12:51 PM Monday3 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆಯಿಂದ ಮಹಿಳಾ ದಿನಾಚರಣೆ

17/03/2023, 12:08

ಬಂಟ್ವಾಳ(reporterkarnataka.com):
ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆಯ ವತಿಯಿಂದ ಬಾಳ್ತೀಲ ಶ್ರೀಶೈಲ ಇಲ್ಲಿ ಬಹಳ ವಿಶಿಷ್ಟತೆಯನ್ನು ತೋರಿಸುವಂತಹ ಮಹಿಳಾ ದಿನಾಚರಣೆ ನಡೆಸಲಾಯಿತು.

ಸಂಸ್ಥೆಯ ಸಹಭಾಗಿತ್ವದಲ್ಲಿ,ಶ್ರೀಶೈಲ ಕಲಾನೃತ್ಯ ತರಬೇತಿ ,ಭಜನೆ ತರಬೇತಿ ಕಾರ್ಯಕ್ರಮದ ಉದ್ಘಾಟ ನೆಯನ್ನು ಮಾಡಲಾಯಿತು.ಯೋಗ ತರಬೇತಿ ಮಾತು ಅದರ ಉಪಯೋಗ ದ ಮಾಹಿತಿಯನ್ನು ತುಳಸಿ ಅವರು ನಡೆಸಿಕೊಟ್ಟರು. ಮಹಿಳಾ ಆರೋಗ್ಯ ಮಾಹಿತಿ ಕಾರ್ಯಗಾರ ಅಲ್ಲದೆ , ಗ್ರಾಮೀಣ ಮಹಿಳಾ ಸಾಧಕಿ ಶ್ರೀಮತಿ ತುಳಸಿ,
ನೀಲಮ್ಮ, ಹೊನ್ನಮ್ಮ ಅವರನ್ನು ಗೌರವಿಸಲಾಯಿತು. ನೀಲಮ್ಮ ಕಾರ್ಯಕ್ರಮ ದ ಉದ್ಘಾಟನೆ ಮಾಡಿದರು. ನ್ಯಾಯವಾದಿ, ಕರ್ನಾಟಕ ಸರಕಾರದ ಪ್ರತಿಷ್ಟಿತ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪುರಸ್ಕೃತರು,ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ಇದರ ಸಂಸ್ಥಾಪಕರು ಇವರು ಅಧ್ಯಕ್ಷತೆಯನ್ನು ವಹಿಸಿಕೊಂಡರು. ಶಾರದಾ ಜಿ ಬಂಗೇರ ಇವರು ಮಹಿಳೆಯರಿಗೆ ಪಾರ್ದಾನ , ಕಬಿತೆ ಯನ್ನು ಹೇಳಿದರು, ಡಾ. ರಾಜೇಶ್ ಪೂಜಾರಿ,ಭಾಸ್ಕರ್ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಶೌರ್ಯ ನಡೆಸಿಕೊಟ್ಟರು. ವಿವಿಧ ವೈವಿಧ್ಯಮಯ ಕಾರ್ಯಕ್ರಮ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು