1:31 AM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ವರ್ಷಕ್ಕೆ ಅರ್ಧ ಕೋಟಿಗೂ ಹೆಚ್ಚು ಆದಾಯವಿದ್ದರೂ ಅಭಿವೃದ್ಧಿ ಕಾಣದ ಮುಜರಾಯಿ ಇಲಾಖೆಯ ಮಾದಪ್ಪನ ದೇವಾಲಯ: ಗೋಪುರದಿಂದ ಕಳಚಿ ಬೀಳುತ್ತಿದೆ ವಿಗ್ರಹಗಳ ಬಿಡಿ ಭಾಗಗಳು

21/11/2023, 12:58

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಅಭಿವೃದ್ದಿ ಕಾಣಲೆಂದು ಮುಜರಾಯಿ ಇಲಾಖೆಗೆ ಸೇರ್ಪಡೆಯಾದ ಸುಂದರ ಪರಿಸರ ಹಾಗೂ ಕಾಡಂಚಿನಲ್ಲಿರುವ ಇತಿಹಾಸ ಪ್ರಸಿದ್ಧ ಬೇಲದಕುಪ್ಪೆ ಶ್ರೀ ಮಲೆಮಹದೇಶ್ವರಸ್ವಾಮಿ ದೇವಸ್ಥಾನ ಇಂದು ಸರ್ಕಾರ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಒಳಗಾಗಿದೆ.
ರಾಜ್ಯದ ಮೂಲೆ ಮೂಲೆಗಳಿಂದ ಅಪಾರ ಸಂಖ್ಯೆ ಭಕ್ತರನ್ನ ಹೊಂದಿರುವ ಈ ದೇವಾಲಯಕ್ಕೆ ವಿದ್ಯುತ್ ಸಂಪರ್ಕವೇ ಇಲ್ಲ. ಇಷ್ಟೇ ಅಲ್ಲದೆ ಸುಣ್ಣ,ಬಣ್ಣ ಹೊಡೆಯುವ ಭಾಗ್ಯವೂ ಸಿಕ್ಕಿಲ್ಲ.ಇನ್ನು ದೇವಾಲಯ ಹಾಗೂ ಗೋಪುರದ ವಿಗ್ರಹಗಳ ಪಾಡಂತೂ ಕೇಳುವರೇ ಇಲ್ಲದಂತಾಗಿ ಮುರಿದು ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ.
ಇದು ಮೂರು ತಾಲೂಕುಗಳ ಗಡಿಭಾಗದಲ್ಲಿರುವ ಬೇಲದಕುಪ್ಪೆ ಶ್ರೀ ಮಹದೇಶ್ವರ ಸ್ವಾಮಿ ದೇವಾಲಯದ ದುಃಸ್ಥಿತಿ.


