4:03 PM Monday23 - March 2026
ಬ್ರೇಕಿಂಗ್ ನ್ಯೂಸ್
ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

ಇತ್ತೀಚಿನ ಸುದ್ದಿ

ವಯನಾಡು ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 289ಕ್ಕೆ ಏರಿಕೆ: 200 ಮಂದಿ ನಾಪತ್ತೆ; ಸೇನೆಯಿಂದ ಸೇತುವೆ ನಿರ್ಮಾಣ

01/08/2024, 22:28

ವಯನಾಡು(reporterkarnataka.com): ವಯನಾಡಿನಲ್ಲಿ ಸಂಭವಿಸಿದ ಭಾರೀ ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 289ಕ್ಕೆ ಏರಿದ್ದು, 100 ಮಂದಿಯ ಗುರುತು ಪತ್ತೆ ಹಚ್ಚಲಾಗಿದೆ. 200 ಮಂದಿ ನಾಪತ್ತೆಯಾಗಿದ್ದಾರೆ.
ಮೃತಪಟ್ಟವರಲ್ಲಿ 279 ಮರಣೋತ್ತರ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ. 100 ಜನರನ್ನು ಗುರುತಿಸಲಾಗಿದೆ. ದೃಢಪಡಿಸಿದ ಸಾವುಗಳಲ್ಲಿ 27 ಮಕ್ಕಳು ಸೇರಿದ್ದಾರೆ.
ಘೋರ ದುರಂತದಲ್ಲಿ 200 ಮಂದಿ ನಾಪತ್ತೆಯಾಗಿದ್ದಾರೆ. ಅವರಲ್ಲಿ 29 ಮಕ್ಕಳು ಸೇರಿದ್ದಾರೆ. 142 ಜನರನ್ನು ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಭೂಕುಸಿತದಿಂದ ಮನೆಗಳು ಸೇರಿದಂತೆ 348 ಕಟ್ಟಡಗಳು ಹಾನಿಗೀಡಾಗಿವೆ. ರಕ್ಷಣಾ ಕಾರ್ಯಾಚರಣೆಗಾಗಿ ಸೇನೆ ನಿರ್ಮಿಸಿದ್ದ ಬೈಲಿ ಸೇತುವೆಯನ್ನು ತೆರೆಯಲಾಗಿದೆ. ವಾಹನಗಳು ಸಂಚರಿಸಿದವು. ಹಿಟಾಚಿ ಸೇರಿದಂತೆ ಹೆಚ್ಚಿನ ದೊಡ್ಡ ವಾಹನಗಳು ಹಾಗೂ ಉಪಕರಣಗಳನ್ನು ತಂದು ಶೋಧ ಕಾರ್ಯ ತೀವ್ರಗೊಳಿಸಲಾಗುವುದು. ಚುರಲ್ ಮಲೆ ಮತ್ತು ಮುಂಡಕೈ ಸಂಪರ್ಕ ಕಲ್ಪಿಸಲಾಗುವುದು. ಸೇನೆಯ ಎಂಜಿನಿಯರಿಂಗ್ ವಿಭಾಗವು 40 ಗಂಟೆಗಳಲ್ಲಿ ಸೇತುವೆಯ ನಿರ್ಮಾಣವನ್ನು ಪೂರ್ಣಗೊಳಿಸಿದೆ. ಸೇತುವೆ 190 ಅಡಿ ಉದ್ದವಿದೆ. 24 ಟನ್ ಭಾರವನ್ನು ಹೊತ್ತೊಯ್ಯುವ ಸಾಮರ್ಥ್ಯದ ಸೇತುವೆ ಪೂರ್ಣಗೊಂಡರೆ, ರಕ್ಷಣಾ ಕಾರ್ಯಾಚರಣೆಗೆ ಅಗತ್ಯವಿರುವ ಭಾರೀ ಯಂತ್ರೋಪಕರಣಗಳನ್ನು 10 ಅಡಿ ಗರ್ಡರ್‌ಗಳನ್ನು ಬಳಸಿ ಸೇತುವೆಯನ್ನು ನಿರ್ಮಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು