1:43 PM Saturday2 - August 2025
ಬ್ರೇಕಿಂಗ್ ನ್ಯೂಸ್
ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು…

ಇತ್ತೀಚಿನ ಸುದ್ದಿ

ವರ್ಗಾವಣೆ ಆದೇಶ ಬೆನ್ನಲ್ಲೇ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಮುಖ್ಯಮಂತ್ರಿ ಭೇಟಿ: ಅರ್ಧ ತಾಸಿಗೂ ಹೆಚ್ಚು ಕಾಲ ಚರ್ಚೆ

06/06/2021, 13:27

ಬೆಂಗಳೂರು(reporterkarnataka news) : ವರ್ಗಾವಣೆ ಆದೇಶದ ಬೆನ್ನಲ್ಲೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ‌‌‌ಯಾಗಿ ಮಾತನಾಡಿದರು. ವರ್ಗಾವಣೆ ತಡೆಹಿಡಿಯುವಂತೆ ಅವರು ಮುಖ್ಯ ಮಂತ್ರಿಯಲ್ಲಿ ಮನವಿ‌ ಮಾಡಿದ್ದಾರೆ.

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು‌ ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ನಡುವಿನ ಸಂಘರ್ಷ ಇತ್ತೀಚೆಗೆ ತಾರಕಕ್ಕೇರಿದ ಹಿನ್ನೆಲೆಯಲ್ಲಿ ಸರಕಾರ

ಇಬ್ಬರೂ ಅಧಿಕಾರಿಗಳ ವರ್ಗಾವಣೆಗೆ ಆದೇಶ ನೀಡಿತ್ತು. ಇದರ ಬೆನ್ನಲ್ಲೇ ಇದೀಗ ರೋಹಿಣಿ ಸಿಂಧೂರಿ ಅವರು ಸಿಎಂ ಭೇಟಿ‌ ಮಾಡಿದ್ದಾರೆ.

ರೋಹಿಣಿ ಸಿಂಧೂರಿ‌ ಅವರು ಸಿಎಂ ಜತೆ ಸುಮಾರು ಅರ್ಧ ತಾಸಿಗೂ ಅಧಿಕ ಕಾಲ ಮಾತುಕತೆ ನಡೆಸಿದ್ದಾರೆ. ಪ್ರಕರಣದಲ್ಲಿ ತಮ್ಮದೇನು ತಪ್ಪಿಲ್ಲ,  

ವರ್ಗಾವಣೆ ಆದೇಶವನ್ನು ತಡೆ ಹಿಡಿಯುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಸಿಎಂ  ಒಪ್ಪಿಗೆ ಸೂಚಿಸಿಲ್ಲ ಎನ್ನಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು