2:32 AM Saturday10 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ವಯನಾಡು ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 289ಕ್ಕೆ ಏರಿಕೆ: 200 ಮಂದಿ ನಾಪತ್ತೆ; ಸೇನೆಯಿಂದ ಸೇತುವೆ ನಿರ್ಮಾಣ

01/08/2024, 22:28

ವಯನಾಡು(reporterkarnataka.com): ವಯನಾಡಿನಲ್ಲಿ ಸಂಭವಿಸಿದ ಭಾರೀ ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 289ಕ್ಕೆ ಏರಿದ್ದು, 100 ಮಂದಿಯ ಗುರುತು ಪತ್ತೆ ಹಚ್ಚಲಾಗಿದೆ. 200 ಮಂದಿ ನಾಪತ್ತೆಯಾಗಿದ್ದಾರೆ.
ಮೃತಪಟ್ಟವರಲ್ಲಿ 279 ಮರಣೋತ್ತರ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ. 100 ಜನರನ್ನು ಗುರುತಿಸಲಾಗಿದೆ. ದೃಢಪಡಿಸಿದ ಸಾವುಗಳಲ್ಲಿ 27 ಮಕ್ಕಳು ಸೇರಿದ್ದಾರೆ.
ಘೋರ ದುರಂತದಲ್ಲಿ 200 ಮಂದಿ ನಾಪತ್ತೆಯಾಗಿದ್ದಾರೆ. ಅವರಲ್ಲಿ 29 ಮಕ್ಕಳು ಸೇರಿದ್ದಾರೆ. 142 ಜನರನ್ನು ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಭೂಕುಸಿತದಿಂದ ಮನೆಗಳು ಸೇರಿದಂತೆ 348 ಕಟ್ಟಡಗಳು ಹಾನಿಗೀಡಾಗಿವೆ. ರಕ್ಷಣಾ ಕಾರ್ಯಾಚರಣೆಗಾಗಿ ಸೇನೆ ನಿರ್ಮಿಸಿದ್ದ ಬೈಲಿ ಸೇತುವೆಯನ್ನು ತೆರೆಯಲಾಗಿದೆ. ವಾಹನಗಳು ಸಂಚರಿಸಿದವು. ಹಿಟಾಚಿ ಸೇರಿದಂತೆ ಹೆಚ್ಚಿನ ದೊಡ್ಡ ವಾಹನಗಳು ಹಾಗೂ ಉಪಕರಣಗಳನ್ನು ತಂದು ಶೋಧ ಕಾರ್ಯ ತೀವ್ರಗೊಳಿಸಲಾಗುವುದು. ಚುರಲ್ ಮಲೆ ಮತ್ತು ಮುಂಡಕೈ ಸಂಪರ್ಕ ಕಲ್ಪಿಸಲಾಗುವುದು. ಸೇನೆಯ ಎಂಜಿನಿಯರಿಂಗ್ ವಿಭಾಗವು 40 ಗಂಟೆಗಳಲ್ಲಿ ಸೇತುವೆಯ ನಿರ್ಮಾಣವನ್ನು ಪೂರ್ಣಗೊಳಿಸಿದೆ. ಸೇತುವೆ 190 ಅಡಿ ಉದ್ದವಿದೆ. 24 ಟನ್ ಭಾರವನ್ನು ಹೊತ್ತೊಯ್ಯುವ ಸಾಮರ್ಥ್ಯದ ಸೇತುವೆ ಪೂರ್ಣಗೊಂಡರೆ, ರಕ್ಷಣಾ ಕಾರ್ಯಾಚರಣೆಗೆ ಅಗತ್ಯವಿರುವ ಭಾರೀ ಯಂತ್ರೋಪಕರಣಗಳನ್ನು 10 ಅಡಿ ಗರ್ಡರ್‌ಗಳನ್ನು ಬಳಸಿ ಸೇತುವೆಯನ್ನು ನಿರ್ಮಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು