1:34 PM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಮಾಣಿ ಮಠದಲ್ಲಿ ವಸಂತ ವೇದ ಶಿಬಿರ ಉದ್ಘಾಟನೆ; ಶಿಸ್ತು,ಶ್ರದ್ಧೆ ಕಲಿಕೆಗೆ ಪೂರಕ: ಹಾರಕೆರೆ ನಾರಾಯಣ ಭಟ್

16/04/2025, 11:50

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ವಿದ್ಯಾರ್ಥಿಗಳು ಶಿಸ್ತು ರೂಢಿಸಿಕೊಂಡು ಶ್ರದ್ಧೆಯಿಂದ ಕಲಿಯಬೇಕು. ವೇದ ಶಿಬಿರದಲ್ಲಿ ಆಸಕ್ತಿಯಿಂದ ಭಾಗವಹಿಸಿ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದು ಮಾಣಿ ಪೆರಾಜೆ ಶ್ರೀ ರಾಮಚಂದ್ರಾಪುರ ಮಠದ ಆಡಳಿತ ಸಮಿತಿ ಅಧ್ಯಕ್ಷ ಹಾರಕೆರೆ ನಾರಾಯಣ ಭಟ್ ಹೇಳಿದರು.


ಅವರು ಪೆರಾಜೆ ಮಠದಲ್ಲಿ‌ ಏರ್ಪಡಿಸಲಾದ ವಸಂತ ವೇದ ಶಿಬಿರ 2025ರ‌ ಉದ್ಘಾಟನಾ ಸಮಾರಂಭದ‌ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವೇ.ಮೂ.ಕಾಂಚನ ಕೃಷ್ಣ ಕುಮಾರ್ ಶಿಬಿರ ಉದ್ಘಾಟಿಸಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ನಮ್ಮ ಪೂರ್ವಜರು ಹಾಕಿಕೊಟ್ಟ ಸಂಸ್ಕಾರದಂತೆ ವೇದಗಳ ಅಧ್ಯಯನ ಮಾಡುವ ಮೂಲಕ ಜ್ಞಾನ ‌ಭಂಡಾರ ಹೆಚ್ಚಿಸಿಕೊಳಬೇಕು. ಕಲಿತ ವಿದ್ಯೆ ಭದ್ರಪಡಿಸಲು ಮತ್ತೆಮತ್ತೆ ಅಧ್ಯಯನ ಮಾಡುವುದು ಅಗತ್ಯ ಎಂದರು.
ಸಂಪನ್ಮೂಲ ವ್ಯಕ್ತಿ ಅಶೋಕೆಯ ವಿಷ್ಣುಗುಪ್ತ ವಿಶ್ವವಿದ್ಯಾಲಯದ ಪ್ರಮುಖ ಗುರು ಉಂಡೆಮನೆ ವಿಶ್ವೇಶ್ವರ ಭಟ್ ಮುಖ್ಯ ‌ಅತಿಥಿಯಾಗಿ ಮಾತನಾಡಿದರು. ಮಕ್ಕಳ ಸಾಮರ್ಥ್ಯ ಸದ್ಬಳಕೆಯಾಗುವಂತೆ ಹೆತ್ತವರು ವ್ಯವಸ್ಥೆ ಮಾಡಬೇಕು. ಸೋಲನ್ನೂ ಸವಾಲಾಗಿ ಸ್ವೀಕರಿಸುವ ಧೈರ್ಯವನ್ನು ಮಕ್ಕಳಲ್ಲಿ ಬೆಳೆಸಬೇಕು.ಬುದ್ಧಿ ವಂತಿಕೆಯೊಂದಿಗೆ ಹೃದಯವಂತಿಕೆಯೂ ಮುಖ್ಯವೆಂದರು.
ಯೋಗಶಿಕ್ಷಕ ವೆಂಕಟರಮಣ ಹೆಗಡೆ ಮಾತನಾಡಿ ಯೋಗದ ಮಹತ್ವ ತಿಳಿಸಿದರು.
ಪ್ರಧಾನ ಅರ್ಚಕ ವೇಮೂ. ವಿಘ್ನೇಶ್ವರ ಭಟ್ ,ವೇಮೂ. ಮಿತ್ತೂರು ಸತ್ಯಶಂಕರ ಭಟ್, ಕಾರ್ಯದರ್ಶಿ ಶಿವ ಪ್ರಸಾದ ಉಪಸ್ಥಿತರಿದ್ದರು.
ನಾರಾಯಣ ಭಟ್ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.
ವೇಮೂ. ಭಾರ್ಗವ ನಾರಾಯಣ ನಿರೂಪಿಸಿದರು. ಸಂಸ್ಕೃತ ಅಧ್ಯಾಪಕ ಶ್ರೀಹರಿ ಭಟ್ ವಂದಿಸಿದರು. ಒಂದು‌ ತಿಂಗಳು 50 ವಿದ್ಯಾರ್ಥಿಗಳಗೆ ವೇದಾಧ್ಯಯನದೊಂದಿಗೆ ನೈಮಿತ್ತಿಕ ಹಾಗೂ ವ್ಯಕ್ತಿತ್ವ ಬೆಳೆವಣಿಗೆಗೆ ಪೂರಕವಾದ ವಿಷಯಗಳನ್ನು ಶಿಕ್ಷಕರು ಕಲಿಸಿಕೊಡುವರು.

ಇತ್ತೀಚಿನ ಸುದ್ದಿ

ಜಾಹೀರಾತು