6:52 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ವರಮಹಾಲಕ್ಷ್ಮೀ ಪೂಜೆ ಹಾಗೂ ಬೆಳ್ಳಿಯ ವಾಚ್: ರಕ್ಷಾ ಬಂಧನ ಅನಾವರಣ; ಗ್ರಾಹಕರಿಗೆ ರವಿಕೆ ಕಣ ವಿತರಣೆ

21/08/2026, 18:49

*ಪ್ರಾಮಾಣಿಕತೆಯಲ್ಲಿ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡುತ್ತಿರುವ ಸಂಸ್ಥೆ ಸ್ವರ್ಣಂ ಜ್ಯುವೆಲ್ಸ್: ರೂಪಶ್ರೀ ಜೆ.ರೈ*

ಸುಳ್ಯ(reporterkarnataka.com): ಸುಳ್ಯದ ಕೆ.ಎಸ್.ಆ‌ರ್. ಟಿ .ಸಿ ಬಸ್ ನಿಲ್ದಾಣದ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ವರಮಹಾಲಕ್ಷ್ಮೀ ಹಬ್ಬ ಹಾಗೂ ಬೆಳ್ಳಿಯ ವಾಚ್, ರಕ್ಷಾ ಬಂಧನ ಅನಾವರಣ ಕಾರ್ಯಕ್ರಮ ಆ.21 ರಂದು ನಡೆಯಿತು.


ಅತಿಥಿಗಳಾಗಿ ಸೀಮಾ ಆರ್ಟ್ಸ್ ನ ಮಾಲಕರಾದ ಶ್ರೀಮತಿ ರೂಪಶ್ರೀ ಜೆ. ರೈ, ಸೂಂತೋಡು ಎಂಪೋರಿಯಂ ಮಾಲಕಿ ಶ್ರೀಮತಿ ನಳಿನಿ ಸೂರಯ್ಯ, ಸುದ್ದಿ ಚಾನೆಲ್ ನಿರೂಪಕಿ ಶ್ರೀಮತಿ ಪೂಜಾಶ್ರೀ ವಿತೇಶ್ ಸೇರಿ ವರಮಹಾಲಕ್ಷ್ಮೀ ದೇವಿಗೆ ದೀಪ ಬೆಳಗಿಸಿ , ಆರತಿ ಬೆಳಗಿದರು.
ಬಳಿಕ ಮಾತನಾಡಿದ ಶ್ರೀಮತಿ ರೂಪಶ್ರೀಯವರು ” ಹಬ್ಬಗಳಲ್ಲಿ ಅತ್ಯಂತ ಮಹತ್ವ ಮತ್ತು ಪ್ರಾಮಾಣಿಕತೆಯನ್ನು ಹೊಂದಿರುವುದಕ್ಕೆ ಇಂದಿನ ಮಹಾಲಕ್ಷ್ಮೀ ಪೂಜೆ ಸಾಕ್ಷಿಯಾಗಿದೆ. ಇದು ಅಷ್ಟ ಲಕ್ಷ್ಮೀಯರ ಪೂಜೆ , ಕೇವಲ ಸಂಪತ್ತು ಮಾತ್ರವಲ್ಲದೆ ಆಯುಷ್ಯ , ಆರೋಗ್ಯ, ಸಮೃದ್ಧಿ , ಪ್ರಗತಿಯೊಂದಿಗೆ ಲಕ್ಷ್ಮೀ ದೇವಿಯನ್ನು ಶ್ರದ್ಧಾ – ಭಕ್ತಿಯಿಂದ ಪೂಜಿಸುವ ಹಬ್ಬವಾಗಿದೆ. ವಿಶೇಷವಾಗಿ ಇಂದು ಸ್ವರ್ಣಂ ಜ್ಯುವೆಲ್ಸ್ ತಂಡ ಇದೀಗ 2ನೇ ವರ್ಷಕ್ಕೆ ಪಾದಾಪರ್ಣಗೊಳ್ಳುತ್ತಿದ್ದು, ಗ್ರಾಹಕರಿಗೆ ಪ್ರಾಮಾಣಿಕತೆಯಿಂದ ಅತ್ಯತ್ತಮ ಸೇವೆ ಮಾಡುವುದರ ಜೊತೆಗೆ ಗ್ರಾಹಕರನ್ನು ಆಕರ್ಷಿಸುವ ಪ್ರಾಪ್ತಿಯನ್ನು ದೇವರು ನೀಡಿದ್ದಾರೆ. ಇದರಿಂದ ಇತರ ಸಂಸ್ಥೆಗಳು ಕೂಡ ನಮ್ಮ ಸಾಂಪ್ರದಾಯಿಕ ಆಚರಣೆಗಳ ಕಾರ್ಯಕ್ರಮಗಳನ್ನು ಮಾಡುವಂತಾಗಲಿ. ಲಕ್ಷ್ಮೀ ದೇವಿಯ ಆಶೀರ್ವಾದ ಸದಾ ಸಂಸ್ಥೆಯ ಉನ್ನತಿಗೆ ಪಸರಿಸಿ ಅಭಿವೃದ್ಧಿಯನ್ನು ನೀಡಲಿ ಎಂದು ಶುಭಹಾರೈಸಿದರು. ಬಳಿಕ ನೂತನ ಬ್ರಾಂಡೆಡ್ ಬೆಳ್ಳಿಯ ವಾಚ್ ಮತ್ತು ಬೆಳ್ಳಿಯ ರಕ್ಷಾ ಬಂಧನ ಅನಾವರಣಗೊಳಿಸಲಾಯಿತು. ಸಂಸ್ಥೆಯ ವತಿಯಿಂದ ಆಗಮಿಸಿದ ಮಹಿಳೆಯರಿಗೆ ಅರಶಿಣ, ಕುಂಕುಮ, ರವಿಕೆ ಕಣ ಸಿಹಿತಿಂಡಿ ನೀಡಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಪಾಲುದಾರರಾದ ಪ್ರವೀಣ್ ಬಿ. ಗೌಡ, ಸಂಜೀವ ಕೆ, ಲೋಕೇಶ್ ಎಂ.ಎಸ್, ಭವಿತ್ ಯು, ಶ್ರೀಮತಿ ಅಶ್ವಿನಿ ಪ್ರವೀಣ್, ಶ್ರೀಮತಿ ಷಡಾಕ್ಷರಿ, ಕು.ವಾಮಿಕ, ಕು. ಹಿತಾ ,ಸಿಬ್ಬಂದಿ ಶೋಧನ್, ಗ್ರಾಹಕರಾದ ಶೋಭಾ , ಹರಿಣಿ ,ಶ್ರೀಮತಿ ಭವಿತ, ಕು. ಹರ್ಷಿತಾ , ಕು.ವಾಂಚಿತ, ಪವಿತ್ರ,ಪ್ರೇಮಲತಾ,ಅಭಿಜ್ಞಾ,ಸುನಿತಾ ,ಹಿತೈಷಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು