12:56 AM Wednesday29 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ವಯನಾಡು ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 289ಕ್ಕೆ ಏರಿಕೆ: 200 ಮಂದಿ ನಾಪತ್ತೆ; ಸೇನೆಯಿಂದ ಸೇತುವೆ ನಿರ್ಮಾಣ

01/08/2024, 22:28

ವಯನಾಡು(reporterkarnataka.com): ವಯನಾಡಿನಲ್ಲಿ ಸಂಭವಿಸಿದ ಭಾರೀ ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 289ಕ್ಕೆ ಏರಿದ್ದು, 100 ಮಂದಿಯ ಗುರುತು ಪತ್ತೆ ಹಚ್ಚಲಾಗಿದೆ. 200 ಮಂದಿ ನಾಪತ್ತೆಯಾಗಿದ್ದಾರೆ.
ಮೃತಪಟ್ಟವರಲ್ಲಿ 279 ಮರಣೋತ್ತರ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ. 100 ಜನರನ್ನು ಗುರುತಿಸಲಾಗಿದೆ. ದೃಢಪಡಿಸಿದ ಸಾವುಗಳಲ್ಲಿ 27 ಮಕ್ಕಳು ಸೇರಿದ್ದಾರೆ.
ಘೋರ ದುರಂತದಲ್ಲಿ 200 ಮಂದಿ ನಾಪತ್ತೆಯಾಗಿದ್ದಾರೆ. ಅವರಲ್ಲಿ 29 ಮಕ್ಕಳು ಸೇರಿದ್ದಾರೆ. 142 ಜನರನ್ನು ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಭೂಕುಸಿತದಿಂದ ಮನೆಗಳು ಸೇರಿದಂತೆ 348 ಕಟ್ಟಡಗಳು ಹಾನಿಗೀಡಾಗಿವೆ. ರಕ್ಷಣಾ ಕಾರ್ಯಾಚರಣೆಗಾಗಿ ಸೇನೆ ನಿರ್ಮಿಸಿದ್ದ ಬೈಲಿ ಸೇತುವೆಯನ್ನು ತೆರೆಯಲಾಗಿದೆ. ವಾಹನಗಳು ಸಂಚರಿಸಿದವು. ಹಿಟಾಚಿ ಸೇರಿದಂತೆ ಹೆಚ್ಚಿನ ದೊಡ್ಡ ವಾಹನಗಳು ಹಾಗೂ ಉಪಕರಣಗಳನ್ನು ತಂದು ಶೋಧ ಕಾರ್ಯ ತೀವ್ರಗೊಳಿಸಲಾಗುವುದು. ಚುರಲ್ ಮಲೆ ಮತ್ತು ಮುಂಡಕೈ ಸಂಪರ್ಕ ಕಲ್ಪಿಸಲಾಗುವುದು. ಸೇನೆಯ ಎಂಜಿನಿಯರಿಂಗ್ ವಿಭಾಗವು 40 ಗಂಟೆಗಳಲ್ಲಿ ಸೇತುವೆಯ ನಿರ್ಮಾಣವನ್ನು ಪೂರ್ಣಗೊಳಿಸಿದೆ. ಸೇತುವೆ 190 ಅಡಿ ಉದ್ದವಿದೆ. 24 ಟನ್ ಭಾರವನ್ನು ಹೊತ್ತೊಯ್ಯುವ ಸಾಮರ್ಥ್ಯದ ಸೇತುವೆ ಪೂರ್ಣಗೊಂಡರೆ, ರಕ್ಷಣಾ ಕಾರ್ಯಾಚರಣೆಗೆ ಅಗತ್ಯವಿರುವ ಭಾರೀ ಯಂತ್ರೋಪಕರಣಗಳನ್ನು 10 ಅಡಿ ಗರ್ಡರ್‌ಗಳನ್ನು ಬಳಸಿ ಸೇತುವೆಯನ್ನು ನಿರ್ಮಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು