ್, ಬಾಳೂರು ಸುತ್ತಮುತ್ತ ವರಮಹಾಲಕ್ಷ್ಮಿ ಹಬ್ಬವನ್ನು ಗೃಹಿಣಿಯರು ಸಂಭ್ರಮದಿಂದ ಆಚರಿಸಿದರು. ಮಹಿಳೆಯರು ಮುಂಜಾನೆಯೇ ಎದ್ದು ಸ್ನಾನ ಮಡಿಯಾಗಿ ಉಪವಾಸ ವ್ರತ ಆಚರಿಸಿದರು. ಮನೆಯಲ್ಲಿ ಕಲಶ ಸ್ಥಾಪಿಸಿ ದೇವಿಗೆ ಸೀರೆ ಉಡಿಸಿ ಆಭರಣಗಳಿಂದ ಅಲಂಕರಿಸಿದರು. ದೇವಿಯ ಮುಂದೆ ಹಣವನ್ನು ಇಟ್ಟು ಪೂಜಿಸಿದರು. ಈ ಹಬ್ಬವು ಕುಟುಂಬದಲ್ಲಿ ಸುಖ,ಶಾಂತಿ,ನೆಮ್ಮದಿ,ಧನ,ದಾನ್ಯ ಸಂಪತ್ತು ಹೆಚ್ಚಾಗಲೆಂದು ಮನೆಯ ಮಹಿಳೆಯರು ಪ್ರಾರ್ಥಿಸಿದರು. ಹೆಣ್ಣು ಮಕ್ಕಳಿಗೆ, ಮುತ್ತೈದೆಯರಿಗೆ ಅರಿಶಿಣ,ಕುಂಕುಮ, ಬಳೆ ನೀಡುವ ಪದ್ದತಿಯೂ ಆಚರಣೆಯಲ್ಲಿದೆ. ಕೊಟ್ಟಿಗೆಹಾರದ ಶ್ರೀ ಸೀತಾರಾಮ ದೇವಸ್ಥಾನದಲ್ಲಿ ಮಹಿಳೆಯರು ಸೇರಿ ಸಾಮೂಹಿಕವಾಗಿ ವರಮಹಾಲಕ್ಷ್ಮಿ ಹಬ್ಬ ಆಚರಿಸಿದರು. ಅತ್ತಿಗೆರೆಯಲ್ಲಿ ಗೃಹಿಣಿಯರಾದ ಸಾವಿತ್ರಿ, ಜ್ಯೋತಿ ಹಾಗೂ ಮತ್ತಿತರರು ಸೇರಿ ಸಂಭ್ರಮದಿಂದ ವರಮಹಾಲಕ್ಷ್ಮಿ ಹಬ್ಬ ಆಚರಿಸಿದರು. ವಿವಿಧ ತಿಂಡಿ ತಿನಿಸುಗಳನ್ನು ಮಾಡಿ ಹಂಚಿದರು.

ಇತ್ತೀಚಿನ ಸುದ್ದಿ

ಜಾಹೀರಾತು