12:57 PM Thursday25 - December 2025
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ!

ಇತ್ತೀಚಿನ ಸುದ್ದಿ

ವಯನಾಡು ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 289ಕ್ಕೆ ಏರಿಕೆ: 200 ಮಂದಿ ನಾಪತ್ತೆ; ಸೇನೆಯಿಂದ ಸೇತುವೆ ನಿರ್ಮಾಣ

01/08/2024, 22:28

ವಯನಾಡು(reporterkarnataka.com): ವಯನಾಡಿನಲ್ಲಿ ಸಂಭವಿಸಿದ ಭಾರೀ ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 289ಕ್ಕೆ ಏರಿದ್ದು, 100 ಮಂದಿಯ ಗುರುತು ಪತ್ತೆ ಹಚ್ಚಲಾಗಿದೆ. 200 ಮಂದಿ ನಾಪತ್ತೆಯಾಗಿದ್ದಾರೆ.
ಮೃತಪಟ್ಟವರಲ್ಲಿ 279 ಮರಣೋತ್ತರ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ. 100 ಜನರನ್ನು ಗುರುತಿಸಲಾಗಿದೆ. ದೃಢಪಡಿಸಿದ ಸಾವುಗಳಲ್ಲಿ 27 ಮಕ್ಕಳು ಸೇರಿದ್ದಾರೆ.
ಘೋರ ದುರಂತದಲ್ಲಿ 200 ಮಂದಿ ನಾಪತ್ತೆಯಾಗಿದ್ದಾರೆ. ಅವರಲ್ಲಿ 29 ಮಕ್ಕಳು ಸೇರಿದ್ದಾರೆ. 142 ಜನರನ್ನು ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಭೂಕುಸಿತದಿಂದ ಮನೆಗಳು ಸೇರಿದಂತೆ 348 ಕಟ್ಟಡಗಳು ಹಾನಿಗೀಡಾಗಿವೆ. ರಕ್ಷಣಾ ಕಾರ್ಯಾಚರಣೆಗಾಗಿ ಸೇನೆ ನಿರ್ಮಿಸಿದ್ದ ಬೈಲಿ ಸೇತುವೆಯನ್ನು ತೆರೆಯಲಾಗಿದೆ. ವಾಹನಗಳು ಸಂಚರಿಸಿದವು. ಹಿಟಾಚಿ ಸೇರಿದಂತೆ ಹೆಚ್ಚಿನ ದೊಡ್ಡ ವಾಹನಗಳು ಹಾಗೂ ಉಪಕರಣಗಳನ್ನು ತಂದು ಶೋಧ ಕಾರ್ಯ ತೀವ್ರಗೊಳಿಸಲಾಗುವುದು. ಚುರಲ್ ಮಲೆ ಮತ್ತು ಮುಂಡಕೈ ಸಂಪರ್ಕ ಕಲ್ಪಿಸಲಾಗುವುದು. ಸೇನೆಯ ಎಂಜಿನಿಯರಿಂಗ್ ವಿಭಾಗವು 40 ಗಂಟೆಗಳಲ್ಲಿ ಸೇತುವೆಯ ನಿರ್ಮಾಣವನ್ನು ಪೂರ್ಣಗೊಳಿಸಿದೆ. ಸೇತುವೆ 190 ಅಡಿ ಉದ್ದವಿದೆ. 24 ಟನ್ ಭಾರವನ್ನು ಹೊತ್ತೊಯ್ಯುವ ಸಾಮರ್ಥ್ಯದ ಸೇತುವೆ ಪೂರ್ಣಗೊಂಡರೆ, ರಕ್ಷಣಾ ಕಾರ್ಯಾಚರಣೆಗೆ ಅಗತ್ಯವಿರುವ ಭಾರೀ ಯಂತ್ರೋಪಕರಣಗಳನ್ನು 10 ಅಡಿ ಗರ್ಡರ್‌ಗಳನ್ನು ಬಳಸಿ ಸೇತುವೆಯನ್ನು ನಿರ್ಮಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು