7:30 PM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಮಾಣಿ ಮಠದಲ್ಲಿ ವಸಂತ ವೇದ ಶಿಬಿರ ಉದ್ಘಾಟನೆ; ಶಿಸ್ತು,ಶ್ರದ್ಧೆ ಕಲಿಕೆಗೆ ಪೂರಕ: ಹಾರಕೆರೆ ನಾರಾಯಣ ಭಟ್

16/04/2025, 11:50

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ವಿದ್ಯಾರ್ಥಿಗಳು ಶಿಸ್ತು ರೂಢಿಸಿಕೊಂಡು ಶ್ರದ್ಧೆಯಿಂದ ಕಲಿಯಬೇಕು. ವೇದ ಶಿಬಿರದಲ್ಲಿ ಆಸಕ್ತಿಯಿಂದ ಭಾಗವಹಿಸಿ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದು ಮಾಣಿ ಪೆರಾಜೆ ಶ್ರೀ ರಾಮಚಂದ್ರಾಪುರ ಮಠದ ಆಡಳಿತ ಸಮಿತಿ ಅಧ್ಯಕ್ಷ ಹಾರಕೆರೆ ನಾರಾಯಣ ಭಟ್ ಹೇಳಿದರು.


ಅವರು ಪೆರಾಜೆ ಮಠದಲ್ಲಿ‌ ಏರ್ಪಡಿಸಲಾದ ವಸಂತ ವೇದ ಶಿಬಿರ 2025ರ‌ ಉದ್ಘಾಟನಾ ಸಮಾರಂಭದ‌ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವೇ.ಮೂ.ಕಾಂಚನ ಕೃಷ್ಣ ಕುಮಾರ್ ಶಿಬಿರ ಉದ್ಘಾಟಿಸಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ನಮ್ಮ ಪೂರ್ವಜರು ಹಾಕಿಕೊಟ್ಟ ಸಂಸ್ಕಾರದಂತೆ ವೇದಗಳ ಅಧ್ಯಯನ ಮಾಡುವ ಮೂಲಕ ಜ್ಞಾನ ‌ಭಂಡಾರ ಹೆಚ್ಚಿಸಿಕೊಳಬೇಕು. ಕಲಿತ ವಿದ್ಯೆ ಭದ್ರಪಡಿಸಲು ಮತ್ತೆಮತ್ತೆ ಅಧ್ಯಯನ ಮಾಡುವುದು ಅಗತ್ಯ ಎಂದರು.
ಸಂಪನ್ಮೂಲ ವ್ಯಕ್ತಿ ಅಶೋಕೆಯ ವಿಷ್ಣುಗುಪ್ತ ವಿಶ್ವವಿದ್ಯಾಲಯದ ಪ್ರಮುಖ ಗುರು ಉಂಡೆಮನೆ ವಿಶ್ವೇಶ್ವರ ಭಟ್ ಮುಖ್ಯ ‌ಅತಿಥಿಯಾಗಿ ಮಾತನಾಡಿದರು. ಮಕ್ಕಳ ಸಾಮರ್ಥ್ಯ ಸದ್ಬಳಕೆಯಾಗುವಂತೆ ಹೆತ್ತವರು ವ್ಯವಸ್ಥೆ ಮಾಡಬೇಕು. ಸೋಲನ್ನೂ ಸವಾಲಾಗಿ ಸ್ವೀಕರಿಸುವ ಧೈರ್ಯವನ್ನು ಮಕ್ಕಳಲ್ಲಿ ಬೆಳೆಸಬೇಕು.ಬುದ್ಧಿ ವಂತಿಕೆಯೊಂದಿಗೆ ಹೃದಯವಂತಿಕೆಯೂ ಮುಖ್ಯವೆಂದರು.
ಯೋಗಶಿಕ್ಷಕ ವೆಂಕಟರಮಣ ಹೆಗಡೆ ಮಾತನಾಡಿ ಯೋಗದ ಮಹತ್ವ ತಿಳಿಸಿದರು.
ಪ್ರಧಾನ ಅರ್ಚಕ ವೇಮೂ. ವಿಘ್ನೇಶ್ವರ ಭಟ್ ,ವೇಮೂ. ಮಿತ್ತೂರು ಸತ್ಯಶಂಕರ ಭಟ್, ಕಾರ್ಯದರ್ಶಿ ಶಿವ ಪ್ರಸಾದ ಉಪಸ್ಥಿತರಿದ್ದರು.
ನಾರಾಯಣ ಭಟ್ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.
ವೇಮೂ. ಭಾರ್ಗವ ನಾರಾಯಣ ನಿರೂಪಿಸಿದರು. ಸಂಸ್ಕೃತ ಅಧ್ಯಾಪಕ ಶ್ರೀಹರಿ ಭಟ್ ವಂದಿಸಿದರು. ಒಂದು‌ ತಿಂಗಳು 50 ವಿದ್ಯಾರ್ಥಿಗಳಗೆ ವೇದಾಧ್ಯಯನದೊಂದಿಗೆ ನೈಮಿತ್ತಿಕ ಹಾಗೂ ವ್ಯಕ್ತಿತ್ವ ಬೆಳೆವಣಿಗೆಗೆ ಪೂರಕವಾದ ವಿಷಯಗಳನ್ನು ಶಿಕ್ಷಕರು ಕಲಿಸಿಕೊಡುವರು.

ಇತ್ತೀಚಿನ ಸುದ್ದಿ

ಜಾಹೀರಾತು