3:08 PM Friday19 - December 2025
ಬ್ರೇಕಿಂಗ್ ನ್ಯೂಸ್
ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ

ಇತ್ತೀಚಿನ ಸುದ್ದಿ

ವಯನಾಡು ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 289ಕ್ಕೆ ಏರಿಕೆ: 200 ಮಂದಿ ನಾಪತ್ತೆ; ಸೇನೆಯಿಂದ ಸೇತುವೆ ನಿರ್ಮಾಣ

01/08/2024, 22:28

ವಯನಾಡು(reporterkarnataka.com): ವಯನಾಡಿನಲ್ಲಿ ಸಂಭವಿಸಿದ ಭಾರೀ ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 289ಕ್ಕೆ ಏರಿದ್ದು, 100 ಮಂದಿಯ ಗುರುತು ಪತ್ತೆ ಹಚ್ಚಲಾಗಿದೆ. 200 ಮಂದಿ ನಾಪತ್ತೆಯಾಗಿದ್ದಾರೆ.
ಮೃತಪಟ್ಟವರಲ್ಲಿ 279 ಮರಣೋತ್ತರ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ. 100 ಜನರನ್ನು ಗುರುತಿಸಲಾಗಿದೆ. ದೃಢಪಡಿಸಿದ ಸಾವುಗಳಲ್ಲಿ 27 ಮಕ್ಕಳು ಸೇರಿದ್ದಾರೆ.
ಘೋರ ದುರಂತದಲ್ಲಿ 200 ಮಂದಿ ನಾಪತ್ತೆಯಾಗಿದ್ದಾರೆ. ಅವರಲ್ಲಿ 29 ಮಕ್ಕಳು ಸೇರಿದ್ದಾರೆ. 142 ಜನರನ್ನು ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಭೂಕುಸಿತದಿಂದ ಮನೆಗಳು ಸೇರಿದಂತೆ 348 ಕಟ್ಟಡಗಳು ಹಾನಿಗೀಡಾಗಿವೆ. ರಕ್ಷಣಾ ಕಾರ್ಯಾಚರಣೆಗಾಗಿ ಸೇನೆ ನಿರ್ಮಿಸಿದ್ದ ಬೈಲಿ ಸೇತುವೆಯನ್ನು ತೆರೆಯಲಾಗಿದೆ. ವಾಹನಗಳು ಸಂಚರಿಸಿದವು. ಹಿಟಾಚಿ ಸೇರಿದಂತೆ ಹೆಚ್ಚಿನ ದೊಡ್ಡ ವಾಹನಗಳು ಹಾಗೂ ಉಪಕರಣಗಳನ್ನು ತಂದು ಶೋಧ ಕಾರ್ಯ ತೀವ್ರಗೊಳಿಸಲಾಗುವುದು. ಚುರಲ್ ಮಲೆ ಮತ್ತು ಮುಂಡಕೈ ಸಂಪರ್ಕ ಕಲ್ಪಿಸಲಾಗುವುದು. ಸೇನೆಯ ಎಂಜಿನಿಯರಿಂಗ್ ವಿಭಾಗವು 40 ಗಂಟೆಗಳಲ್ಲಿ ಸೇತುವೆಯ ನಿರ್ಮಾಣವನ್ನು ಪೂರ್ಣಗೊಳಿಸಿದೆ. ಸೇತುವೆ 190 ಅಡಿ ಉದ್ದವಿದೆ. 24 ಟನ್ ಭಾರವನ್ನು ಹೊತ್ತೊಯ್ಯುವ ಸಾಮರ್ಥ್ಯದ ಸೇತುವೆ ಪೂರ್ಣಗೊಂಡರೆ, ರಕ್ಷಣಾ ಕಾರ್ಯಾಚರಣೆಗೆ ಅಗತ್ಯವಿರುವ ಭಾರೀ ಯಂತ್ರೋಪಕರಣಗಳನ್ನು 10 ಅಡಿ ಗರ್ಡರ್‌ಗಳನ್ನು ಬಳಸಿ ಸೇತುವೆಯನ್ನು ನಿರ್ಮಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು