11:08 PM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ವಯನಾಡು ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 289ಕ್ಕೆ ಏರಿಕೆ: 200 ಮಂದಿ ನಾಪತ್ತೆ; ಸೇನೆಯಿಂದ ಸೇತುವೆ ನಿರ್ಮಾಣ

01/08/2024, 22:28

ವಯನಾಡು(reporterkarnataka.com): ವಯನಾಡಿನಲ್ಲಿ ಸಂಭವಿಸಿದ ಭಾರೀ ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 289ಕ್ಕೆ ಏರಿದ್ದು, 100 ಮಂದಿಯ ಗುರುತು ಪತ್ತೆ ಹಚ್ಚಲಾಗಿದೆ. 200 ಮಂದಿ ನಾಪತ್ತೆಯಾಗಿದ್ದಾರೆ.
ಮೃತಪಟ್ಟವರಲ್ಲಿ 279 ಮರಣೋತ್ತರ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ. 100 ಜನರನ್ನು ಗುರುತಿಸಲಾಗಿದೆ. ದೃಢಪಡಿಸಿದ ಸಾವುಗಳಲ್ಲಿ 27 ಮಕ್ಕಳು ಸೇರಿದ್ದಾರೆ.
ಘೋರ ದುರಂತದಲ್ಲಿ 200 ಮಂದಿ ನಾಪತ್ತೆಯಾಗಿದ್ದಾರೆ. ಅವರಲ್ಲಿ 29 ಮಕ್ಕಳು ಸೇರಿದ್ದಾರೆ. 142 ಜನರನ್ನು ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಭೂಕುಸಿತದಿಂದ ಮನೆಗಳು ಸೇರಿದಂತೆ 348 ಕಟ್ಟಡಗಳು ಹಾನಿಗೀಡಾಗಿವೆ. ರಕ್ಷಣಾ ಕಾರ್ಯಾಚರಣೆಗಾಗಿ ಸೇನೆ ನಿರ್ಮಿಸಿದ್ದ ಬೈಲಿ ಸೇತುವೆಯನ್ನು ತೆರೆಯಲಾಗಿದೆ. ವಾಹನಗಳು ಸಂಚರಿಸಿದವು. ಹಿಟಾಚಿ ಸೇರಿದಂತೆ ಹೆಚ್ಚಿನ ದೊಡ್ಡ ವಾಹನಗಳು ಹಾಗೂ ಉಪಕರಣಗಳನ್ನು ತಂದು ಶೋಧ ಕಾರ್ಯ ತೀವ್ರಗೊಳಿಸಲಾಗುವುದು. ಚುರಲ್ ಮಲೆ ಮತ್ತು ಮುಂಡಕೈ ಸಂಪರ್ಕ ಕಲ್ಪಿಸಲಾಗುವುದು. ಸೇನೆಯ ಎಂಜಿನಿಯರಿಂಗ್ ವಿಭಾಗವು 40 ಗಂಟೆಗಳಲ್ಲಿ ಸೇತುವೆಯ ನಿರ್ಮಾಣವನ್ನು ಪೂರ್ಣಗೊಳಿಸಿದೆ. ಸೇತುವೆ 190 ಅಡಿ ಉದ್ದವಿದೆ. 24 ಟನ್ ಭಾರವನ್ನು ಹೊತ್ತೊಯ್ಯುವ ಸಾಮರ್ಥ್ಯದ ಸೇತುವೆ ಪೂರ್ಣಗೊಂಡರೆ, ರಕ್ಷಣಾ ಕಾರ್ಯಾಚರಣೆಗೆ ಅಗತ್ಯವಿರುವ ಭಾರೀ ಯಂತ್ರೋಪಕರಣಗಳನ್ನು 10 ಅಡಿ ಗರ್ಡರ್‌ಗಳನ್ನು ಬಳಸಿ ಸೇತುವೆಯನ್ನು ನಿರ್ಮಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು