3:01 AM Tuesday18 - November 2025
ಬ್ರೇಕಿಂಗ್ ನ್ಯೂಸ್
Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ವಯನಾಡು ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 289ಕ್ಕೆ ಏರಿಕೆ: 200 ಮಂದಿ ನಾಪತ್ತೆ; ಸೇನೆಯಿಂದ ಸೇತುವೆ ನಿರ್ಮಾಣ

01/08/2024, 22:28

ವಯನಾಡು(reporterkarnataka.com): ವಯನಾಡಿನಲ್ಲಿ ಸಂಭವಿಸಿದ ಭಾರೀ ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 289ಕ್ಕೆ ಏರಿದ್ದು, 100 ಮಂದಿಯ ಗುರುತು ಪತ್ತೆ ಹಚ್ಚಲಾಗಿದೆ. 200 ಮಂದಿ ನಾಪತ್ತೆಯಾಗಿದ್ದಾರೆ.
ಮೃತಪಟ್ಟವರಲ್ಲಿ 279 ಮರಣೋತ್ತರ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ. 100 ಜನರನ್ನು ಗುರುತಿಸಲಾಗಿದೆ. ದೃಢಪಡಿಸಿದ ಸಾವುಗಳಲ್ಲಿ 27 ಮಕ್ಕಳು ಸೇರಿದ್ದಾರೆ.
ಘೋರ ದುರಂತದಲ್ಲಿ 200 ಮಂದಿ ನಾಪತ್ತೆಯಾಗಿದ್ದಾರೆ. ಅವರಲ್ಲಿ 29 ಮಕ್ಕಳು ಸೇರಿದ್ದಾರೆ. 142 ಜನರನ್ನು ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಭೂಕುಸಿತದಿಂದ ಮನೆಗಳು ಸೇರಿದಂತೆ 348 ಕಟ್ಟಡಗಳು ಹಾನಿಗೀಡಾಗಿವೆ. ರಕ್ಷಣಾ ಕಾರ್ಯಾಚರಣೆಗಾಗಿ ಸೇನೆ ನಿರ್ಮಿಸಿದ್ದ ಬೈಲಿ ಸೇತುವೆಯನ್ನು ತೆರೆಯಲಾಗಿದೆ. ವಾಹನಗಳು ಸಂಚರಿಸಿದವು. ಹಿಟಾಚಿ ಸೇರಿದಂತೆ ಹೆಚ್ಚಿನ ದೊಡ್ಡ ವಾಹನಗಳು ಹಾಗೂ ಉಪಕರಣಗಳನ್ನು ತಂದು ಶೋಧ ಕಾರ್ಯ ತೀವ್ರಗೊಳಿಸಲಾಗುವುದು. ಚುರಲ್ ಮಲೆ ಮತ್ತು ಮುಂಡಕೈ ಸಂಪರ್ಕ ಕಲ್ಪಿಸಲಾಗುವುದು. ಸೇನೆಯ ಎಂಜಿನಿಯರಿಂಗ್ ವಿಭಾಗವು 40 ಗಂಟೆಗಳಲ್ಲಿ ಸೇತುವೆಯ ನಿರ್ಮಾಣವನ್ನು ಪೂರ್ಣಗೊಳಿಸಿದೆ. ಸೇತುವೆ 190 ಅಡಿ ಉದ್ದವಿದೆ. 24 ಟನ್ ಭಾರವನ್ನು ಹೊತ್ತೊಯ್ಯುವ ಸಾಮರ್ಥ್ಯದ ಸೇತುವೆ ಪೂರ್ಣಗೊಂಡರೆ, ರಕ್ಷಣಾ ಕಾರ್ಯಾಚರಣೆಗೆ ಅಗತ್ಯವಿರುವ ಭಾರೀ ಯಂತ್ರೋಪಕರಣಗಳನ್ನು 10 ಅಡಿ ಗರ್ಡರ್‌ಗಳನ್ನು ಬಳಸಿ ಸೇತುವೆಯನ್ನು ನಿರ್ಮಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು