10:19 PM Thursday14 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ವಾರ್ಡನ್ ನಿರ್ಲಕ್ಷ್ಯ: ಮೊರಾರ್ಜಿ ದೇಸಾಯಿ ವಸತಿ ನಿಲಯದ ಆಹಾರದಲ್ಲಿ ದೋಷ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

06/07/2024, 18:53

ವಿರೂಪಾಕ್ಷ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆ ಮಾನ್ವಿ ಪಟ್ಟಣದ ಸಂಗಪೂರ ರಸ್ತೆಯಲ್ಲಿನ ರಾಜಲಬಂಡಿ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ಆಹಾರದಲ್ಲಿನ ವ್ಯತ್ಯಯದಿಂದಾಗಿ 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಪಟ್ಟಣದಲ್ಲಿನ ಸರಕಾರಿ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ತಾಲೂಕಿನ ರಾಜಲಬಂಡ ಗ್ರಾಮಕ್ಕೆ ಮಂಜೂರಾದ ಮೊರಾರ್ಜಿ ದೇಸಾಯಿ ವಸತಿ ನಿಲಯವು ಕಟ್ಟಡದ ಕೊರತೆಯಿಂದಾಗಿ ಪಟ್ಟಣದಲ್ಲಿನ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಇಲ್ಲಿ 199ಕ್ಕೂ ಹೆಚ್ಚು ಬಾಲಕ, ಬಾಲಕಿಯರು ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಇಲ್ಲಿನ ನೀರನ್ನು ಶುದ್ದೀಕರಿಸುವುದಕ್ಕಾಗಿ ನೀರಿನ ಟ್ಯಾಂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕ್ಲೋರಿನ್ ಪುಡಿಯನ್ನು ಬೆರೆಸಿದ್ದು ಅಂತಹ ನೀರನ್ನು ಶುಕ್ರವಾರ ರಾತ್ರಿ ಸಮಯದ ಊಟವನ್ನು ಅಡುಗೆಯವರು ಸಿದ್ದಪಡಿಸುವಾಗ ಅನ್ನ ಮಾಡುವುದಕ್ಕೆ ಬಳಕೆ ಮಾಡಿರುವುದರಿಂದ ವಿದ್ಯಾರ್ಥಿಗಳಲ್ಲಿ ವಾಂತಿ ಮತ್ತು ಹೊಟ್ಟೆನೋವಿನ ಲಕ್ಷಣಗಳು ಕಂಡುಬಂದಿದೆ. ಕೂಡಲೇ ವಸತಿ ನಿಲಯದ ಸಿಬ್ಬಂದಿಗಳು ಆಸ್ಪತ್ರೆಗೆ ದಾಖಲಿಸಿದರೆ.


ತಾಲೂಕು ಅರೋಗ್ಯಧಿಕಾರಿ ಡಾ.ಶರಣಬಸವರಾಜ ಮಾತನಾಡಿ ಪಟ್ಟಣದಲ್ಲಿನ ಸರಕಾರಿ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ವಸತಿ ನಿಲಯದ 29 ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ದಾಖಲಿಸಿಕೊಂಡು ಅಗತ್ಯವಾದ ಎಲ್ಲಾ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ವಸತಿ ನಿಲಯಕ್ಕೆ ಭೇಟಿ ನೀಡಿ ವಸತಿ ನಿಲಯದ ಎಲ್ಲಾ ವಿದ್ಯಾರ್ಥಿಗಳ ಅರೋಗ್ಯ ಪರೀಕ್ಷೆಯನ್ನು ವೈದ್ಯರ ತಂಡದಿಂದ ನಡೆಸಲಾಗುತ್ತಿದ್ದು ಅಗತ್ಯವಿದವರಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ನೀಡಿದ ಅಹಾರದ ಮಾದರಿಯನ್ನು ತೆಗೆದು ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದರು.
ಮಕ್ಕಳಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸರಿಯಾಗಿ ಒದಗಿಸುತ್ತಿಲ್ಲ.̺ ಸಮವಸ್ತ್ರ ಮಕ್ಕಳ ಕಿಟ್ಟುಗಳನ್ನು ಕೊಡುತ್ತಿಲ್ಲ. ಪ್ರಿನ್ಸಿಪಾಲ್ ವಾರದಲ್ಲಿ ಮೂರು ದಿನ ಹಾಜರಾಗುತ್ತಾರೆ. ವಾರ್ಡನ್ ರಾಯಚೂರಿನಲ್ಲಿ ಮನೆ ಮಾಡಿ ಅವರು ವಾರದಲ್ಲಿ ನಾಲ್ಕು ದಿನ ಬರುತ್ತಾರೆ ಎಂದು ಆರೋಪ ಕೇಳಿ ಬರುತ್ತಿದೆ.
ವಸತಿ ನಿಲಯದಲ್ಲಿ ವೈದ್ಯರಾದ ಡಾ.ಅಂಬಿಕಾ ಮಧುಸೂದನ್ ವಿದ್ಯಾರ್ಥಿಗಳ ಅರೋಗ್ಯ ಪರೀಕ್ಷೆ ನಡೆಸಿ ಚಿಕಿತ್ಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು