7:20 PM Sunday21 - September 2025
ಬ್ರೇಕಿಂಗ್ ನ್ಯೂಸ್
ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ…

ಇತ್ತೀಚಿನ ಸುದ್ದಿ

ವಸತಿ ಶಾಲೆ ವಿದ್ಯಾರ್ಥಿ ನಿಯರ ಮೇಲೆ ಲೈಂಗಿಕ ದೌರ್ಜನ್ಯ; ಅಮಲು ಬರುವ ಔಷಧ ನೀಡಿ ಅತ್ಯಾಚಾರ; 3 ಮಂದಿ ಬಂಧನ

11/11/2023, 10:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಸತಿ ಶಾಲೆಯ ವಿದ್ಯಾರ್ಥಿ ನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅವರನ್ನು ಹಸಿಮಾಂಸದ ದಂಧೆಗೆ ದೂಡಿದ ಆಘಾತಕಾರಿ ಘಟನೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ. ಶಿಕ್ಷಣ ಇಲಾಖೆಯೇ ತಲೆತಗ್ಗಿಸುವ ಘನಘೋರ ಕೃತ್ಯ ಇದಾಗಿದೆ.
ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಪ್ಯಾರಾ ನರ್ಸಿಂಗ್ ಕೋರ್ಸ್ ಹೆಸರಲ್ಲಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ವಿದ್ಯಾರ್ಥಿನಿಯರಿಗೆ ಅಮಲು ಬರಿಸುವ ಔಷಧಿ ನೀಡಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಘಟನೆ ಸಂಬಂಧಿಸಿದಂತೆ ಮೂವರನ್ನು ಕಡೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ವಸತಿ ಶಾಲೆಯ ಡಿ ದರ್ಜೆ ನೌಕರ ಸುರೇಶ್, ನರ್ಸ್ ಚಂದನಾ ಹಾಗೂ ನರ್ಸ್ ಪ್ರಿಯಕರ ವಿನಯ್ ಎಂದು ತಿಳಿದು ಬಂದಿದೆ.
ಆರೋಪಿಗಳು ವಸತಿ ಶಾಲೆಯ ಹಲವು ಮಕ್ಕಳನ್ನ ಬಳಸಿಕೊಂಡಿರುವ ಆರೋಪ‌ವಿದೆ.
ತಿಂಗಳುಗಳಿಂದ ನಡೆಯುತ್ತಿರುವ ಕೃತ್ಯ ಇದಾಗಿದೆ ಪೊಲೀಸರ ತನಿಖೆಯಿಂದ ಬಯಲಾಗಿದೆ.
ಸುರೇಶ್ ಪ್ಯಾರಾ ಮೆಡಿಕಲ್ ಕೋರ್ಸ್‌ ಕೊಡಿಸುತ್ತೇನೆ ಎಂದು ಪುಸಲಾಯಿಸುತ್ತಿದ್ದ.
ಪರೀಕ್ಷೆಯಲ್ಲಿ ಪಾಸಾದರೆ ಕೆಲಸ ಸಿಗುತ್ತದೆ ಎಂದು ನಂಬಿಸುತ್ತಿದ್ದ. ಒಪ್ಪಿದ ಮಕ್ಕಳ ಪೋಷಕರನ್ನು ನಂಬಿಸಿ ವಿದ್ಯಾರ್ಥಿನಿಯರನ್ನ ಚಂದನಾ ಬಳಿ ಕಳಿಸುತ್ತಿದ್ದ. ಚಂದನಾ ಆರೋಗ್ಯ ಕೇಂದ್ರಕ್ಕೆ ಬರುವ ವಿದ್ಯಾರ್ಥಿನಿಯರನ್ನ ಅಲ್ಲೇ ಉಳಿಸಿಕೊಳ್ಳುತ್ತಿದ್ದಳು.
ಕಾಫಿ-ಟಿಯಲ್ಲಿ ಮತ್ತು ಬರುವ ಔಷಧಿ ಬೆರೆಸಿ ವಿದ್ಯಾರ್ಥಿನಿಯರಿಗೆ ನೀಡುತ್ತಿದ್ದಳು.
ಅರೆಪ್ರಜ್ಞಾ ಸ್ಥಿತಿಯಲ್ಲಿದ್ದ ಮಕ್ಕಳ ಮೇಲೆ ಚಂದನಾ ಲವರ್ ವಿನಯ್ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು