11:40 PM Monday12 - May 2025
ಬ್ರೇಕಿಂಗ್ ನ್ಯೂಸ್
ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್…

ಇತ್ತೀಚಿನ ಸುದ್ದಿ

ವರುಣ ಕ್ಷೇತ್ರದಲ್ಲಿ ವರುಣನ ಅಬ್ಬರಕ್ಕೆ ತುಂಬಿದ ಕೆರೆ-ಕಟ್ಟೆಗಳು; ಬಾಗಿನ ಅರ್ಪಿಸಿದ ಗ್ರಾಮಸ್ಥರು

24/05/2024, 17:22

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ವರುಣ ವಿಧಾನಸಭಾ ಕ್ಷೇತ್ರದಲ್ಲಿ ವರುಣನ ಅಬ್ಬರಕ್ಕೆ ಕೆರೆ-ಕಟ್ಟೆಗಳು ತುಂಬಿ ಕೋಡಿ ಬಿದ್ದು ಹರಿದಿದ್ದು, ಗ್ರಾಮಸ್ಥರ ಮುಖದಲ್ಲಿ ಮಂದಹಾಸ ಮೂಡಿದೆ.


ನಂಜನಗೂಡು ತಾಲ್ಲೂಕಿನ ತಾಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಈಶ್ವರಗೌಡನಹಳ್ಳಿ ಗ್ರಾಮದಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಗೆ ಕೆರೆ ಸಂಪೂರ್ಣವಾಗಿ ಭರ್ತಿಯಾಗಿದ್ದು, ಗ್ರಾಮಸ್ಥರು ಬಾಗಿನ ಅರ್ಪಿಸಿ ಪೂಜೆಯನ್ನು ಸಲ್ಲಿಸಿದ್ದಾರೆ.
ಕಳೆದ ಮೂರು ನಾಲ್ಕು ತಿಂಗಳಿಂದ ಬಿಸಿಲಿನ ತಾಪ ಹೆಚ್ಚಾಗಿತ್ತು, ಜನ-ಜಾನುವಾರುಗಳಿಗೆ ನೀರಿಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ರಾತ್ರಿ ಸುರಿದ ಧಾರಾಕಾರ ಮಳೆಗೆ ಕೆರೆ ಭರ್ತಿಯಾಗಿದೆ. ಅಲ್ಲದೆ ರಾಜ್ಯದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅಧಿಕಾರ ವಹಿಸಿಕೊಂಡು ಒಂದು ವರ್ಷವಾಗಿದೆ. ಈ ಹಿನ್ನೆಲೆಯಲ್ಲಿ ಈ ದಿನವೇ ನಮ್ಮ ಕ್ಷೇತ್ರದಲ್ಲಿ ಎಲ್ಲಾ ಕೆರೆಗಳು ತುಂಬಿವೆ ಎಂದು ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ರೈತರು ಕೃಷಿ ಚಟುವಟಿಕೆ ನಡೆಸಲು ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ. ಕೆರೆ-ಕಟ್ಟೆಗಳು ತುಂಬುವುದರಿಂದ ಕುಡಿಯುವ ನೀರಿಗೆ ಮತ್ತು ಕೃಷಿ ಚಟುವಟಿಕೆ ನಡೆಸಲು ಯಾವುದೇ ರೀತಿ ತೊಂದರೆಯಾಗುವುದಿಲ್ಲ ಎಂದು ಗ್ರಾಮಸ್ಥರು ತುಂಬಿದ ಕೆರೆಗೆ ಬಾಗಿನ ಅರ್ಪಿಸಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ರೈತ ಮುಖಂಡರಾದ ರೇವಣ್ಣ, ಬಸವಣ್ಣ, ಕೇಬಲ್ ಶಿವಣ್ಣ, ನಿಂಗರಾಜು, ಶೇಖರ್ ಚಂದ್ರಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು