2:06 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ವಯನಾಡು ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 289ಕ್ಕೆ ಏರಿಕೆ: 200 ಮಂದಿ ನಾಪತ್ತೆ; ಸೇನೆಯಿಂದ ಸೇತುವೆ ನಿರ್ಮಾಣ

01/08/2024, 22:28

ವಯನಾಡು(reporterkarnataka.com): ವಯನಾಡಿನಲ್ಲಿ ಸಂಭವಿಸಿದ ಭಾರೀ ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 289ಕ್ಕೆ ಏರಿದ್ದು, 100 ಮಂದಿಯ ಗುರುತು ಪತ್ತೆ ಹಚ್ಚಲಾಗಿದೆ. 200 ಮಂದಿ ನಾಪತ್ತೆಯಾಗಿದ್ದಾರೆ.
ಮೃತಪಟ್ಟವರಲ್ಲಿ 279 ಮರಣೋತ್ತರ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ. 100 ಜನರನ್ನು ಗುರುತಿಸಲಾಗಿದೆ. ದೃಢಪಡಿಸಿದ ಸಾವುಗಳಲ್ಲಿ 27 ಮಕ್ಕಳು ಸೇರಿದ್ದಾರೆ.
ಘೋರ ದುರಂತದಲ್ಲಿ 200 ಮಂದಿ ನಾಪತ್ತೆಯಾಗಿದ್ದಾರೆ. ಅವರಲ್ಲಿ 29 ಮಕ್ಕಳು ಸೇರಿದ್ದಾರೆ. 142 ಜನರನ್ನು ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಭೂಕುಸಿತದಿಂದ ಮನೆಗಳು ಸೇರಿದಂತೆ 348 ಕಟ್ಟಡಗಳು ಹಾನಿಗೀಡಾಗಿವೆ. ರಕ್ಷಣಾ ಕಾರ್ಯಾಚರಣೆಗಾಗಿ ಸೇನೆ ನಿರ್ಮಿಸಿದ್ದ ಬೈಲಿ ಸೇತುವೆಯನ್ನು ತೆರೆಯಲಾಗಿದೆ. ವಾಹನಗಳು ಸಂಚರಿಸಿದವು. ಹಿಟಾಚಿ ಸೇರಿದಂತೆ ಹೆಚ್ಚಿನ ದೊಡ್ಡ ವಾಹನಗಳು ಹಾಗೂ ಉಪಕರಣಗಳನ್ನು ತಂದು ಶೋಧ ಕಾರ್ಯ ತೀವ್ರಗೊಳಿಸಲಾಗುವುದು. ಚುರಲ್ ಮಲೆ ಮತ್ತು ಮುಂಡಕೈ ಸಂಪರ್ಕ ಕಲ್ಪಿಸಲಾಗುವುದು. ಸೇನೆಯ ಎಂಜಿನಿಯರಿಂಗ್ ವಿಭಾಗವು 40 ಗಂಟೆಗಳಲ್ಲಿ ಸೇತುವೆಯ ನಿರ್ಮಾಣವನ್ನು ಪೂರ್ಣಗೊಳಿಸಿದೆ. ಸೇತುವೆ 190 ಅಡಿ ಉದ್ದವಿದೆ. 24 ಟನ್ ಭಾರವನ್ನು ಹೊತ್ತೊಯ್ಯುವ ಸಾಮರ್ಥ್ಯದ ಸೇತುವೆ ಪೂರ್ಣಗೊಂಡರೆ, ರಕ್ಷಣಾ ಕಾರ್ಯಾಚರಣೆಗೆ ಅಗತ್ಯವಿರುವ ಭಾರೀ ಯಂತ್ರೋಪಕರಣಗಳನ್ನು 10 ಅಡಿ ಗರ್ಡರ್‌ಗಳನ್ನು ಬಳಸಿ ಸೇತುವೆಯನ್ನು ನಿರ್ಮಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು