3:34 PM Sunday28 - June 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ…

ಇತ್ತೀಚಿನ ಸುದ್ದಿ

ವರಂಗ ಜೈನ ಮಠದ ಕೆರೆಯಲ್ಲಿ ಈಜಲಾಗದೆ ಒದ್ದಾಡಿದ ಯುವಕರು; ಲೈಫ್ ಜಾಕೆಟ್ ನೀಡಿ ರಕ್ಷಿಸಿದ ಪ್ರವಾಸಿಗರು

11/06/2024, 11:11

ಕಾರ್ಕಳ(reporterkarnataka.com): ಈಜಲು ಹೋದ ಯುವಕರು ನೀರಿನ ಮಧ್ಯದಲ್ಲಿ ಈಜಲು ಸಾಧ್ಯವಾಗದೆ ಒದ್ದಾಡುತ್ತಿದ್ದಾಗ ಲೈಫ್ ಜಾಕೆಟ್ ನೀಡಿ ಜೀವ ಉಳಿಸಿದ ಘಟನೆ ಹೆಬ್ರಿಯ ತಾಲೂಕಿನ ವರಂಗ ಜೈನ ಮಠದ ಕೆರೆಯಲ್ಲಿ ನಡೆದಿದೆ.

ಹೊರಜಿಲ್ಲೆಯಿಂದ ಆಗಮಿಸಿದ ಇಬ್ಬರು ಯುವಕರು ಕೆರೆಯಲ್ಲಿ ಒಂದು ದಡದಿಂದ ಕೆರೆ ಮಧ್ಯೆ ಇರುವ ಜೈನ ಮಠಕ್ಕೆ  ಈಜಿಕೊಂಡು ಸಾಗಿದ್ದಾರೆ. ಆದರೆ ನೀರಿನ ಮದ್ಯದಲ್ಲಿ ಯುವಕರು ಈಜಲು ಸಾಧ್ಯವಾಗದೇ ಒದ್ದಾಡಿದ್ದಾರೆ . ಈ ಸಂದರ್ಭದಲ್ಲಿ ಘಟನಾ ಸ್ಥಳಕ್ಕೆ ಪ್ರವಾಸಕ್ಕೆ  ಅಗಮಿಸಿದ್ದರು ಲೈಫ್ ಜಾಕೆಟ್ ಬಿಸಾಡಿ ಯುವಕರನ್ನು ರಕ್ಷಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ದೇವಾಲಯ ಪುರೋಹಿತರು ಯುವಕರನ್ನು ತರಾಟೆಗೆ ತೆಗೆದುಕೊಂಡ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
*ಸೆಕ್ಯುರಿಟಿ ಇಲ್ಲ:* ದಿನನಿತ್ಯ ಒಂದುವರೆ ಸಾವಿರಕ್ಕೂ ಹೆಚ್ಚು ಭಕ್ತಾಧಿಗಳು ವರಂಗ ಕೆರೆಬಸದಿಗೆ ಅಗಮಿಸಿ ನಿಸರ್ಗದ ನಡುವೆ ಖುಷಿ ಯನ್ನು ಕಳೆಯುತ್ತಾರೆ. ಆದರೆ ಅದರಲ್ಲೂ ವಿಕೆಂಡ್ ನಲ್ಳಿ ರಜಾದಿನಗಳಲ್ಲಿ ನಿತ್ಯ 2000 ಕ್ಕೂ ಹೆಚ್ಚು ಭಕ್ತಾಧಿಗಳು ಆಗಮಿಸುತ್ತಾರೆ ಆದರೆ ಮಠದ ಆಡಳಿತ ಮಂಡಳಿಯ ನಿರ್ಲಕ್ಷ್ಯ ವೆ ಘಟನೆ ಗೆ ಸಾಕ್ಷಿ ಯಾಗಿದೆ. ಮಧ್ಯಾಹ್ನ ಹೊತ್ತಿಗೆ ಒಂದು ಘಂಟೆಗೆ ಗಳ ಸಮಯದಲ್ಲಿ ಅಂಬಿಗ ಊಟಕ್ಕೆ ತೆರಳುವ ವೇಳೆಯಲ್ಲಿ ಸೆಕ್ಯುರಿಟಿ ಯನ್ನು ನೇಮಿಸಲು ಸಾಧ್ಯವಾಗಿಲ್ಲ. ಅಕಸ್ಮಾತ್ತಾಗಿ ಪ್ರಾಣ ಹಾನಿ ಸಂಭವಿಸಿದರೆ ದುರಂತ ನಡೆದುಹೋಗುತಿತ್ತು.. ಬಸದಿಯ ಆಡಳಿತ ಮಂಡಳಿಯ ತೀರಾ ನಿರ್ಲಕ್ಷ್ಯ ವೆ ಘಟಕನೆಗೆ ಹೊಣೆಯಾಗಿದೆ.
ಘಟನೆ ಬಗ್ಗೆ ಮಠದ ಆಡಳಿತ ಮಂಡಳಿಯನ್ನು  ವಿಚಾರಿಸಿದಾಗ ಘಟನೆಯು  ದೋಣಿಯ ಅಂಬಿಗ ಹಾಗೂ ಜೈನ‌ಮಠದ ಪೂಜಾರಿ  ಊಟಕ್ಕೆ ತೆರಳಿದ ವೇಳೆ ಈ ಯುವಕರು ನೀರಿಗಿಳಿದು  ಹುಚ್ಚಾಟ ನಡೆಸಿದ್ದಾರೆ‌ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು