3:55 AM Tuesday21 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ರಾಜ್ಯಾದ್ಯಂತ ವರ ಮಹಾಲಕ್ಷ್ಮಿ ಹಬ್ಬ ಆಚರಣೆ: ಬೆಂಗಳೂರು, ಮಂಗಳೂರು, ಚಿಕ್ಕಮಗಳೂರು ಸೇರಿದಂತೆ ವಿವಿಧಡೆ ಸಂಭ್ರಮ

08/08/2025, 21:21

ಬೆಂಗಳೂರು(reporterkarnataka.com): ರಾಜ್ಯಾದ್ಯಂತ ಇಂದು ವರಮಹಾಲಕ್ಷ್ಮೀ ಹಬ್ಬವನ್ನು ಸಂಭ್ರಮ- ಸಡಗರದಿಂದ ಆಚರಿಸಲಾಯಿತು.
ರಾಜಧಾನಿ ಬೆಂಗಳೂರಿನ‌ ನಾನಾ ದೇಗುಲಗಳಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ನಡೆಸಲಾಯಿತು. ಹೆಂಗಳೆಯರು ವ್ರತ ಆಚರಿಸಿ ಲಕ್ಷ್ಮೀದೇವಿಯ ಆಶೀರ್ವಾದ ಬೇಡಿಕೊಂಡರು.
ಮೈಸೂರು, ಹುಬ್ಬಳ್ಳಿ, ಮಂಗಳೂರು, ಚಿಕ್ಕಮಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಹಬ್ಬ ಆಚರಿಸಲಾಯಿತು. ಚಿಕ್ಕಮಗಳೂರು ಜಿಲ್ಲೆಯ
ಕೊಟ್ಟಿಗೆಹಾರ ಪಟ್ಟಣ ಸೇರಿದಂತೆ ಬಣಕಲ್, ಬಾಳೂರು ಸುತ್ತಮುತ್ತ ವರಮಹಾಲಕ್ಷ್ಮಿ ಹಬ್ಬವನ್ನು ಗೃಹಿಣಿಯರು ಸಂಭ್ರಮದಿಂದ ಆಚರಿಸಿದರು. ಮಹಿಳೆಯರು ಮುಂಜಾನೆಯೇ ಎದ್ದು ಸ್ನಾನ ಮಡಿಯಾಗಿ ಉಪವಾಸ ವ್ರತ ಆಚರಿಸಿದರು. ಮನೆಯಲ್ಲಿ ಕಲಶ ಸ್ಥಾಪಿಸಿ ದೇವಿಗೆ ಸೀರೆ ಉಡಿಸಿ ಆಭರಣಗಳಿಂದ ಅಲಂಕರಿಸಿದರು. ದೇವಿಯ ಮುಂದೆ ಹಣವನ್ನು ಇಟ್ಟು ಪೂಜಿಸಿದರು. ಈ ಹಬ್ಬವು ಕುಟುಂಬದಲ್ಲಿ ಸುಖ,ಶಾಂತಿ,ನೆಮ್ಮದಿ,ಧನ,ದಾನ್ಯ ಸಂಪತ್ತು ಹೆಚ್ಚಾಗಲೆಂದು ಮನೆಯ ಮಹಿಳೆಯರು ಪ್ರಾರ್ಥಿಸಿದರು. ಹೆಣ್ಣು ಮಕ್ಕಳಿಗೆ, ಮುತ್ತೈದೆಯರಿಗೆ ಅರಿಶಿಣ,ಕುಂಕುಮ, ಬಳೆ ನೀಡುವ ಪದ್ದತಿಯೂ ಆಚರಣೆಯಲ್ಲಿದೆ. ಕೊಟ್ಟಿಗೆಹಾರದ ಶ್ರೀ ಸೀತಾರಾಮ ದೇವಸ್ಥಾನದಲ್ಲಿ ಮಹಿಳೆಯರು ಸೇರಿ ಸಾಮೂಹಿಕವಾಗಿ ವರಮಹಾಲಕ್ಷ್ಮಿ ಹಬ್ಬ ಆಚರಿಸಿದರು. ಅತ್ತಿಗೆರೆಯಲ್ಲಿ ಗೃಹಿಣಿಯರಾದ ಸಾವಿತ್ರಿ, ಜ್ಯೋತಿ ಹಾಗೂ ಮತ್ತಿತರರು ಸೇರಿ ಸಂಭ್ರಮದಿಂದ ವರಮಹಾಲಕ್ಷ್ಮಿ ಹಬ್ಬ ಆಚರಿಸಿದರು. ವಿವಿಧ ತಿಂಡಿ ತಿನಿಸುಗಳನ್ನು ಮಾಡಿ ಹಂಚಿದರು.

ಇತ್ತೀಚಿನ ಸುದ್ದಿ

ಜಾಹೀರಾತು