11:54 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ವಸತಿ ಶಾಲೆಯ ಗಣಿತ ಶಿಕ್ಷಕನ ಕಾಮದಾಟ: ಅಪ್ರಾಪ್ತ ವಿದ್ಯಾರ್ಥಿನಿಯರ ಜತೆ ಅಶ್ಲೀಲ ವರ್ತನೆ; ಹೆತ್ತವರ ಆಕ್ರೋಶ

14/10/2021, 19:37

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯಲ್ಲಿ ವಸತಿ ಶಾಲೆಯೊಂದರ ಗಣಿತ ಶಿಕ್ಷಣ ಕಾಮ ಪುರಾಣ ಬಿಚ್ಚಿಕೊಂಡಿದೆ. ಹೈಸ್ಕೂಲ್ ನಲ್ಲಿ ಕಲಿಯುತ್ತಿರುವ ಹದಿಹರೆಯದ ವಿದ್ಯಾರ್ಥಿನಿಯರ ಜತೆ ಈತನ ಅಶ್ಲೀಲ, ಅಸಭ್ಯ ವರ್ತನೆ ಬಯಲಾಗಿದೆ. ತನ್ನ ಕಾಮಾಯಣ ಬಯಲಾಗುತ್ತಿದ್ದಂತೆ ಶಿಕ್ಷಕ ಪರಾರಿಯಾಗಿದ್ದಾನೆ.

ಮಸ್ಕಿ ತಾಲೂಕಿನ ವಟಗಲ್ ಗ್ರಾಮದ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಸುಶಿಕ್ಷಿತ ಸಮಾಜ ತಲೆ ತಗ್ಗಿಸುವ ಘಟನೆ ನಡೆದಿದೆ. ಇಲ್ಲಿ ಅತಿಥಿ ಗಣಿತ ಶಿಕ್ಷಕ ತನ್ನ ವಿದ್ಯಾರ್ಥಿನಿಯರ ಜತೆ ಅಸಹ್ಯವಾಗಿ ವರ್ತಿಸಿರುವ ವೀಡಿಯೊ ಬಯಲಾಗಿದೆ.

ಕಷ್ಟಪಟ್ಟು ಓದಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಬಡ ಹೆಣ್ಮಕ್ಕಳು ವಸತಿ ಶಾಲೆಯ ಪ್ರವೇಶ ಪಡೆಯುತ್ತಾರೆ. ಮನೆಯವರು ಕೂಡ ತಮ್ಮ ಮಕ್ಕಳು ಸುರಕ್ಷಿತವಾಗಿ ಶಿಕ್ಷಣ ಪಡೆಯುತ್ತಾರೆ ಎಂಬ ನಂಬಿಕೆ ಹೊಂದಿರುತ್ತಾರೆ. ಆದರೆ ಬೇಲಿಯೇ ಎದ್ದು ಹೊಲ ಮೇಯ್ದರೆ ಏನು ಮಾಡಲು ಸಾಧ್ಯ? ಶಿಕ್ಷಣ ಕೊಡಬೇಕಾದ, ತನ್ನ ವಿದ್ಯಾರ್ಥಿಗಳನ್ನು ತನ್ನ ಮಕ್ಕಳಂತೆ ಜೋಪಾನ ಮಾಡಬೇಕಾದ ಶಿಕ್ಷಕನೇ ಹಲ್ಕಾ ಕೆಲಸಕ್ಕೆ ಕೈಹಾಕಿ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದ್ದಾನೆ.

ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪ್ರೌಢಾವಸ್ಥೆಗೆ ಬಂದಿರುವ 7,8 ,9, ಮತ್ತು 10 ನೇ ತರಗತಿಗಳಲ್ಲಿ ಕಲಿಯುತ್ತಿರುವ ಹೆಣ್ಮಕ್ಕಳಿದ್ದಾರೆ. ಆದರೆ ಇಲ್ಲಿನ ಗಣಿತ ಶಿಕ್ಷಕನ ವಿದ್ಯಾರ್ಥಿನಿಯರ ಜತೆ ಅಶ್ಲೀಲವಾಗಿ, ಅಸಭ್ಯವಾಗಿ ನಡೆದು ಕೊಳ್ಳುತ್ತಿರುವ ವಿಡಿಯೋ ಕೆಲವು ದಿನಗಳಿಂದ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ. ಇದನ್ನು ಕಂಡು ಹೌಹಾರಿದ ಶಿಕ್ಷಕ ಇಂದು ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಇನ್ನು ಈ ಶಿಕ್ಷಕನ ದುರ್ವರ್ತನೆ ಕಂಡ ಗ್ರಾಮಸ್ಥರು ವಸತಿ ನಿಲಯಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಕೆಟ್ಟ ಶಿಕ್ಷಕರನ್ನು ಅಮಾನತು ಮಾಡಿ ಕಾನೂನು ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದ್ದಾರೆ.

ಹೆಣ್ಣು ಮಕ್ಕಳ ಜತೆ ಅಸಹ್ಯವಾಗಿ ವರ್ತಿಸುವ ಶಿಕ್ಷಕನನ್ನು ತಕ್ಷಣ ಅಮಾನತು ಮಾಡಿ ಕಠಿಣ ಕ್ರಮ ಕೈಗೊಳ್ಳಿ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಅನಿತಾ ಬಿ ಮಂತ್ರಿ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು