6:52 AM Wednesday24 - December 2025
ಬ್ರೇಕಿಂಗ್ ನ್ಯೂಸ್
ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಇತ್ತೀಚಿನ ಸುದ್ದಿ

ಮಾಣಿ ಮಠದಲ್ಲಿ ವಸಂತ ವೇದ ಶಿಬಿರ ಉದ್ಘಾಟನೆ; ಶಿಸ್ತು,ಶ್ರದ್ಧೆ ಕಲಿಕೆಗೆ ಪೂರಕ: ಹಾರಕೆರೆ ನಾರಾಯಣ ಭಟ್

16/04/2025, 11:50

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ವಿದ್ಯಾರ್ಥಿಗಳು ಶಿಸ್ತು ರೂಢಿಸಿಕೊಂಡು ಶ್ರದ್ಧೆಯಿಂದ ಕಲಿಯಬೇಕು. ವೇದ ಶಿಬಿರದಲ್ಲಿ ಆಸಕ್ತಿಯಿಂದ ಭಾಗವಹಿಸಿ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದು ಮಾಣಿ ಪೆರಾಜೆ ಶ್ರೀ ರಾಮಚಂದ್ರಾಪುರ ಮಠದ ಆಡಳಿತ ಸಮಿತಿ ಅಧ್ಯಕ್ಷ ಹಾರಕೆರೆ ನಾರಾಯಣ ಭಟ್ ಹೇಳಿದರು.


ಅವರು ಪೆರಾಜೆ ಮಠದಲ್ಲಿ‌ ಏರ್ಪಡಿಸಲಾದ ವಸಂತ ವೇದ ಶಿಬಿರ 2025ರ‌ ಉದ್ಘಾಟನಾ ಸಮಾರಂಭದ‌ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವೇ.ಮೂ.ಕಾಂಚನ ಕೃಷ್ಣ ಕುಮಾರ್ ಶಿಬಿರ ಉದ್ಘಾಟಿಸಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ನಮ್ಮ ಪೂರ್ವಜರು ಹಾಕಿಕೊಟ್ಟ ಸಂಸ್ಕಾರದಂತೆ ವೇದಗಳ ಅಧ್ಯಯನ ಮಾಡುವ ಮೂಲಕ ಜ್ಞಾನ ‌ಭಂಡಾರ ಹೆಚ್ಚಿಸಿಕೊಳಬೇಕು. ಕಲಿತ ವಿದ್ಯೆ ಭದ್ರಪಡಿಸಲು ಮತ್ತೆಮತ್ತೆ ಅಧ್ಯಯನ ಮಾಡುವುದು ಅಗತ್ಯ ಎಂದರು.
ಸಂಪನ್ಮೂಲ ವ್ಯಕ್ತಿ ಅಶೋಕೆಯ ವಿಷ್ಣುಗುಪ್ತ ವಿಶ್ವವಿದ್ಯಾಲಯದ ಪ್ರಮುಖ ಗುರು ಉಂಡೆಮನೆ ವಿಶ್ವೇಶ್ವರ ಭಟ್ ಮುಖ್ಯ ‌ಅತಿಥಿಯಾಗಿ ಮಾತನಾಡಿದರು. ಮಕ್ಕಳ ಸಾಮರ್ಥ್ಯ ಸದ್ಬಳಕೆಯಾಗುವಂತೆ ಹೆತ್ತವರು ವ್ಯವಸ್ಥೆ ಮಾಡಬೇಕು. ಸೋಲನ್ನೂ ಸವಾಲಾಗಿ ಸ್ವೀಕರಿಸುವ ಧೈರ್ಯವನ್ನು ಮಕ್ಕಳಲ್ಲಿ ಬೆಳೆಸಬೇಕು.ಬುದ್ಧಿ ವಂತಿಕೆಯೊಂದಿಗೆ ಹೃದಯವಂತಿಕೆಯೂ ಮುಖ್ಯವೆಂದರು.
ಯೋಗಶಿಕ್ಷಕ ವೆಂಕಟರಮಣ ಹೆಗಡೆ ಮಾತನಾಡಿ ಯೋಗದ ಮಹತ್ವ ತಿಳಿಸಿದರು.
ಪ್ರಧಾನ ಅರ್ಚಕ ವೇಮೂ. ವಿಘ್ನೇಶ್ವರ ಭಟ್ ,ವೇಮೂ. ಮಿತ್ತೂರು ಸತ್ಯಶಂಕರ ಭಟ್, ಕಾರ್ಯದರ್ಶಿ ಶಿವ ಪ್ರಸಾದ ಉಪಸ್ಥಿತರಿದ್ದರು.
ನಾರಾಯಣ ಭಟ್ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.
ವೇಮೂ. ಭಾರ್ಗವ ನಾರಾಯಣ ನಿರೂಪಿಸಿದರು. ಸಂಸ್ಕೃತ ಅಧ್ಯಾಪಕ ಶ್ರೀಹರಿ ಭಟ್ ವಂದಿಸಿದರು. ಒಂದು‌ ತಿಂಗಳು 50 ವಿದ್ಯಾರ್ಥಿಗಳಗೆ ವೇದಾಧ್ಯಯನದೊಂದಿಗೆ ನೈಮಿತ್ತಿಕ ಹಾಗೂ ವ್ಯಕ್ತಿತ್ವ ಬೆಳೆವಣಿಗೆಗೆ ಪೂರಕವಾದ ವಿಷಯಗಳನ್ನು ಶಿಕ್ಷಕರು ಕಲಿಸಿಕೊಡುವರು.

ಇತ್ತೀಚಿನ ಸುದ್ದಿ

ಜಾಹೀರಾತು