ನಂಜನಗೂಡು, ಗುಂಡ್ಲುಪೇಟೆ, ಸರಗೂರು, ಈ ಮೂರು ತಾಲೂಕುಗಳ ವ್ಯಾಪ್ತಿಯ ಸರಹದ್ದಿನಲ್ಲಿ ಮಾದಪ್ಪನ ದೇವಾಲಯ ನೂರಾರು ವರ್ಷಗಳ ಹಿಂದೆ ನಿರ್ಮಾಣವಾಗಿದೆ.
ವರ್ಷಕ್ಕೆ ಅರ್ಧ ಕೋಟಿಗೂ ಹೆಚ್ಚು ಆದಾಯ ಗಳಿಸುವ ದೇವಾಲಯವೂ ಆಗಿದೆ.
ಬ್ಯಾಂಕ್ ಖಾತೆಯಲ್ಲಿ ಕೋಟಿಗೂ ಅಧಿಕವಾದ ಹಣ ಇದ್ದರೂ ದೇವಸ್ಥಾನದ ಅಭಿವೃದ್ದಿ ಮಾತ್ರ ಮರೀಚಿಕೆಯಾಗಿದೆ.
ಅಮಾವಾಸ್ಯೆ ಹುಣ್ಣಿಮೆ ಹಾಗೂ ಸೋಮವಾರ, ಶುಕ್ರವಾರ ಬಂದರೆ ಇಲ್ಲಿ ವಿಶೇಷ ಪೂಜೆಗಳು ನೆರವೇರುತ್ತದೆ.
ರಾಜ್ಯದ ವಿವಿಧ ಭಾಗಗಳಿಂದ ಭಕ್ತರ ದಂಡು ಆಗಮಿಸಿ ಪೂಜಾ ಕೈಂಕರ್ಯಗಳಲ್ಲಿ ತೊಡಗಿಸಿಕೊಂಡು ಹರಕೆ ಸಹ ಸಲ್ಲಿಸುತ್ತಾರೆ.
ಹಲವು ವರ್ಷಗಳಿಂದ ದೇವಸ್ಥಾನ ಖಾಸಗಿ ಟ್ರಸ್ಟಿನ ಆಡಳಿತದಲ್ಲಿತ್ತು.
ಇನ್ನೂ ಹೆಚ್ಚಿನ ಅಭಿವೃದ್ದಿ ಕಾಣಲೆಂಬ ಕಾರಣಕ್ಕೆ ಸುತ್ತಮುತ್ತಲಿರುವ ನೂರಾರು ಹಳ್ಳಿಗಳ ಭಕ್ತರ ಒತ್ತಾಯದ ಮೇರೆಗೆ ಸರ್ಕಾರದ ಮುಜುರಾಯಿ ಇಲಾಖೆ ವ್ಯಾಪ್ತಿಗೆ ಒಳಪಡಿಸಲಾಯಿತು.
ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಚಾಮರಾಜನಗರ ಜಿಲ್ಲೆಯ ಮಾದೇಶ್ವರ ಬೆಟ್ಟದಂತೆ ಅಭಿವೃದ್ಧಿಪಡಿಸುತ್ತಾರೆ ಎಂಬ ಆಶಯದಿಂದ ಮುಜರಾಯಿ ಇಲಾಖೆಗೆ ಸೇರಿಸಲಾಯಿತು.
ದುರಂತವೆಂದರೆ ಒಂದು ವರ್ಷವಾದರೂ ದೇವಾಲಯದ ದುಃಸ್ಥಿತಿ ಬದಲಾಗಿಲ್ಲ‌.
ಇನ್ನು 15 ದಿನಗಳಲ್ಲಿ ಪ್ರತಿ ವರ್ಷದಂತೆ ಕಾರ್ತಿಕ ಮಾಸದಲ್ಲಿ ದೊಡ್ಡ ಜಾತ್ರೆ ನಡೆಯಲಿದೆ.
ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಜಾತ್ರೆಗೆ ಆಗಮಿಸುತ್ತಾರೆ.
ಆದರೆ ಇಲ್ಲಿ ಇನ್ನೂ ಯಾವುದೇ ರೀತಿಯ ಮಂಜಾಗ್ರತ ಕ್ರಮ ಕೈಗೊಂಡಿಲ್ಲ.
ಜಾತ್ರಾ ಮಹೋತ್ಸವ ಕಾರ್ಯಕ್ಕೆ ಸಿದ್ಧತೆ ನಡೆಸಿಲ್ಲ. ದೇವಾಲಯದ ಮೇಲ್ಭಾಗದ ಗೋಪುರಗಳಲ್ಲಿ ದೇವರ ವಿಗ್ರಹಗಳ ಹಲವಾರು ಭಾಗಗಳು ಕಳಚಿ ಬಿದ್ದಿವೆ. ಸಾಕಷ್ಟು ವಿಗ್ರಹಗಳು ವಿಘ್ನವಾಗಿವೆ.
ದೇವಾಲಯದ ದುಃಸ್ಥಿತಿಯನ್ನ ಸಾರಿ ಹೇಳುವ ವಿಗ್ರಹಗಳನ್ನ ಸರಿಪಡಿಸುವ ಬಗ್ಗೆ ಯಾರೂ ತಲೆಕೆಡಿಸಿಕೊಂಡಿಲ್ಲ.
ಚುನಾವಣೆ ಬಂತೆಂದರೆ ಮೂರು ತಾಲೂಕುಗಳ ಹಾಲಿ ಮತ್ತು ಮಾಜಿ ಶಾಸಕರುಗಳು ಈ ದೇವಾಲಯದಿಂದಲೇ ಮೊದಲ ಪೂಜೆ ಸಲ್ಲಿಸಿದ ನಂತರ ಪ್ರಚಾರ ಕೈಗೊಳ್ಳುತ್ತಾರೆ.
ಇಷ್ಟೆಲ್ಲಾ ನಂಬಿಕೆ, ಭಕ್ತಿ ಇರುವ ದೇವಾಲಯದ ಅಭಿವೃದ್ಧಿಗೆ ಮಾತ್ರ ಯಾರೂ ತಲೆಕೆಡಿಸಿಕೊಳ್ಳದೆ ಇರುವುದು ನಿಜಕ್ಕೂ ವಿಪರ್ಯಾಸ.
ಮೂಲಭೂತ ಸೌಕರ್ಯದ ಕೊರತೆ ಹಾಗೂ ಕಗ್ಗತ್ತಿಲಿನಲ್ಲಿ ಮುಳುಗಿರುವ ದೇವಾಲಯಕ್ಕೆ ಇನ್ನಾದರೂ ಜಿಲ್ಲಾ ಮತ್ತು ತಾಲೂಕು ಆಡಳಿತ ಎಚ್ಚೆತ್ತು ಕೊಂಡು ಪ್ರಸಿದ್ಧ ಧಾರ್ಮಿಕ ತಾಣವಾಗಿರುವ ಬೇಲದ ಕುಪ್ಪೆ ಶ್ರೀ ಮಹದೇಶ್ವರ ಸ್ವಾಮಿಯ ದೇವಾಲಯವನ್ನು ಅಭಿವೃದ್ಧಿಪಡಿಸಲು ಮುಂದಾಗಿ ಭಕ್ತರ ಭಾವನೆಗೆ ಸ್ಪಂದಿಸಬೇಕಿದೆ ಎಂದು ಜನ ಸಂಗ್ರಾಮ ಪರಿಷತ್ತಿನ ರಾಜ್ಯಾಧ್ಯಕ್ಷ ನಗರ್ಲೆ ವಿಜಯಕುಮಾರ್ ಹೇಳುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು